AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫನ್ನಿ ಕಾರಣಕ್ಕೆ ಮತ್ತೆ ಒಂದಾದ ಕರೀನಾ ಕಪೂರ್​​-ಆಮಿರ್​ ಖಾನ್​; ವಿಡಿಯೋ ವೈರಲ್​

ಕರೀನಾ ಕಪೂರ್​ ಖಾನ್​ ಅವರು ಆಮಿರ್​ ಖಾನ್​ಗೆ ಜೋಡಿಯಾಗಿ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.

ಫನ್ನಿ ಕಾರಣಕ್ಕೆ ಮತ್ತೆ ಒಂದಾದ ಕರೀನಾ ಕಪೂರ್​​-ಆಮಿರ್​ ಖಾನ್​; ವಿಡಿಯೋ ವೈರಲ್​
ಆಮಿರ್ ಖಾನ್, ಕರೀನಾ ಕಪೂರ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: May 01, 2022 | 1:04 PM

ಬಾಲಿವುಡ್​ ಕಲಾವಿದರಾದ ಆಮಿರ್​ ಖಾನ್​ ಮತ್ತು ಕರೀನಾ ಕಪೂರ್​ ಖಾನ್​ (Kareena Kapoor Khan) ನಡುವೆ ಉತ್ತಮ ಗೆಳೆತನ ಇದೆ. ‘3 ಈಡಿಯಟ್ಸ್​’, ‘ತಲಾಶ್​’ ಸಿನಿಮಾಗಳಲ್ಲಿ ಅವರಿಬ್ಬರು ಜೊತೆಯಾಗಿ ನಟಿಸಿದ್ದರು. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಮೂಲಕ ಈ ಜೋಡಿ ಮತ್ತೆ ಒಂದಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆ.11ರಂದು ‘ಲಾಲ್​ ಸಿಂಗ್​ ಚಡ್ಡಾ’ ಬಿಡುಗಡೆ ಆಗಲಿದೆ. ಈಗಾಗಲೇ ಈ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹಲವು ಕಾರಣಗಳಿಂದಾಗಿ ಈ ಚಿತ್ರದ ಮೇಲೆ ಆಮಿರ್ ಖಾನ್ (Aamir Khan)​ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಮಿಸ್ಟರ್​ ಪರ್ಫೆಕ್ಷನಿಸ್ಟ್​’ ಎಂದು ಕರೆಸಿಕೊಳ್ಳುವ ಅವರು ಒಂದು ಸಿನಿಮಾ ಮಾಡುತ್ತಾರೆ ಎಂದರೆ ಅದರಲ್ಲಿ ಏನಾದರೂ ವಿಶೇಷ ಇದ್ದೇ ಇರುತ್ತದೆ ಎಂಬುದು ಫ್ಯಾನ್ಸ್​ ನಂಬಿಕೆ. ಈ ಬಾರಿ ಅವರು ಅಭಿಮಾನಿಗಳಿಗೆ ಯಾವ ರೀತಿಯ ಮನರಂಜನೆ ನೀಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮನೆ ಮಾಡಿದೆ. ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಚಿತ್ರದ ಮೊದಲ ಹಾಡು ರಿಲೀಸ್​ ಆಗಿದೆ. ಅದರ ಜೊತೆಗೆ ಸೋಶಿಯಲ್​ ಮೀಡಿಯಾದಲ್ಲಿ ಒಂದು ಹೊಸ ಫಿಲ್ಟರ್​ ಅನ್ನು ಕೂಡ ಪರಿಚಯಿಸಲಾಗಿದೆ. ಅದಕ್ಕಾಗಿ ಆಮಿರ್ ಖಾನ್​ ಮತ್ತು ಕರೀನಾ ಕಪೂರ್​ ಖಾನ್ ಅವರು ಜೋಡಿಯಾಗಿ ವಿಡಿಯೋ ಮಾಡಿದ್ದಾರೆ.

ಸಂದರ್ಭಕ್ಕೆ ಅನುಗುಣವಾಗಿ ಇನ್​ಸ್ಟಾಗ್ರಾಮ್​ನಲ್ಲಿ ಅನೇಕ ಫಿಲ್ಟರ್​ಗಳನ್ನು ಪರಿಚಯಿಸಲಾಗುತ್ತದೆ. ಈಗ ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾದ ಪ್ರಚಾರಕ್ಕಾಗಿ ಈ ಹೊಸ ಫಿಲ್ಟರ್​ ಬಂದಿದೆ. ಅದನ್ನು ಆಮಿರ್​ ಖಾನ್​ ಮತ್ತು ಕರೀನಾ ಕಪೂರ್​ ಖಾನ್​ ಪ್ರಯತ್ನಿಸಿದ್ದಾರೆ. ‘ನನ್ನ ಹೀರೋ ಜೊತೆ ಫೆದರ್​ ಚಾಲೆಂಜ್​’ ಎಂದು ಈ ವಿಡಿಯೋಗೆ ಕರೀನಾ ಕ್ಯಾಪ್ಷನ್​ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇದನ್ನು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾಗೆ ಪ್ರಚಾರ ನೀಡುವ ಕೆಲಸ ಆಗುತ್ತಿದೆ.

ಈ ಮೊದಲೇ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರ ತೆರೆಕಂಡಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ಮುಂದೂಡುತ್ತಲೇ ಬಂತು. ಈಗ ಅಂತಿಮವಾಗಿ ಆಗಸ್ಟ್​ 11ರಂದು ಸಿನಿಮಾವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಸಿನಿಮಾದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಮೂಡಿಬಂದಿದೆ. ಮೂಲ ಸಿನಿಮಾದಲ್ಲಿ ಟಾಮ್​ ಹ್ಯಾಂಕ್ಸ್​ ಮಾಡಿದ್ದ ಪಾತ್ರವನ್ನು ಹಿಂದಿಯಲ್ಲಿ ಆಮಿರ್ ಖಾನ್​ ಮಾಡಿದ್ದಾರೆ. ಅವರಿಗೆ ಕರೀನಾ ಕಪೂರ್​ ಖಾನ್​ ಜೋಡಿಯಾಗಿದ್ದಾರೆ. ತುಂಬು ಗರ್ಭಿಣಿ ಆಗಿದ್ದಾಗಲೂ ಕರೀನಾ ಅವರು ಈ ಪಾತ್ರದ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು.

ಆಮಿರ್ ಖಾನ್​ ಅವರ ವಿವಿಧ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಸಿನಿಮಾದ ಕಥೆಯ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಇದೆ. ಈ ಚಿತ್ರದ ನಟನೆಗಾಗಿ ಅವರು ಬರೋಬ್ಬರಿ 50 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಇತ್ತೀಚೆಗೆ ವರದಿ ಆಗಿತ್ತು. ಕರೀನಾ ಕಪೂರ್​ ಅವರಿಗೆ 8 ಕೋಟಿ ರೂಪಾಯಿ ನೀಡಲಾಗಿದೆಯಂತೆ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ನಾಗ ಚೈತನ್ಯ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅವರಿಗೆ 6 ಕೋಟಿ ರೂಪಾಯಿ ನೀಡಲಾಗಿದೆ. ಈ ಸಿನಿಮಾದ ಶೂಟಿಂಗ್​ ಮುಗಿದ ಬಳಿಕ ಆಮಿರ್​ ಖಾನ್​ ಮತ್ತು ನಾಗ ಚೈತನ್ಯ ನಡುವಿನ ಸ್ನೇಹ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

ನಟನೆಗೆ ವಿದಾಯ ಹೇಳಲು ಆಮಿರ್​ ಖಾನ್​ ನಿರ್ಧಾರ ಮಾಡಿದ್ದ ಸಂಗತಿ ಬಯಲು; ಮಾಜಿ ಪತ್ನಿ ಏನು ಹೇಳಿದ್ರು?

‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು