AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್, ಅಲ್ಲು ಅರ್ಜುನ್ ಬದಲಿಗೆ ಯಶ್ ಅನ್ನು ಆರಿಸಿದ ಬಾಲಿವುಡ್ ನಟಿ

Yash: 'ಕೆಜಿಎಫ್' ಸಿನಿಮಾ ಯಶ್ ಅವರನ್ನು ಹೊಸ ಎತ್ತರಗಳಿಗೆ ಕೊಂಡೊಯ್ದಿದೆ. ಕನ್ನಡ ಚಿತ್ರರಂಗ ಎಂಬುದೊಂದು ಇದೆಯೆಂದೂ ಗುರುತಿಸಲು ಮುಜುಗರ ಪಡುತ್ತಿದ್ದ ಕೆಲವು ಸೋ ಕಾಲ್ಡ್ ಸ್ಟಾರ್ ನಟ-ನಟಿಯರು ಇಂದು ಯಶ್​ ಜೊತೆಗೆ ನಟಿಸುವ ಆಸೆ ವ್ಯಕ್ತಪಡಿಸುತ್ತಿದ್ದಾರೆ.

ಪ್ರಭಾಸ್, ಅಲ್ಲು ಅರ್ಜುನ್ ಬದಲಿಗೆ ಯಶ್ ಅನ್ನು ಆರಿಸಿದ ಬಾಲಿವುಡ್ ನಟಿ
ಮಂಜುನಾಥ ಸಿ.
|

Updated on:Nov 16, 2023 | 6:12 PM

Share

ಕೆಜಿಎಫ್‘ (KGF) ಸಿನಿಮಾ, ಯಶ್​ ಅನ್ನು ಅತ್ಯಂತ ಎತ್ತರಕ್ಕೆ ಕೊಂಡೊಯ್ದಿದೆ. ಕನ್ನಡ ಚಿತ್ರರಂಗದ ಕಡೆಗೆ ತಿರುಗಿಯೂ ನೋಡದಿದ್ದ ಸೆಲೆಬ್ರಿಟಿಗಳೆಲ್ಲ ಈಗ ಯಶ್ ಜೊತೆ ನಟಿಸುವಾಸೆ ಎನ್ನುತ್ತಿದ್ದಾರೆ. ತಮ್ಮನ್ನು ‘ಕೆಜಿಎಫ್’ ಜೊತೆ ಸಮೀಕರಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್​ನ ಹೈಫೈ ನಟಿಯರಲ್ಲಿ ಒಬ್ಬರಾಗಿರುವ ಕರೀನಾ ಕಪೂರ್ ಇದೀಗ ಶೋ ಒಂದರಲ್ಲಿ ‘ಕೆಜಿಎಫ್’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಮಾತ್ರವಲ್ಲದೆ, ದಕ್ಷಿಣದ ಇತರೆ ನಟರ ಬದಲಿಗೆ ಯಶ್​ರನ್ನು ಆರಿಸಿದ್ದಾರೆ.

ಕರೀನಾ ಕಪೂರ್ ಇತ್ತೀಚೆಗೆ ಬಾಲಿವುಡ್​ನ ಜನಪ್ರಿಯ ಹಾಗೂ ವಿವಾದಾತ್ಮಕ ಶೋ ಎನಿಸಿಕೊಂಡಿರುವ ‘ಕಾಫಿ ವಿತ್ ಕರಣ್’ ಸೀಸನ್ ಏಳರಲ್ಲಿ ನಟಿ ಆಲಿಯಾ ಭಟ್ ಜೊತೆಗೆ ಪಾಲ್ಗೊಂಡಿದ್ದರು. ಶೋನಲ್ಲಿ ಕರಣ್ ಜೋಹರ್, ಆಲಿಯಾ ಹಾಗೂ ಕರೀನಾಗೆ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು. ಕರೀನಾರಿಗೆ ‘ದಕ್ಷಿಣ ಭಾರತದ ಸ್ಟಾರ್​ಗಳೊಟ್ಟಿಗೆ ನಟಿಸುವ ಅವಕಾಶ ಸಿಕ್ಕರೆ ಯಾರೊಟ್ಟಿಗೆ ನಟಿಸಲು ಇಷ್ಟಪಡುತ್ತೀರಿ’ ಎಂದು ಕೇಳಿದರು. ಆಯ್ಕೆಯಾಗಿ ಅಲ್ಲು ಅರ್ಜುನ್, ಪ್ರಭಾಸ್, ವಿಜಯ್ ದೇವರಕೊಂಡ, ರಾಮ್ ಚರಣ್ ಹಾಗೂ ಯಶ್ ಹೆಸರುಗಳನ್ನು ಕರಣ್ ಜೋಹರ್ ಹೇಳಿದರು.

ಹೆಚ್ಚು ಯೋಚನೆಯನ್ನೂ ಸಹ ಮಾಡದೆ ಪ್ರಶ್ನೆಗೆ ಉತ್ತರಿಸಿದ ನಟಿ ಕರೀನಾ ಕಪೂರ್, ‘ನಾನು ‘ಕೆಜಿಎಫ್’ ಮಾದರಿ ಯುವತಿ. ನನಗೆ ಯಶ್ ಜೊತೆ ನಟಿಸಲು ಇಷ್ಟ’ ಎಂದರು. ಮುಂದುವರೆದು ತಾವು ‘ಕೆಜಿಎಫ್’ ಸಿನಿಮಾವನ್ನು ವೀಕ್ಷಿಸಿರುವುದಾಗಿಯೂ ಕರೀನಾ ಕಪೂರ್ ಹೇಳಿದರು.

ಇದನ್ನೂ ಓದಿ:ಕೆಜಿಎಫ್ಗೆ ಮುಂಚೆ ಯಶ್ ಸ್ಟಾರ್ ಆಗಿರಲಿಲ್ಲ: ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್

‘ಕೆಜಿಎಫ್’ ಸಿನಿಮಾ ಬಾಲಿವುಡ್​ನಲ್ಲಿ ದೊಡ್ಡ ಹವಾ ಎಬ್ಬಿಸಿದೆ. ಬಾಲಿವುಡ್​ನ ತಾರೆಗಳಾದ ಸಂಜಯ್ ದತ್ ಹಾಗೂ ರವೀನಾ ಟಂಡನ್ ಸಹ ಆ ಸಿನಿಮಾದಲ್ಲಿ ನಟಿಸಿದ್ದಾರೆ. ಸ್ವತಃ ಕರಣ್ ಜೋಹರ್ ಸಹ ‘ಕೆಜಿಎಫ್’ ಸಿನಿಮಾದ ಹಿಂದಿ ವಿತರಣೆಯ ಪಾಲುದಾರರಾಗಿದ್ದರು. ಬೆಂಗಳೂರಿನಲ್ಲಿ ನಡೆದ ‘ಕೆಜಿಎಫ್ 2’ ಸಿನಿಮಾದ ಪ್ರೆಸ್ ಮೀಟ್​ ಅನ್ನು ನಿರೂಪಣೆ ಮಾಡಿದ್ದು ಸಹ ಕರಣ್ ಜೋಹರ್ ಅವರೇ.

‘ಕೆಜಿಎಫ್’ ಸಿನಿಮಾದ ಬಳಿಕ ಯಶ್ ಇನ್ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಆದರೆ ‘ಕೆಜಿಎಫ್’ ಕ್ಕಿಂತಲೂ ದೊಡ್ಡ ಸಿನಿಮಾಕ್ಕೆ ಯಶ್ ತಯಾರಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿದೇಶದಿಂದ ಆಕ್ಷನ್ ನಿರ್ದೇಶಕರನ್ನು ತಮ್ಮ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಯಶ್ ಕರೆತಂದಿದ್ದಾರೆ. ಶ್ರೀಲಂಕಾನಲ್ಲಿ ಸಿನಿಮಾದ ಚಿತ್ರೀಕರಣ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಯಶ್​ರ ಮುಂದಿನ ಸಿನಿಮಾಕ್ಕೆ ಸ್ವತಃ ಅವರೇ ಬಂಡವಾಳ ಸಹ ಹೂಡಲಿದ್ದು, ನಿರ್ದೇಶಕರು ಹಾಗೂ ಕತೆಯೂ ಫೈನಲ್ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Thu, 16 November 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ