AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್​-ಕರೀನಾ ಮಾಡಿದ ತಪ್ಪೇನು? ಫೋಟೋ ನೋಡಿ ನಿಮಗೆ ಪತ್ತೆ ಹಚ್ಚೋಕೆ ಆಗುತ್ತಾ ನೋಡಿ

ಸೈಫ್​ ಅಲಿ ಖಾನ್​ ಹಾಗೂ ಕರೀನಾ ಕಪೂರ್​ ಅವರು ಇತ್ತೀಚೆಗೆ ಕಾರಿನಲ್ಲಿ ಕಾಣಿಸಿಕೊಂಡಿದ್ದರು. ಇವರು ಕಾರಿನಲ್ಲಿ ಸುತ್ತಾಡುತ್ತಿರುವ ಫೋಟೋಗಳನ್ನು ಪಾಪರಾಜಿಗಳು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಸೈಫ್​-ಕರೀನಾ ಮಾಡಿದ ತಪ್ಪೇನು? ಫೋಟೋ ನೋಡಿ ನಿಮಗೆ ಪತ್ತೆ ಹಚ್ಚೋಕೆ ಆಗುತ್ತಾ ನೋಡಿ
ಸೈಫ್​ ಮತ್ತು ಕರೀನಾ
TV9 Web
| Edited By: |

Updated on:Jan 07, 2022 | 7:32 PM

Share

ಕರೀನಾ ಕಪೂರ್ ಹಾಗೂ ಸೈಫ್​ ಅಲಿ ಖಾನ್ (Kareena Kapoor And Saif Ali Khan)​ ಸದಾ ಸುದ್ದಿಯಲ್ಲಿರುತ್ತಾರೆ. ಅವರು ಮಾಡುವ ಸಣ್ಣಸಣ್ಣ ವಿಚಾರಗಳನ್ನು ಅಭಿಮಾನಿಗಳು ಗಮನಿಸುತ್ತಿರುತ್ತಾರೆ. ಅನೇಕ ಬಾರಿ ಈ ಜೋಡಿ ಟ್ರೋಲ್​ ಆದ ಉದಾಹರಣೆ ಇದೆ. ಸೈಫ್​ ಅಲಿ ಖಾನ್​ ಅವರನ್ನು ಕರೀನಾ ಮದುವೆ ಆದ ವಿಚಾರ ಒಂದು ವರ್ಗದವರಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಇವರನ್ನು ಟಾರ್ಗೆಟ್​ ಮಾಡಿ ನೆಗೆಟಿವ್​ ಕಮೆಂಟ್​ಗಳು ಹಾಕಲಾಗುತ್ತಿದೆ. ಈಗ ಈ ಜೋಡಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಮಾಡಿದ ತಪ್ಪೊಂದನ್ನು ಎಲ್ಲರೂ ಎತ್ತಿ ಹೇಳುತ್ತಿದ್ದಾರೆ. ಹಾಗಾದರೆ, ಈ ಜೋಡಿ ಮಾಡಿದ ತಪ್ಪೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸೈಫ್​ ಅಲಿ ಖಾನ್​ ಹಾಗೂ ಕರೀನಾ ಕಪೂರ್​ ಅವರು ಇತ್ತೀಚೆಗೆ ಕಾರಿನಲ್ಲಿ ಕಾಣಿಸಿಕೊಂಡಿದ್ದರು. ಇವರು ಕಾರಿನಲ್ಲಿ ಸುತ್ತಾಡುತ್ತಿರುವ ಫೋಟೋಗಳನ್ನು ಪಾಪರಾಜಿಗಳು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಇದರಲ್ಲಿ ಕರೀನಾ ಹಾಗೂ ಸೈಫ್​ ಮಾಸ್ಕ್​ ಧರಿಸಿಲ್ಲ. ಇಷ್ಟೇ ಆದರೆ ಎಲ್ಲರೂ ಸುಮ್ಮನೆ ಇರುತ್ತಿದ್ದರೇನೋ. ಏಕೆಂದರೆ, ಕರೀನಾ ಹಾಗೂ ಸೈಫ್​ ಮನೆಯಲ್ಲೂ ಒಟ್ಟಿಗೆ ಇರುತ್ತಾರೆ. ಅದೇ ರೀತಿ ಕಾರಿನಲ್ಲೂ ಇದ್ದಾರೆ. ಈ ಕಾರಣಕ್ಕೆ ಈ ಜೋಡಿ ಮಾಸ್ಕ್​ ಧರಿಸಿಲ್ಲ ಎಂಬ ವಿಚಾರ ಹೆಚ್ಚು ಹೈಲೈಟ್​ ಆಗಿಲ್ಲ. ಆದರೆ, ಇದಕ್ಕಿಂತ ದೊಡ್ಡ ತಪ್ಪು ಎಂದರೆ ಅವರು ಸೀಟ್​ ಬೆಲ್ಟ್​ ಹಾಕಿಲ್ಲ. ಇದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಅಲ್ಲದೆ, ನಾನಾ ರೀತಿಯ ಕಮೆಂಟ್​ ಮಾಡುತ್ತಿದ್ದಾರೆ.

‘ಸೆಲೆಬ್ರಿಟಿಗಳಾಗಿ ಸೀಟ್​ ಬೆಲ್ಟ್​ ಹಾಕದೆ ಇರುವುದು ಎಷ್ಟು ಸರಿ? ಮಾದರಿ ಆಗಿರಬೇಕಿರುವ ನೀವೇ ಈ ರೀತಿ ಮಾಡಿದರೆ ಹೇಗೆ ಎನ್ನುವ’ ಪ್ರಶ್ನೆಯನ್ನು ಕೆಲವರು ಕೇಳಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿದೆ. ಇನ್ನೂ ಕೆಲವರು, ‘ಈ ಸೆಲೆಬ್ರಿಟಿ ಜೋಡಿ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಕೆಲವರು ಮುಂಬೈ ಟ್ರಾಫಿಕ್​ ಪೊಲೀಸರ ಬಳಿ ಆಗ್ರಹಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ನಟಿ ಕರೀನಾ ಕಪೂರ್​ ಖಾನ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಅನೇಕ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿತ್ತು. ಆ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕಪಟ್ಟುಕೊಂಡಿದ್ದರು. ಅದೃಷ್ಟವಶಾತ್​ ಕರೀನಾಗೆ ಯಾವುದೇ ತೊಂದರೆ ಆಗಲಿಲ್ಲ. ಒಂದಷ್ಟು ದಿನ ಐಸೊಲೇಟ್​ ಆಗಿ ಚಿಕಿತ್ಸೆ ಪಡೆದ ಅವರು ಸಂಪೂರ್ಣ ಗುಣಮುಖರಾದರು. ಅದಾದ ಬೆನ್ನಲ್ಲೇ ಕರೀನಾ ಕಪೂರ್​ ಖಾನ್​ ಅವರ ವರ್ತನೆ ಕಂಡು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದರು.  ಕೊರೊನಾ ನೆಗೆಟಿವ್​ ಆಗುತ್ತಿದ್ದಂತೆಯೇ ಅವರು ಪಾರ್ಟಿ ಮಾಡಲು ಆರಂಭಿಸಿದ್ದರು.

ಇದನ್ನೂ ಓದಿ: ಕೊರೊನಾ ನೆಗೆಟಿವ್​ ಆಗುತ್ತಿದ್ದಂತೆಯೇ ಪಾರ್ಟಿ ಶುರು ಮಾಡಿಕೊಂಡ ಕರೀನಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Published On - 6:37 pm, Fri, 7 January 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ