AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾನ್, ಕಪೂರ್​ಗಳೇ ಒಜಿ​ಗಳು, ಹೊಸಬರು ಬಂದು ಫ್ರಾಂಚೈಸಿ ಕದಿಯುತ್ತಾರೆ’; ಕರಣ್ ಜೋಹರ್

ಕರಣ್ ಜೋಹರ್ ಮತ್ತು ಕಾರ್ತಿಕ್ ಆರ್ಯನ್ ನಡುವೆ ಈ ಮೊದಲು ಮನಸ್ತಾಪ ಇತ್ತು. ಆದರೆ, ಈಗ ಇಬ್ಬರ ಮಧ್ಯೆ ಸಮನ್ವಯ ಬಂದಿದೆ. ಕಾರ್ತಿಕ್ ಅವರನ್ನು ಚಿತ್ರದಿಂದ ಹೊರಗಿಟ್ಟಿದ್ದ ಕರಣ್, ಈಗ ಅವರ ಯಶಸ್ಸನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. "ಭೂಲ್ ಭುಲಯ್ಯ 2"ನ ಯಶಸ್ಸು ಮತ್ತು ಕರಣ್ ಅವರ "ಕಿಂಗ್ ಮೇಕರ್" ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಕಾರಣವಾಗಿವೆ.

‘ಖಾನ್, ಕಪೂರ್​ಗಳೇ ಒಜಿ​ಗಳು, ಹೊಸಬರು ಬಂದು ಫ್ರಾಂಚೈಸಿ ಕದಿಯುತ್ತಾರೆ’; ಕರಣ್ ಜೋಹರ್
ಕರಣ್​-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Mar 18, 2025 | 7:35 AM

Share

ಕರಣ್ ಜೋಹರ್ (Karan Johar) ಹಾಗೂ ಕಾರ್ತಿಕ್ ಆರ್ಯನ್ ಮಧ್ಯೆ ಸಾಕಷ್ಟು ಮನಸ್ತಾಪಗಳು ಇದ್ದವು. ಕಾರ್ತಿಕ್ ಆರ್ಯನ್ ಅವರನ್ನು ಸಿನಿಮಾ ಒಂದರಿಂದ ಕರಣ್ ಜೋಹರ್ ಹೊರಕ್ಕೆ ಇಟ್ಟಿದ್ದರು. ಕಾರ್ತಿಕ್ ಆರ್ಯನ್ ಹೊರಗಿನ ವ್ಯಕ್ತಿ ಎಂದು ಯಾವಾಗಲೂ ಅಂದುಕೊಳ್ಳುತ್ತಲೇ ಬರುತ್ತಿದ್ದ ಕರಣ್ ಜೋಹರ್ ಈಗ ಬದಲಾದಂತೆ ಕಾಣುತ್ತಿದ್ದಾರೆ. ಈಗ ಒಬ್ಬರ ಕಾಲನ್ನು ಮತ್ತೊಬ್ಬರು ಎಳೆದುಕೊಂಡಿದ್ದಾರೆ. ಈ ಸಂದರ್ಭ ಸಂಭಾಷಣೆಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ.

‘ನಾನು ನಿಮಗೆ ರಾಜಮನೆತನದವರನ್ನು ಪರಿಚಯಿಸುತ್ತೇನೆ. ಇಲ್ಲಿ ಖಾನ್ ಹಾಗೂ ಕಪೂರ್​ಗಳೇ ಒರಿಜಿನಲ್ ಗ್ಯಾಂಗ್​ಸ್ಟರ್​ಗಳು. ಈಗಿನ ಕಾಲದ ಹೀರೋಗಳು ಫ್ರಾಂಚೈಸಿಗಳನ್ನು ಕದಿಯುತ್ತಾರೆ’ ಎಂದು ಕರಣ್ ಜೋಹರ್ ಹೇಳಿದ್ದಾರೆ. ಇದು ಅವರು ಕಾರ್ತಿಕ್ ಆರ್ಯನ್​ಗೆ ಹೇಳಿದ ಮಾತು. ಅಲ್ಲದೆ ತಮ್ಮನ್ನು ತಾವು ಅವರು ಕಿಂಗ್​ಮೇಕರ್ ಎಂದು ಕರೆದುಕೊಂಡಿದ್ದಾರೆ.

‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ಮೊದಲು ಅಕ್ಷಯ್ ಕುಮಾರ್ ಅವರು ನಟಿಸಿದ್ದರು. ಆ ಬಳಿಕ ಈ ಚಿತ್ರಕ್ಕೆ ಕಾರ್ತಿಕ್ ಆರ್ಯನ್ ಎಂಟ್ರಿ ಆಯಿತು. ಎರಡನೇ ಪಾರ್ಟ್​ಗೆ ಅವರೇ ಹೀರೋ ಆದರು. ಈ ಸಿನಿಮಾ ಹಿಟ್ ಆದ ಬಳಿಕ ಅವರನ್ನೇ ಸಿನಿಮಾದಲ್ಲಿ ಮುಂದುವರಿಸಲಾಗಿದೆ. ಈ ವಿಚಾರ ಇಟ್ಟುಕೊಂಡೇ ಕರಣ್ ಜೋಹರ್ ಅವರು ಕಾರ್ತಿಕ್ ಆರ್ಯನ್​ನ ಕಾಲೆಳೆದಿದ್ದಾರೆ.

ಇದನ್ನೂ ಓದಿ
Image
ಕರಣ್ ಜೋಹರ್​ಗೆ ಇರೋದು ರೋಗವೇ? ವಿಪರೀತ ತೂಕ ಇಳಿದಿದ್ದಕ್ಕೆ ಕಾರಣ ಇಲ್ಲಿದೆ
Image
‘ರಾಜಮೌಳಿ ಸಿನಿಮಾಗಳಲ್ಲೂ ಲಾಜಿಕ್ ಇರಲ್ಲ’: ಕರಣ್ ಜೋಹರ್ ವಾದ
Image
‘ದೊಡ್ಡ ಬಜೆಟ್​ ಸಿನಿಮಾಗಳಿಂದ ಲಾಭ ಇಲ್ಲ’; ಕರಣ್ ಜೋಹರ್
Image
‘ನಾವು ಸುಳ್ಳುಬುರುಕರು’; ಬಾಲಿವುಡ್​ನ ಕರಾಳ ಮುಖ ಬಿಚ್ಚಿಟ್ಟ ಕರಣ್ ಜೋಹರ್

ಕಾರ್ತಿಕ್ ಆರ್ಯನ್ ಅವರನ್ನು ಹೊರಗಿನವರು ಎಂದೇ ಎಲ್ಲರೂ ಗುರುತಿಸುತ್ತಾ ಬಂದರು. ಆದರೆ, ಅವರಿಗೆ ಆ ಬಗ್ಗೆ ಬೇಸರ ಇಲ್ಲ. ಇದನ್ನು ಮೆಟ್ಟಿ ಅವರು ನಿಂತಿದ್ದಾರೆ. ಈಗ ಸಾಲುಸಾಲು ಸಿನಿಮಾಗಳು ಹಿಟ್ ಆದ ಬೆನ್ನಲ್ಲೇ ಅವರನ್ನು ಬಾಲಿವುಡ್​ನ ಸ್ಟಾರ್ ಎಂದು ಪರಿಗಣಿಸಲಾಗುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿದೆ.

ಇದನ್ನೂ ಓದಿ: ಕರಣ್ ಜೋಹರ್​ಗೆ ಇರೋದು ರೋಗವೇ? ವಿಪರೀತ ತೂಕ ಇಳಿದಿದ್ದಕ್ಕೆ ಕಾರಣ ನೀಡಿದ ನಿರ್ಮಾಪಕ

‘ಭೂಲ್ ಭುಲಯ್ಯ 2’ ಚಿತ್ರಕ್ಕೆ ಕಾರ್ತಿಕ್ ಆರ್ಯನ್ ಅವರನ್ನು ಆಯ್ಕೆ ಮಾಡಿದಾಗ ಅನೇಕರು ಈ ಬಗ್ಗೆ ಪ್ರಶ್ನೆ ಮಾಡಿದ್ದರಂತೆ. ಅವರಿಗೆ ಗೆಲುವು ಸಿಗುತ್ತದೆಯೋ ಅಥವಾ ಇಲ್ಲವೋ ಎಂದು ಅನುಮಾನಿಸಿದ್ದರಂತೆ. ಕೊನೆಗೂ ಆ ಅನುಮಾನ ಬದಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!