AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ಸ್ವತಃ ಕಂಗನಾ ರಣಾವತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ನ ಅನೇಕ ಖ್ಯಾತ ಕಲಾವಿದರು ಇದರಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಕರಣ್​ ಜೋಹರ್​ ಆಸಕ್ತಿ ತೋರಿಸಿದ್ದಾರೆ.

ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ
ಕಂಗನಾ ರಣಾವತ್​, ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Aug 22, 2023 | 4:18 PM

Share

ನಿರ್ಮಾಪಕ/ನಿರ್ದೇಶಕ ಕರಣ್​ ಜೋಹರ್ (Karan Johar) ಅವರನ್ನು ಕಂಡರೆ ನಟಿ ಕಂಗನಾ ರಣಾವತ್​ ಉರಿದು ಬೀಳುತ್ತಾರೆ. ಬಾಲಿವುಡ್​ನಲ್ಲಿ ಇರುವ ಅನೇಕ ಪಿಡುಗುಗಳಿಗೆ ಕರಣ್​ ಜೋಹರ್​ ಅವರೇ ಕಾರಣ ಎಂಬುದು ಕಂಗನಾ ವಾದ. ಹಿಂದಿ ಚಿತ್ರರಂಗದಲ್ಲಿ ನೆಪೋಟಿಸಂ ಮತ್ತು ಮೂವೀ ಮಾಫಿಯಾ ಬೆಳೆಯುವಲ್ಲಿ ಕರಣ್​ ಜೋಹರ್​ ಪಾತ್ರ ತುಂಬ ದೊಡ್ಡದಿದೆ ಎಂದು ಕಂಗನಾ ಆಗಾಗ ಹೇಳಿಕೊಂಡು ಬರುತ್ತಲೇ ಇದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಅವರಿಬ್ಬರ ನಡುವೆ ದ್ವೇಷದ ವಾತಾವರಣ ಮನೆ ಮಾಡಿದೆ. ಹಾಗಿದ್ದರೂ ಕೂಡ ಕಂಗನಾ ಅವರ ಎಮರ್ಜೆನ್ಸಿ’ (Emergency Movie) ಸಿನಿಮಾವನ್ನು ನೋಡಲು ಕರಣ್​ ಜೋಹರ್​ ಉತ್ಸಾಹ ತೋರಿಸಿದ್ದಾರೆ. ಅವರ ಈ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಇದಕ್ಕೆ ಕಂಗನಾ ರಣಾವತ್​ (Kangana Ranaut) ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇತ್ತೀಚೆಗೆ ‘ಎಕ್ಸ್​ಪ್ರೆಸ್​ ಅಡ್ಡಾ’ ಇವೆಂಟ್​ನಲ್ಲಿ ಕರಣ್​ ಜೋಹರ್​ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ರಾಜಕೀಯದ ಯಾವ ಸಂಗತಿಯನ್ನು ನೀವು ಸಿನಿಮಾದಲ್ಲಿ ನೋಡಲು ಬಯಸುತ್ತೀರಿ ಎಂದು ಕೇಳಲಾಯಿತು. ಅದಕ್ಕೆ ಉತ್ತರಿಸಿದ ಕರಣ್​ ಜೋಹರ್​ ಅವರು, ‘ಎಮರ್ಜೆನ್ಸಿ ಕುರಿತು ಸಿನಿಮಾ ಬರುತ್ತಿದೆ. ಅದನ್ನು ನೋಡಲು ನಾನು ಕಾತರನಾಗಿದ್ದೇನೆ’ ಎಂದು ಹೇಳಿದ್ದಾರೆ. ಅಲ್ಲದೇ ‘ಗದರ್​ 2’ ಸಿನಿಮಾದ ಗೆಲುವನ್ನು ಅವರು ಕೊಂಡಾಡಿದ್ದಾರೆ.

ಇದನ್ನೂ ಓದಿ: ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

ಕಂಗನಾ ರಣಾವತ್​ ಅವರು ಚಿತ್ರರಂಗದಲ್ಲಿ ಹಲವು ಬಗೆಯ ಪ್ರಯೋಗಗಳನ್ನು ಮಾಡುತ್ತಾರೆ. ಸೋಲು-ಗೆಲುವು ಎರಡನ್ನೂ ಅವರು ನೋಡಿದ್ದಾರೆ. ಬಾಲಿವುಡ್​ನಲ್ಲಿ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಕರಣ್​ ಜೋಹರ್​ ಅವರನ್ನು ಕಂಗನಾ ಪ್ರತಿ ಹಂತದಲ್ಲೂ ವಿರೋಧಿಸುತ್ತಾರೆ. ಯಾವ ವೇದಿಕೆ ಸಿಕ್ಕರೂ ಅವರು ಕಿಡಿಕಾರುತ್ತಾರೆ. ಹಾಗಿದ್ದರೂ ಕೂಡ ಕರಣ್​ ಜೋಹರ್​ ಅವರು ‘ಎಮರ್ಜೆನ್ಸಿ’ ಸಿನಿಮಾ ನೋಡಲು ಆಸಕ್ತಿ ತೋರಿಸಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ: ಚಂದ್ರಮುಖಿ ಅವತಾರದಲ್ಲಿ ಬಂದ ಕಂಗನಾ ರಣಾವತ್​; ಪೋಸ್ಟರ್​ ಕಂಡು ಅಭಿಮಾನಿಗಳು ಫಿದಾ

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ಸ್ವತಃ ಕಂಗನಾ ರಣಾವತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ನ ಅನೇಕ ಖ್ಯಾತ ಕಲಾವಿದರು ಇದರಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇಂದಿರಾ ಗಾಂಧಿಯ ಪಾತ್ರದಲ್ಲಿ ಕಂಗನಾ ರಣಾವತ್​ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಟೀಸರ್​ ಗಮನ ಸೆಳೆದಿದೆ. ಈ ಸಿನಿಮಾದ ನಿರ್ಮಾಣದಲ್ಲೂ ಕಂಗನಾ ಪಾಲುದಾರಿಕೆ ಹೊಂದಿದ್ದಾರೆ. ನವೆಂಬರ್​ 24ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಕಂಗನಾ ಅವರಿಗೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ