AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿ ರೀತಿ ಮಾತಾಡುತ್ತಿದ್ದ ಕರಣ್ ಜೋಹರ್; ಧ್ವನಿ ಬದಲಾವಣೆಗೆ ಮಾಡಿದ್ದೇನು?

ಕರಣ್ ಜೋಹರ್ ಅವರು ಹುಡುಗಿ ರೀತಿ ನಡೆಯುತ್ತಿದ್ದರು. ಅವರು ಧ್ವನಿ ಕೂಡ ಹುಡುಗಿಯರ ರೀತಿ ಇತ್ತು. ಆ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ. ಧ್ವನಿ ಮತ್ತು ನಡೆಯುವ ಶೈಲಿ ಬದಲಾಯಿಸಿಕೊಳ್ಳಲು ಅವರು ಮೂರು ವರ್ಷ ತರಬೇತಿ ಪಡೆದುಕೊಂಡಿದ್ದರು. ಇತ್ತೀಚೆಗಿನ ಸಂದರ್ಶನದಲ್ಲಿ ಕರಣ್ ಜೋಹರ್ ಈ ವಿಷಯದ ಬಗ್ಗೆ ಮಾತಾಡಿದ್ದಾರೆ.

ಹುಡುಗಿ ರೀತಿ ಮಾತಾಡುತ್ತಿದ್ದ ಕರಣ್ ಜೋಹರ್; ಧ್ವನಿ ಬದಲಾವಣೆಗೆ ಮಾಡಿದ್ದೇನು?
Karan Johar
ಮದನ್​ ಕುಮಾರ್​
|

Updated on: May 07, 2025 | 5:00 PM

Share

ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ (Karan Johar) ಅವರನ್ನು ಹಲವು ರೀತಿಯಲ್ಲಿ ಟ್ರೋಲ್ ಮಾಡಲಾಗುತ್ತದೆ. ಹಾಗಂತ ಇದು ಅವರಿಗೆ ಹೊಸದೇನೂ ಅಲ್ಲ. ಚಿಕ್ಕ ವಯಸ್ಸಿನಿಂದಲೂ ಜನರು ಅವರನ್ನು ಅಪಹಾಸ್ಯ ಮಾಡುತ್ತಿದ್ದರು. ಬಾಡಿ ಶೇಮಿಂಗ್ ಕೂಡ ಮಾಡುತ್ತಿದ್ದರು. ಆ ಬಗ್ಗೆ ಕರಣ್ ಜೋಹರ್ ಅವರು ಈಗ ಮೌನ ಮುರಿದಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಅವರು ಮಾತನಾಡಿದ್ದಾರೆ. ಮೊದಲು ಕರಣ್ ಜೋಹರ್ ಅವರ ಧ್ವನಿ (Karan Johar Voice) ಹುಡುಗಿಯರ ರೀತಿ ಇತ್ತು! ಅಲ್ಲದೇ ಅವರು ನಡೆಯುವುದು ಕೂಡ ಹಾಗೆಯೇ ಇತ್ತು. ಅದನ್ನು ಬದಲಾಯಿಸಿಕೊಳ್ಳಲು ಅವರು ತರಬೇತಿ ಪಡೆದುಕೊಂಡರು.

‘ನಾನು ಪಬ್ಲಿಕ್ ಸ್ಪೀಕಿಂಗ್ ಕ್ಲಾಸ್​ಗೆ ಹೋಗಿದ್ದೆ. ಕ್ಲಾಸ್ ಮುಗಿದ ಬಳಿಕ ಅವರು ನನ್ನನ್ನು ತಡೆದು ನಿಲ್ಲಿಸಿ ಒಂದು ಮಾತು ಹೇಳಿದರು. ನಿಮ್ಮ ಧ್ವನಿ ಹುಡುಗಿಯರ ರೀತಿ ಇದೆ. ಹಾಗಾಗಿ ಈ ಸಮಾಜದಲ್ಲಿ ನಿಮಗೆ ತುಂಬ ತೊಂದರೆಗಳು ಎದುರಾಗಲಿವೆ. ನಿಮ್ಮ ಧ್ವನಿ ಗಂಡಸರ ರೀತಿ ಆಗಬೇಕು. ಅದಕ್ಕಾಗಿ ನಾವು ನಿಮಗೆ ಅಭ್ಯಾಸ ಮಾಡಿಸುತ್ತೇವೆ ಅಂತ ಸಲಹೆ ನೀಡಿದ್ದರು’ ಎಂದಿದ್​ದಾರೆ ಕರಣ್ ಜೋಹರ್.

‘ಗಂಡಸರ ರೀತಿ ಧ್ವನಿ ಬರಬೇಕು ಎಂಬ ಕಾರಣಕ್ಕೆ ನಾನು ಆ ತರಗತಿಗೆ ಎರಡು, ಮೂರು ವರ್ಷ ಹೋದೆ. ಕಂಪ್ಯೂಟರ್ ಕ್ಲಾಸ್​ಗೆ ಹೋಗುತ್ತಿದ್ದೇನೆ ಅಂತ ಅಪ್ಪನಿಗೆ ಹೇಳಿದ್ದೆ. ಯಾಕೆಂದರೆ ನಿಜ ಹೇಳಲು ನನಗೆ ನಾಚಿಕೆ ಆಗುತ್ತಿತ್ತು. ಮೂರು ವರ್ಷಗಳ ಬಳಿಕ ನನಗೆ ಗಡುಸು ಧ್ವನಿ ಬಂತು. ಹೇಗೆ ನಡೆಯಬೇಕು? ಗಂಡಸರ ರೀತಿ ಕಾಣುವುದು ಹೇಗೆ ಎಂಬುದನ್ನು ನನಗೆ ಕಲಿಸಿಕೊಟ್ಟರು’ ಎಂದು ಕರಣ್ ಜೋಹರ್ ಹೇಳಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಈ ಎಲ್ಲ ಘಟನೆಗಳಿಂದ ಕರಣ್ ಜೋಹರ್ ಅವರು ಅನುಭವ ಪಡೆದಿದ್ದಾರೆ. ‘ಈಗ ನಾನು ಯಾರಿಗೂ ಈ ರೀತಿ ಸಲಹೆ ಕೊಡುವುದಿಲ್ಲ. ನೀವು ನೀವಾಗಿಯೇ ಇರಿ ಅಂತ ನಾನು ಹೇಳುತ್ತೇನೆ. ನೀವು ಒಂದು ರೀತಿ ನಡೆಯುತ್ತೀರಿ ಎಂದರೆ ಹಾಗೆಯೇ ಇರಿ. ಅದೇ ರೀತಿ ಮುಂದುವರಿಯಿರಿ. ಬೇರೆಯವರಿಗಾಗಿ ನಿಮ್ಮನ್ನು ನೀವು ಬದಲಾಯಿಸಿಕೊಳ್ಳಬೇಡಿ ಎನ್ನುತ್ತೇನೆ’ ಎಂಬುದು ಕರಣ್ ಜೋಹರ್ ಮಾತುಗಳು.

ಇದನ್ನೂ ಓದಿ: ‘ರಾಜಮೌಳಿ ಸಿನಿಮಾಗಳಲ್ಲೂ ಲಾಜಿಕ್ ಇರಲ್ಲ’: ಕರಣ್ ಜೋಹರ್ ವಾದ

ಬಾಲಿವುಡ್​ನಲ್ಲಿ ನಿರ್ದೇಶಕನಾಗಿ, ನಿರ್ಮಾಪಕನಾಗಿ ಕರಣ್ ಜೋಹರ್ ಅವರು ಯಶಸ್ಸು ಕಂಡಿದ್ದಾರೆ. ‘ಕುಚ್ ಕುಚ್ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್’, ‘ಕಭಿ ಅಲ್ವಿದಾ ನಾ ಕೆಹ್ನಾ’, ‘ಮೈ ನೇಮ್ ಈಸ್ ಖಾನ್’, ‘ಸ್ಟೂಡೆಂಟ್ ಆಫ್​ ದಿ ಇಯರ್’, ‘ಬಾಂಬೆ ಟಾಕೀಸ್’, ‘ಯೇ ದಿಲ್​ ಹೈ ಮುಷ್ಕಿಲ್’, ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!