AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ಐಡಿ ಕಾರ್ಡ್​ ತೋರಿಸದೇ ಏರ್​ಪೋರ್ಟ್​ ಒಳಗೆ ನುಗ್ಗಲು ಯತ್ನಿಸಿದ ಕರಣ್​ ಜೋಹರ್​; ವಿಡಿಯೋ ವೈರಲ್​

Karan Johar Viral Video: ಕರಣ್​ ಜೋಹರ್ ಅವರು ಐಡೆಂಟಿಟಿ ಕಾರ್ಡ್​ ತೋರಿಸದೇ ಮುಂಬೈ ವಿಮಾನ ನಿಲ್ದಾಣದ ಒಳಗೆ ಹೋಗಲು ಮುಂದಾದರು. ಆಗ ಅವರನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿ ತಡೆದು ನಿಲ್ಲಿಸಿದರು.

Karan Johar: ಐಡಿ ಕಾರ್ಡ್​ ತೋರಿಸದೇ ಏರ್​ಪೋರ್ಟ್​ ಒಳಗೆ ನುಗ್ಗಲು ಯತ್ನಿಸಿದ ಕರಣ್​ ಜೋಹರ್​; ವಿಡಿಯೋ ವೈರಲ್​
ಕರಣ್ ಜೋಹರ್
ಮದನ್​ ಕುಮಾರ್​
|

Updated on:Mar 21, 2023 | 10:30 PM

Share

ಮುಖ್ಯಾಂಶಗಳು

  • ಐಡಿ ಕಾರ್ಡ್ ತೋರಿಸದೇ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಲು ಯತ್ನಿಸಿದ ಕರಣ್​ ಜೋಹರ್​
  • ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯ ವಿಡಿಯೋ ವೈರಲ್​ ಆಗಿದೆ
  • ಪಾಪರಾಜಿಗಳಿಗೆ ಪೋಸ್​ ನೀಡಿದ ಬಳಿಕ ಐಡಿ ತೋರಿಸೋದು ಮರೆತ ಕರಣ್​ ಜೋಹರ್​

ನಿರ್ಮಾಪಕ ಕರಣ್​ ಜೋಹರ್​ (Karan Johar) ಅವರು ಸಖತ್​ ಜನಪ್ರಿಯತೆ ಹೊಂದಿದ್ದಾರೆ. ಹಾಗಂತ ಸರ್ಕಾರದ ನಿಯಮಗಳನ್ನು ಮುರಿಯಲು ಸಾಧ್ಯವೇ? ಖಂಡಿತಾ ಇಲ್ಲ. ಇತ್ತೀಚೆಗೆ ಅವರು ಮುಂಬೈ ವಿಮಾನ ನಿಲ್ದಾಣ (Mumbai Airport) ಪ್ರವೇಶಿಸುವಾಗ ಮೈ ಮರೆತಿದ್ದಾರೆ. ಸೆಲೆಬ್ರಿಟಿ ಎಂಬ ಕಾರಣಕ್ಕೋ ಏನೋ ತಮ್ಮ ಗುರುತಿನ ಚೀಟಿಯನ್ನು ತೋರಿಸದೇ ಏರ್​ಪೋರ್ಟ್​ ಒಳಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಆದರೆ ಅಲ್ಲಿ ಡ್ಯೂಟಿ ಮಾಡುತ್ತಾ ಇದ್ದಿದ್ದು ಓರ್ವ ಖಡಕ್​ ಆಫೀಸರ್​! ಹಾಗಾಗಿ ಕರಣ್​ ಜೋಹರ್​ ಅವರು ನಿಯಮ ಉಲ್ಲಂಘಿಸಲು ಸಾಧ್ಯವಾಗಿಲ್ಲ. ಪಾಪರಾಜಿಗಳ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋ (Karan Johar Viral Video) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಸೆಲೆಬ್ರಿಟಿಗಳು ವಿಮಾನ ನಿಲ್ದಾಣಕ್ಕೆ ಬಂದಾಗ ಅವರ ಫೋಟೋಗಳನ್ನು ಕ್ಲಿಕ್ಕಿಸಲು ಪಾಪರಾಜಿಗಳು ಕಾದು ಕುಳಿತಿರುತ್ತಾರೆ. ಹಾಗಾಗಿ ಅಲ್ಲಿ ನಟ-ನಟಿಯರು ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಬಹುಬೇಗನೆ ಜಗಜ್ಜಾಹೀರಾಗುತ್ತದೆ. ಕರಣ್​ ಜೋಹರ್​ ವಿಚಾರದಲ್ಲೂ ಹಾಗೆಯೇ ಆಗಿದೆ. ಅವರು ಐಡಿ ಕಾರ್ಡ್ ತೋರಿಸದೇ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಲು ಯತ್ನಿಸಿರುವುದು ಬಹಿರಂಗ ಆಗಿದೆ.

ಇದನ್ನೂ ಓದಿ
Image
Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಇದನ್ನೂ ಓದಿ: ‘ಆಲಿಯಾ ಮಗು ನೇರವಾಗಿ ಕರಣ್​ ಜೋಹರ್​ ಕಚೇರಿಗೆ​ ಹೋಗುತ್ತೆ ಅಂದ್ಕೊಂಡಿದ್ವಿ’:​ ಟ್ರೋಲ್​ ಮಾಡಿದ ನೆಟ್ಟಿಗರು

ಮಂಗಳವಾರ (ಮಾರ್ಚ್​ 21) ಬೆಳಗ್ಗೆ ಕರಣ್​ ಜೋಹರ್​ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅಲ್ಲಿದ್ದ ಪಾಪರಾಜಿಗಳಿಗೆ ಅವರು ಪೋಸ್​ ನೀಡಿದರು. ಬಳಿಕ ಐಡಿ ಕಾರ್ಡ್​ ತೋರಿಸದೇ ಒಳಗೆ ಹೋಗಲು ಮುಂದಾದರು. ಆಗ ಅವರನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿ ತಡೆದು ನಿಲ್ಲಿಸಿದರು. ತಾವು ಗುರುತಿನ ಚೀಟಿ ಮತ್ತು ಪ್ರಯಾಣಕ್ಕೆ ಸಂಬಂಧಿಸಿದ ಇತರೆ ದಾಖಲೆಗಳನ್ನು ತೋರಿಸಲಿಲ್ಲ ಎಂಬುದು ಕರಣ್​ ಜೋಹರ್​ಗೆ ಮನವರಿಕೆ ಆಯಿತು. ಕೂಡಲೇ ಅವರು ತಮ್ಮ ಬ್ಯಾಗ್​ ಪೂರ್ತಿ ಹುಡುಕಾಡಿ, ಅದರಲ್ಲಿ ಇದ್ದ ದಾಖಲೆಗಳನ್ನು ಅಧಿಕಾರಿಗಳಿಗೆ ತೋರಿಸಿದರು. ಆ ಬಳಿಕವೇ ಅವರಿಗೆ ವಿಮಾನ ನಿಲ್ದಾಣ ಪ್ರವೇಶಿಸಲು ಅನುಮತಿ ಸಿಕ್ಕಿತು.

ಸೆಲೆಬ್ರಿಟಿಗಳು ಕೆಲವೊಮ್ಮೆ ನಿಯಮ ಉಲ್ಲಂಘಿಸಲು ಪ್ರಯತ್ನಿಸುತ್ತಾರೆ. ತಾವು ತುಂಬ ಫೇಮಸ್​ ಆಗಿರುವುದರಿಂದ ಐಡಿ ಕಾರ್ಡ್​ ತೋರಿಸುವ ಅಗತ್ಯ ಇಲ್ಲ ಎಂದು ಕೆಲವರು ಭಾವಿಸುವುದುಂಟು. ಆದರೆ ರೂಲ್ಸ್​ ಎಲ್ಲರಿಗೂ ಒಂದೇ ಎಂಬುದಕ್ಕೆ ಕರಣ್​ ಜೋಹರ್​ ಅವರ ಈ ಹೊಸ ವೈರಲ್​ ವಿಡಿಯೋನೇ ಸಾಕ್ಷಿ.

ಇದನ್ನೂ ಓದಿ: Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ

ಬಾಲಿವುಡ್​ನಲ್ಲಿ ನಿರ್ಮಾಪಕನಾಗಿ ಹಾಗೂ ನಿರ್ದೇಶಕನಾಗಿ ಕರಣ್​ ಜೋಹರ್​ ಅವರು ಸಕ್ರಿಯರಾಗಿದ್ದಾರೆ. ಅವರು ನಿರ್ದೇಶನ ಮಾಡುತ್ತಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿಯಾಗಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:30 pm, Tue, 21 March 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್