AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ಸ್ವತಃ ಕಂಗನಾ ರಣಾವತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ನ ಅನೇಕ ಖ್ಯಾತ ಕಲಾವಿದರು ಇದರಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಕರಣ್​ ಜೋಹರ್​ ಆಸಕ್ತಿ ತೋರಿಸಿದ್ದಾರೆ.

ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ
ಕಂಗನಾ ರಣಾವತ್​, ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Aug 22, 2023 | 4:18 PM

Share

ನಿರ್ಮಾಪಕ/ನಿರ್ದೇಶಕ ಕರಣ್​ ಜೋಹರ್ (Karan Johar) ಅವರನ್ನು ಕಂಡರೆ ನಟಿ ಕಂಗನಾ ರಣಾವತ್​ ಉರಿದು ಬೀಳುತ್ತಾರೆ. ಬಾಲಿವುಡ್​ನಲ್ಲಿ ಇರುವ ಅನೇಕ ಪಿಡುಗುಗಳಿಗೆ ಕರಣ್​ ಜೋಹರ್​ ಅವರೇ ಕಾರಣ ಎಂಬುದು ಕಂಗನಾ ವಾದ. ಹಿಂದಿ ಚಿತ್ರರಂಗದಲ್ಲಿ ನೆಪೋಟಿಸಂ ಮತ್ತು ಮೂವೀ ಮಾಫಿಯಾ ಬೆಳೆಯುವಲ್ಲಿ ಕರಣ್​ ಜೋಹರ್​ ಪಾತ್ರ ತುಂಬ ದೊಡ್ಡದಿದೆ ಎಂದು ಕಂಗನಾ ಆಗಾಗ ಹೇಳಿಕೊಂಡು ಬರುತ್ತಲೇ ಇದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಅವರಿಬ್ಬರ ನಡುವೆ ದ್ವೇಷದ ವಾತಾವರಣ ಮನೆ ಮಾಡಿದೆ. ಹಾಗಿದ್ದರೂ ಕೂಡ ಕಂಗನಾ ಅವರ ಎಮರ್ಜೆನ್ಸಿ’ (Emergency Movie) ಸಿನಿಮಾವನ್ನು ನೋಡಲು ಕರಣ್​ ಜೋಹರ್​ ಉತ್ಸಾಹ ತೋರಿಸಿದ್ದಾರೆ. ಅವರ ಈ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಇದಕ್ಕೆ ಕಂಗನಾ ರಣಾವತ್​ (Kangana Ranaut) ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇತ್ತೀಚೆಗೆ ‘ಎಕ್ಸ್​ಪ್ರೆಸ್​ ಅಡ್ಡಾ’ ಇವೆಂಟ್​ನಲ್ಲಿ ಕರಣ್​ ಜೋಹರ್​ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ರಾಜಕೀಯದ ಯಾವ ಸಂಗತಿಯನ್ನು ನೀವು ಸಿನಿಮಾದಲ್ಲಿ ನೋಡಲು ಬಯಸುತ್ತೀರಿ ಎಂದು ಕೇಳಲಾಯಿತು. ಅದಕ್ಕೆ ಉತ್ತರಿಸಿದ ಕರಣ್​ ಜೋಹರ್​ ಅವರು, ‘ಎಮರ್ಜೆನ್ಸಿ ಕುರಿತು ಸಿನಿಮಾ ಬರುತ್ತಿದೆ. ಅದನ್ನು ನೋಡಲು ನಾನು ಕಾತರನಾಗಿದ್ದೇನೆ’ ಎಂದು ಹೇಳಿದ್ದಾರೆ. ಅಲ್ಲದೇ ‘ಗದರ್​ 2’ ಸಿನಿಮಾದ ಗೆಲುವನ್ನು ಅವರು ಕೊಂಡಾಡಿದ್ದಾರೆ.

ಇದನ್ನೂ ಓದಿ: ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

ಕಂಗನಾ ರಣಾವತ್​ ಅವರು ಚಿತ್ರರಂಗದಲ್ಲಿ ಹಲವು ಬಗೆಯ ಪ್ರಯೋಗಗಳನ್ನು ಮಾಡುತ್ತಾರೆ. ಸೋಲು-ಗೆಲುವು ಎರಡನ್ನೂ ಅವರು ನೋಡಿದ್ದಾರೆ. ಬಾಲಿವುಡ್​ನಲ್ಲಿ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಕರಣ್​ ಜೋಹರ್​ ಅವರನ್ನು ಕಂಗನಾ ಪ್ರತಿ ಹಂತದಲ್ಲೂ ವಿರೋಧಿಸುತ್ತಾರೆ. ಯಾವ ವೇದಿಕೆ ಸಿಕ್ಕರೂ ಅವರು ಕಿಡಿಕಾರುತ್ತಾರೆ. ಹಾಗಿದ್ದರೂ ಕೂಡ ಕರಣ್​ ಜೋಹರ್​ ಅವರು ‘ಎಮರ್ಜೆನ್ಸಿ’ ಸಿನಿಮಾ ನೋಡಲು ಆಸಕ್ತಿ ತೋರಿಸಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ: ಚಂದ್ರಮುಖಿ ಅವತಾರದಲ್ಲಿ ಬಂದ ಕಂಗನಾ ರಣಾವತ್​; ಪೋಸ್ಟರ್​ ಕಂಡು ಅಭಿಮಾನಿಗಳು ಫಿದಾ

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ಸ್ವತಃ ಕಂಗನಾ ರಣಾವತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ನ ಅನೇಕ ಖ್ಯಾತ ಕಲಾವಿದರು ಇದರಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇಂದಿರಾ ಗಾಂಧಿಯ ಪಾತ್ರದಲ್ಲಿ ಕಂಗನಾ ರಣಾವತ್​ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಟೀಸರ್​ ಗಮನ ಸೆಳೆದಿದೆ. ಈ ಸಿನಿಮಾದ ನಿರ್ಮಾಣದಲ್ಲೂ ಕಂಗನಾ ಪಾಲುದಾರಿಕೆ ಹೊಂದಿದ್ದಾರೆ. ನವೆಂಬರ್​ 24ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಕಂಗನಾ ಅವರಿಗೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್