AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ಬ್ರಿಟನ್​ ಪಾರ್ಲಿಮೆಂಟ್​ನಲ್ಲಿ ಕರಣ್​ ಜೋಹರ್​ಗೆ ಸಿಗಲಿದೆ ವಿಶೇಷ ಗೌರವ

Britain Parliament: ಈ ಸುದ್ದಿ ಕೇಳಿ ಕರಣ್​ ಜೋಹರ್​ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ಕೆಲವರು ಇದನ್ನು ಟೀಕಿಸಿದ್ದಾರೆ.

Karan Johar: ಬ್ರಿಟನ್​ ಪಾರ್ಲಿಮೆಂಟ್​ನಲ್ಲಿ ಕರಣ್​ ಜೋಹರ್​ಗೆ ಸಿಗಲಿದೆ ವಿಶೇಷ ಗೌರವ
ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Jun 18, 2023 | 2:58 PM

Share

ಬಾಲಿವುಡ್​ನ (Bollywood) ಫೇಮಸ್​ ಸೆಲೆಬ್ರಿಟಿ ಕರಣ್​ ಜೋಹರ್​ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಅವರಿಗೆ ಈಗ ಒಂದು ವಿಶೇಷ ಗೌರವ ಸಲ್ಲಿಕೆ ಆಗುತ್ತಿದೆ. ಬ್ರಿಟನ್​ ಪಾರ್ಲಿಮೆಂಟ್​ನಲ್ಲಿ (Britain Parliament) ಅವರನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ. ಸಿನಿಮಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಜೂನ್​​ 20ರಂದು ಕರಣ್​ ಜೋಹರ್​ ಅವರಿಗೆ ಸನ್ಮಾನ ಮಾಡಲಾಗುವುದು. ಈ ಸುದ್ದಿ ಕೇಳಿ ಕರಣ್​ ಜೋಹರ್​ (Karan Johar) ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ಕೆಲವರು ಇದನ್ನು ಟೀಕಿಸಿದ್ದಾರೆ. ನೆಪೋಟಿಸಂ ಬೆಂಬಲಿಸುವ ಕರಣ್​ ಜೋಹರ್​ಗೆ ಈ ಮನ್ನಣೆ ನೀಡುತ್ತಿರುವುದು ಸರಿಯಲ್ಲ ಎಂದು ನೆಟ್ಟಿಗರು ವಿರೋಧಿಸಿದ್ದಾರೆ.

ಬ್ರಿಟನ್​ ಜೊತೆ ಕರಣ್​ ಜೋಹರ್​ ಅವರು ನಂಟು ಹೊಂದಿದ್ದಾರೆ. ‘ಕುಚ್​ ಕುಚ್​ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್​’, ‘ಯೇ ದಿಲ್​ ಹೈ ಮುಷ್ಕಿಲ್​’ ಮುಂತಾದ ಸಿನಿಮಾಗಳನ್ನು ಅವರು ಬ್ರಿಟನ್​ನಲ್ಲಿ ಚಿತ್ರೀಕರಣ ಮಾಡಿದ್ದರು. ಆ ಸಿನಿಮಾಗಳು ಅಲ್ಲಿ ಉತ್ತಮ ಕಲೆಕ್ಷನ್​ ಮಾಡಿದ್ದವು. 2012ರಲ್ಲಿ ಬ್ರಿಟನ್​ ಪ್ರವಾಸೋದ್ಯಮದ ಪ್ರಚಾರ ರಾಯಭಾರಿ ಆಗಿಯೂ ಕರಣ್​ ಜೋಹರ್​ ಅವರು ನೇಮಕ ಆಗಿದ್ದರು.

ಇದನ್ನೂ ಓದಿ: ನೆಪೋಟಿಸಂ ಅಂದ್ರೆ ನೆನಪಾಗೋದೇ ಕರಣ್​ ಜೋಹರ್​

‘ಈ ಗೌರವಕ್ಕೆ ಪಾತ್ರವಾಗಲು ನಾನು ಇನ್ನೂ ಅಂಥ ಸಾಧನೆ ಮಾಡಿಲ್ಲ. ನನಗಿಂತ ಪ್ರತಿಭಾವಂತ ನಿರ್ದೇಶಕರು ಇದ್ದಾರೆ’ ಎಂದು ಕರಣ್​ ಜೋಹರ್ ಪ್ರತಿಕ್ರಿಯಿಸಿರುವುದಾಗಿ ‘ಟೈಮ್ಸ್​ ಆಫ್​ ಇಂಡಿಯಾ’ ವರದಿ ಮಾಡಿದೆ. ಬಾಲಿವುಡ್​ನಲ್ಲಿ ಪ್ರಭಾವಿ ನಿರ್ದೇಶಕ, ನಿರ್ಮಾಪಕನಾಗಿ ಕರಣ್​ ಜೋಹರ್​ ಗುರುತಿಸಿಕೊಂಡಿದ್ದಾರೆ. ಅವರು ‘ಧರ್ಮ ಪ್ರೊಡಕ್ಷನ್ಸ್​’ ಬ್ಯಾನರ್​ ಮೂಲಕ ಅನೇಕರಿಗೆ ಅವಕಾಶ ನೀಡಿದ್ದಾರೆ. ಆದರೆ ಸ್ಟಾರ್​ ಮಕ್ಕಳಿಗೆ ಮಾತ್ರ ಅವರು ಮಣೆ ಹಾಕುತ್ತಾರೆ ಎಂಬ ಆರೋಪ ಇದೆ. ಹಾಗಾಗಿ ಅವರ ವಿರುದ್ಧ ಕಂಗನಾ ರಣಾವತ್​ ಆಗಾಗ ಕಿಡಿ ಕಾರುತ್ತಾರೆ.

ಇದನ್ನೂ ಓದಿ: Karan Johar: ನೆಪೋಟಿಸಂ ಬಗ್ಗೆಯೇ ಒಟಿಟಿಯಲ್ಲಿ ಕಾರ್ಯಕ್ರಮ ಮಾಡಲಿರುವ ಕರಣ್​ ಜೋಹರ್​

ನಿರೂಪಣೆಯಲ್ಲೂ ಕರಣ್​ ಜೋಹರ್​ ಫೇಮಸ್​. ಅನೇಕ ಅವಾರ್ಡ್​​ ಫಂಕ್ಷನ್​ಗಳನ್ನು ನಡೆಸಿಕೊಟ್ಟ ಖ್ಯಾತಿ ಅವರಿಗೆ ಸಲ್ಲುತ್ತದೆ. ‘ಕಾಫಿ ವಿತ್​ ಕರಣ್​’ ಚಾಟ್ ಶೋ ಮೂಲಕ ಅವರು ಸಖತ್​ ಸುದ್ದಿ ಆಗಿದ್ದರು. ಈಗ ನಿರ್ದೇಶನದಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಅವರು ಜೋಡಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?