ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ಸ್ವತಃ ಕಂಗನಾ ರಣಾವತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ನ ಅನೇಕ ಖ್ಯಾತ ಕಲಾವಿದರು ಇದರಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಕರಣ್​ ಜೋಹರ್​ ಆಸಕ್ತಿ ತೋರಿಸಿದ್ದಾರೆ.

ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ
ಕಂಗನಾ ರಣಾವತ್​, ಕರಣ್​ ಜೋಹರ್​
Follow us
|

Updated on: Aug 22, 2023 | 4:18 PM

ನಿರ್ಮಾಪಕ/ನಿರ್ದೇಶಕ ಕರಣ್​ ಜೋಹರ್ (Karan Johar) ಅವರನ್ನು ಕಂಡರೆ ನಟಿ ಕಂಗನಾ ರಣಾವತ್​ ಉರಿದು ಬೀಳುತ್ತಾರೆ. ಬಾಲಿವುಡ್​ನಲ್ಲಿ ಇರುವ ಅನೇಕ ಪಿಡುಗುಗಳಿಗೆ ಕರಣ್​ ಜೋಹರ್​ ಅವರೇ ಕಾರಣ ಎಂಬುದು ಕಂಗನಾ ವಾದ. ಹಿಂದಿ ಚಿತ್ರರಂಗದಲ್ಲಿ ನೆಪೋಟಿಸಂ ಮತ್ತು ಮೂವೀ ಮಾಫಿಯಾ ಬೆಳೆಯುವಲ್ಲಿ ಕರಣ್​ ಜೋಹರ್​ ಪಾತ್ರ ತುಂಬ ದೊಡ್ಡದಿದೆ ಎಂದು ಕಂಗನಾ ಆಗಾಗ ಹೇಳಿಕೊಂಡು ಬರುತ್ತಲೇ ಇದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಅವರಿಬ್ಬರ ನಡುವೆ ದ್ವೇಷದ ವಾತಾವರಣ ಮನೆ ಮಾಡಿದೆ. ಹಾಗಿದ್ದರೂ ಕೂಡ ಕಂಗನಾ ಅವರ ಎಮರ್ಜೆನ್ಸಿ’ (Emergency Movie) ಸಿನಿಮಾವನ್ನು ನೋಡಲು ಕರಣ್​ ಜೋಹರ್​ ಉತ್ಸಾಹ ತೋರಿಸಿದ್ದಾರೆ. ಅವರ ಈ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಇದಕ್ಕೆ ಕಂಗನಾ ರಣಾವತ್​ (Kangana Ranaut) ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇತ್ತೀಚೆಗೆ ‘ಎಕ್ಸ್​ಪ್ರೆಸ್​ ಅಡ್ಡಾ’ ಇವೆಂಟ್​ನಲ್ಲಿ ಕರಣ್​ ಜೋಹರ್​ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ರಾಜಕೀಯದ ಯಾವ ಸಂಗತಿಯನ್ನು ನೀವು ಸಿನಿಮಾದಲ್ಲಿ ನೋಡಲು ಬಯಸುತ್ತೀರಿ ಎಂದು ಕೇಳಲಾಯಿತು. ಅದಕ್ಕೆ ಉತ್ತರಿಸಿದ ಕರಣ್​ ಜೋಹರ್​ ಅವರು, ‘ಎಮರ್ಜೆನ್ಸಿ ಕುರಿತು ಸಿನಿಮಾ ಬರುತ್ತಿದೆ. ಅದನ್ನು ನೋಡಲು ನಾನು ಕಾತರನಾಗಿದ್ದೇನೆ’ ಎಂದು ಹೇಳಿದ್ದಾರೆ. ಅಲ್ಲದೇ ‘ಗದರ್​ 2’ ಸಿನಿಮಾದ ಗೆಲುವನ್ನು ಅವರು ಕೊಂಡಾಡಿದ್ದಾರೆ.

ಇದನ್ನೂ ಓದಿ: ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

ಕಂಗನಾ ರಣಾವತ್​ ಅವರು ಚಿತ್ರರಂಗದಲ್ಲಿ ಹಲವು ಬಗೆಯ ಪ್ರಯೋಗಗಳನ್ನು ಮಾಡುತ್ತಾರೆ. ಸೋಲು-ಗೆಲುವು ಎರಡನ್ನೂ ಅವರು ನೋಡಿದ್ದಾರೆ. ಬಾಲಿವುಡ್​ನಲ್ಲಿ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಕರಣ್​ ಜೋಹರ್​ ಅವರನ್ನು ಕಂಗನಾ ಪ್ರತಿ ಹಂತದಲ್ಲೂ ವಿರೋಧಿಸುತ್ತಾರೆ. ಯಾವ ವೇದಿಕೆ ಸಿಕ್ಕರೂ ಅವರು ಕಿಡಿಕಾರುತ್ತಾರೆ. ಹಾಗಿದ್ದರೂ ಕೂಡ ಕರಣ್​ ಜೋಹರ್​ ಅವರು ‘ಎಮರ್ಜೆನ್ಸಿ’ ಸಿನಿಮಾ ನೋಡಲು ಆಸಕ್ತಿ ತೋರಿಸಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ: ಚಂದ್ರಮುಖಿ ಅವತಾರದಲ್ಲಿ ಬಂದ ಕಂಗನಾ ರಣಾವತ್​; ಪೋಸ್ಟರ್​ ಕಂಡು ಅಭಿಮಾನಿಗಳು ಫಿದಾ

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ಸ್ವತಃ ಕಂಗನಾ ರಣಾವತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ನ ಅನೇಕ ಖ್ಯಾತ ಕಲಾವಿದರು ಇದರಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇಂದಿರಾ ಗಾಂಧಿಯ ಪಾತ್ರದಲ್ಲಿ ಕಂಗನಾ ರಣಾವತ್​ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಟೀಸರ್​ ಗಮನ ಸೆಳೆದಿದೆ. ಈ ಸಿನಿಮಾದ ನಿರ್ಮಾಣದಲ್ಲೂ ಕಂಗನಾ ಪಾಲುದಾರಿಕೆ ಹೊಂದಿದ್ದಾರೆ. ನವೆಂಬರ್​ 24ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಕಂಗನಾ ಅವರಿಗೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ