AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಕ್ಷಕರ ಬಗ್ಗೆ ಬೇಸರ ಹೊರಹಾಕಿದ ಕರಣ್ ಜೋಹರ್; ಕಾರಣ ಏನು?

Karan Johar: ಕರಣ್ ಜೋಹರ್ ಅವರು ಆಲಿಯಾ ಭಟ್, ಸಿದ್ದಾರ್ಥ್ ಮಲ್ಹೋತ್ರ ಅವರಿಂದ ಹಿಡಿದು, ಅನನ್ಯಾ ಪಾಂಡೆ, ಸುಹಾನಾ ಖಾನ್ ಮೊದಲಾದವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಕೆಲವರು ಸ್ಟಾರ್​ಗಿರಿ ಪಡೆದರೆ ಇನ್ನೂ ಕೆಲವರು ಯಶಸ್ಸು ಕಾಣಲು ಸಾಧ್ಯವಾಗಿಲ್ಲ. ಕರಣ್ ಅವರು ಹೊರಗಿನವರಿಗೆ ಅವಕಾಶ ನೀಡುವುದಿಲ್ಲ ಎಂಬ ಆರೋಪದ ಬಗ್ಗೆ ಅವರು ಮಾತನಾಡಿದ್ದಾರೆ.

ಪ್ರೇಕ್ಷಕರ ಬಗ್ಗೆ ಬೇಸರ ಹೊರಹಾಕಿದ ಕರಣ್ ಜೋಹರ್; ಕಾರಣ ಏನು?
Karan Johar
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 21, 2025 | 10:18 PM

Share

ಕರಣ್ ಜೋಹರ್ ಅವರು ಹಲವು ಸ್ಟಾರ್ ಕಿಡ್​ಗಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಈ ಕಾರಣದಿಂದಲೇ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬರುತ್ತಿದೆ. ತಮ್ಮ ಧರ್ಮ ಪ್ರೊಡಕ್ಷನ್ ಮೂಲಕ ಅವರು ಈ ಕೆಲಸ ಮಾಡಿದ್ದಾರೆ. ಅದೇ ರೀತಿ ಕೆಲವರು ಹೊಸಬರನ್ನು ಕೂಡ ಲಾಂಚ್ ಮಾಡಿದ್ದಾರೆ. ಆದರೆ, ಇದನ್ನು ಅನೇಕರು ಗಮನಿಸಿಲ್ಲ ಎಂಬ ಬೇಸರ ಅವರಿಗೆ ಇದೆ ಎನ್ನಬಹುದು. ಈ ಬಗ್ಗೆ ಅವರು ಈ ಮೊದಲು ಮಾತನಾಡಿದ್ದಾರೆ.

ಕರಣ್ ಜೋಹರ್ ಅವರು ಆಲಿಯಾ ಭಟ್, ಸಿದ್ದಾರ್ಥ್ ಮಲ್ಹೋತ್ರ ಅವರಿಂದ ಹಿಡಿದು, ಅನನ್ಯಾ ಪಾಂಡೆ, ಸುಹಾನಾ ಖಾನ್ ಮೊದಲಾದವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಕೆಲವರು ಸ್ಟಾರ್​ಗಿರಿ ಪಡೆದರೆ ಇನ್ನೂ ಕೆಲವರು ಯಶಸ್ಸು ಕಾಣಲು ಸಾಧ್ಯವಾಗಿಲ್ಲ. ಕರಣ್ ಅವರು ಹೊರಗಿನವರಿಗೆ ಅವಕಾಶ ನೀಡುವುದಿಲ್ಲ ಎಂಬ ಆರೋಪದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ರಾಘವ್ ಜುರೆಲ್ ಅವರು ಸ್ಟೇಜ್ ಮೇಲೆ ಕಿಲ್ ನನಗೆ ಬ್ರೇಕ್ ನೀಡಿದೆ ಎಂದು ಒಪ್ಪಿಕೊಂಡಿದ್ದಾರೆ. ರಾಘವ್ ಕೂಡ ಹೊರಗಡೆಯವರು. ಆ ಕ್ರೆಡಿಟ್ ನನಗೇಕೆ ಕೊಡಲ್ಲ. ಕಿಲ್ ಮೂಲಕ ಲಕ್ಷ್ಯ್ ಲಾಲ್ವಾಣಿ ಲಾಂಚ್ ಮಾಡಿದೆ. 52 ಕೋಟಿ ರೂಪಾಯಿ ಅವರ ಮೇಲೆ ಹಾಕಿದ್ದೇನೆ. ನಾನು ಸ್ಟಾರ್ ಮಕ್ಕಳನ್ನು ಲಾಂಚ್ ಮಾಡಿದ್ದೇನೆ ಎನ್ನುವ ಕಾರಣಕ್ಕೆ ಈ ಕ್ರೆಡಿಟ್​ನ ಕದಿಯೋದು ಸರಿ ಅಲ್ಲ’ ಎಂದು ಕರಣ್ ಜೋಹರ್ ಹೇಳಿದ್ದಾರೆ.

ಇದನ್ನೂ ಓದಿ:ಜಾತಿ ಮತ್ತು ಪ್ರೀತಿ: ಸಿನಿಮಾ ಸರಣಿ ನಿರ್ಮಿಸಲು ಮುಂದಾದ ಕರಣ್ ಜೋಹರ್

ರಾಘವ್ ಅವರು ಬಾಲಿವುಡ್ ಹಿನ್ನೆಲೆ ಹೊಂದಿರುವವರು ಅಲ್ಲ. ಲಕ್ಷ್ಯ್ ಕೂಡ ಬಾಲಿವುಡ್​ ರಂಗದವರಲ್ಲ. ಈಗ ಇವರಿಬ್ಬರೂ ಅದ್ಭುತವಾಗಿ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ‘ಬ್ಯಾಡ್ಸ್ ಆಫ್ ಬಾಲಿವುಡ್’ ಸರಣಿಯಲ್ಲಿ ಇವರು ನಟಿಸಿದ್ದಾರೆ.

ಈ ಸರಣಿಯನ್ನು ಶಾರುಖ್ ಖಾನ್ ನಿರ್ಮಾಣ ಮಾಡಿದ್ದು ಅವರ ಮಗ ಆರ್ಯನ್ ಖಾನ್ ನಿರ್ದೇಶನ ಮಾಡಿದ್ದಾರೆ. ಈ ಸರಣಿಯಲ್ಲಿ ಕರಣ್ ಜೋಹರ್ ನಟಿಸಿದ್ದಾರೆ. ಇದರಲ್ಲಿ ಅವರು ನಿರ್ಮಾಪಕರಾಗಿಯೇ ಕಾಣಿಸಿಕೊಂಡಿದ್ದಾರೆ. ಅವರನ್ನು ಕರಣ್ ಆಗಿಯೇ ತೋರಿಸಲಾಗಿದೆ. ಕರಣ್ ಜೋಹರ್ ಗೇ ಎಂಬ ಆರೋಪವೂ ಇದೆ. ಶಾರುಖ್ ಹಾಗೂ ಕರಣ್ ಮಧ್ಯೆ ಸಂಬಂಧವನ್ನು ಕಲ್ಪಿಸಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!