AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಗನಿಗೆ ಒಳ್ಳೇ ಬುದ್ಧಿ ಕಲಿಸಿ’ ಎಂದು ಕರೀನಾ ಕಪೂರ್​ ಖಾನ್​ಗೆ ತಿವಿದ ನೆಟ್ಟಿಗರು: ತೈಮೂರ್​ ಮಾಡಿದ ತಪ್ಪೇನು?

Kareena Kapoor Khan Troll: ಕರೀನಾ ಕಪೂರ್​ ಖಾನ್​ ಅವರು ಆಗಾಗ ಟ್ರೋಲ್​ ಆಗುತ್ತಿರುತ್ತಾರೆ. ಈ ಬಾರಿ ತೈಮೂರ್​ ಅಲಿ ಖಾನ್​ ವಿಚಾರಕ್ಕೆ ಅವರನ್ನು ನೆಟ್ಟಿಗರು ಟಾರ್ಗೆಟ್​ ಮಾಡಿದ್ದಾರೆ.

‘ಮಗನಿಗೆ ಒಳ್ಳೇ ಬುದ್ಧಿ ಕಲಿಸಿ’ ಎಂದು ಕರೀನಾ ಕಪೂರ್​ ಖಾನ್​ಗೆ ತಿವಿದ ನೆಟ್ಟಿಗರು: ತೈಮೂರ್​ ಮಾಡಿದ ತಪ್ಪೇನು?
ಕರೀನಾ ಕಪೂರ್​ ಖಾನ್​, ತೈಮೂರ್​ ಅಲಿ ಖಾನ್
TV9 Web
| Edited By: |

Updated on: Apr 25, 2022 | 9:27 AM

Share

ಕೆಲವು ಸೆಲೆಬ್ರಿಟಿಗಳು ತಮ್ಮ ಮಕ್ಕಳನ್ನು ಕ್ಯಾಮೆರಾ ಮುಂದೆ ಬರಲು ಬಿಡುವುದಿಲ್ಲ. ತಮ್ಮ ಮಗಳ ಫೋಟೋ ತೆಗೆಯಬಾರದು ಎಂದು ಈಗಾಗಲೇ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ದಂಪತಿ ಎಲ್ಲರಿಗೂ ಮನವಿ ಮಾಡಿರುವುದು ಗೊತ್ತಿದೆ. ಆದರೆ ಕರೀನಾ ಕಪೂರ್​ ಖಾನ್​ (Kareena Kapoor Khan) ಮತ್ತು ಸೈಫ್​ ಅಲಿ ಖಾನ್​ ದಂಪತಿ ಆ ರೀತಿ ಅಲ್ಲ. ಅವರ ಮಗ ತೈಮೂರ್​ ಅಲಿ ಖಾನ್​ (Taimur Ali Khan) ಹೋದಲ್ಲಿ ಬಂದಲ್ಲಿ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಹೆಚ್ಚಿನ ಸಂದರ್ಭಗಳಲ್ಲಿ ಕರೀನಾ ಅಥವಾ ಸೈಫ್​ ಇದಕ್ಕೆ ಅಡ್ಡಿ ಪಡಿಸುವುದಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ತೈಮೂರ್​ ಅಲಿ ಖಾನ್​ನ ಅನೇಕ ವಿಡಿಯೋ ಮತ್ತು ಫೋಟೋಗಳು (Taimur Ali Khan Photo) ಆಗಾಗ ವೈರಲ್​ ಆಗುತ್ತದೆ. ಆದರೆ ಇತ್ತೀಚೆಗೆ ವೈರಲ್​ ಆಗಿರುವ ಒಂದು ವಿಡಿಯೋ ಕಂಡು ಕೆಲವು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ಮಗನಿಗೆ ಒಳ್ಳೆಯ ಬುದ್ಧಿ ಕಲಿಸಿ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಅಷ್ಟಕ್ಕೂ ತೈಮೂರ್​ ಅಲಿ ಖಾನ್​ ಮಾಡಿರುವ ತಪ್ಪು ಏನು? ನೆಟ್ಟಿಗರು ಯಾಕೆ ಈ ರೀತಿ ಕಮೆಂಟ್​ ಮಾಡುತ್ತಿದ್ದಾರೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ..

ತೈಮೂರ್​ ಅಲಿ ಖಾನ್​ ಸಾರ್ವಜನಿಕವಾಗಿ ಎಲ್ಲೇ ಕಾಣಿಸಿಕೊಂಡರೂ ಆತನ ಫೋಟೋ ಮತ್ತು ವಿಡಿಯೋ ಸೆರೆ ಹಿಡಿಯುವ ಸಲುವಾಗಿ ಮಾಧ್ಯಮದ ಕ್ಯಾಮೆರಾಗಳು ಹಪಹಪಿಸುತ್ತವೆ. ಇದು ಕೆಲವೊಮ್ಮೆ ತೈಮೂರ್​ ಅಲಿ ಖಾನ್​ಗೆ ಕಿರಿಕಿರಿ ಅನಿಸುವುದುಂಟು. ಈಗಲೂ ಹಾಗೆಯೇ ಆಗಿದೆ. ತನ್ನ ಫೋಟೋ ತೆಗೆಯಲು ಬಂದ ಪಾಪರಾಜಿಗಳಿಗೆ ತೈಮೂರ್​ ಕೊಂಚ ಕಟುವಾಗಿ ವಿರೋಧ ವ್ಯಕ್ತಪಡಿಸಿದ್ದಾನೆ. ‘ಕ್ಯಾಮೆರಾ ಆಫ್​ ಮಾಡು’ ಎಂದು ಖಾರವಾಗಿ ನುಡಿದಿದ್ದಾನೆ. ಈ ವಿಡಿಯೋ ವೈರಲ್​ ಆಗುತ್ತಿದೆ.

‘ತಂದೆ-ತಾಯಿ ಕಲಿಸಿದ ರೀತಿಯಲ್ಲೇ ಮಕ್ಕಳು ಮಾತನಾಡುತ್ತವೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಆದರೆ ‘ನಿಮ್ಮ ಮಗನಿಗೆ ಒಳ್ಳೆಯ ಬುದ್ಧಿ ಕಲಿಸಿ’ ಎಂದು ಕೆಲವು ನೆಟ್ಟಿಗರು ಬಿಟ್ಟಿ ಸಲಹೆ ನೀಡಿದ್ದನ್ನು ಒಂದಷ್ಟು ಮಂದಿ ವಿರೋಧಿಸಿದ್ದಾರೆ. ‘ಎಲ್ಲ ಮಕ್ಕಳು ಕೂಡ ಇದೇ ರೀತಿ ಮಾತನಾಡುವುದು. ಅದರಲ್ಲಿ ತಪ್ಪೇನೂ ಇಲ್ಲ’ ಎಂದು ಕೆಲವರು ತೈಮೂರ್​ ಪರ ಬ್ಯಾಟ್​ ಬೀಸಿದ್ದಾರೆ. ‘ಸೆಲೆಬ್ರಿಟಿಗಳಿಗೆ ಅವರದ್ದೇ ಆದ ಖಾಸಗಿ ಜೀವನ ಇರುತ್ತದೆ. ಅವರ ಖಾಸಗಿತನಕ್ಕೆ ಧಕ್ಕೆ ಆಗುವಂತೆ ನಡೆದುಕೊಳ್ಳಬಾರದು’ ಎಂದು ಪಾಪರಾಜಿಗಳಿಗೆ ಕೆಲವರು ಚಾಟಿ ಬೀಸಿದ್ದಾರೆ.

ಒಂದಿಲ್ಲೊಂದು ಕಾರಣಕ್ಕೆ ಕರೀನಾ ಕಪೂರ್​ ಖಾನ್​ ಅವರು ಟ್ರೋಲ್​ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಖಾಸಗಿ ಆಭರಣ ಕಂಪನಿಯೊಂದರ ಜಾಹೀರಾತಿನಲ್ಲಿ ನಟಿಸಿದ್ದರು. ಅದರಲ್ಲಿ ಅವರು ಹಣೆಗೆ ಬಿಂದಿ ಹಾಕಿಲ್ಲ ಎನ್ನುವ ಕಾರಣಕ್ಕೆ ಜನರು ಟ್ರೋಲ್​ ಮಾಡಿದ್ದರು. ಅಲ್ಲದೇ ಆ ಜ್ಯುವೆಲ್ಲರಿ ಕಂಪನಿಯ ಆಭರಣಗಳನ್ನು ಬಹಿಷ್ಕರಿಸಿ ಎಂದು ಕೂಡ ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಹ್ಯಾಶ್​ಟ್ಯಾಗ್​ ಅಭಿಯಾನ ಆರಂಭಿಸಿದ್ದರು.

ಕರೀನಾ ಕಪೂರ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ಅವರು ಆಮಿರ್ ಖಾನ್​ಗೆ ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಟಿಸಲು ಅವರಿಗೆ 8 ಕೋಟಿ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಕೆಲವೆಡೆ ವರದಿ ಆಗಿದೆ. ಆಗಸ್ಟ್​ 11ರಂದು ‘ಲಾಲ್​ ಸಿಂಗ್​ ಚಡ್ಡಾ’ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

‘ತೈಮೂರ್​ ಜತೆಗೂ ಅಕ್ಷಯ್​ ಸಿನಿಮಾ ಮಾಡ್ತಾರೆ’; ಕರೀನಾ​ ಹೇಳಿದ ಈ ಮಾತು ನಿಜವೋ? ತಮಾಷೆಯೋ?

ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಮಿಂಚಿದ ಕರೀನಾ ಕಪೂರ್​; ಇಲ್ಲಿವೆ ಕಲರ್​ಫುಲ್​ ಫೋಟೋಗಳು

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು