AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು

ಕರೀನಾ ಕಪೂರ್​ ಹಾಗೂ ಸೈಫ್​ ಅಲಿ ಖಾನ್​ ಸಾಕಷ್ಟು ಬಾರಿ ಟ್ರೋಲ್​ಗಳಿಗೆ ಆಹಾರವಾಗಿದ್ದಾರೆ. ಮದುವೆ ವಿಚಾರ, ಅವರ ಸಂಭಾವನೆ ವಿಚಾರ, ಕೊನೆಗೆ ಮಕ್ಕಳ ವಿಚಾರದಲ್ಲೂ ಈ ದಂಪತಿ ಟ್ರೋಲ್​ಗೆ ಒಳಗಾಗಿದ್ದಾರೆ.

ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು
ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 05, 2021 | 2:42 PM

Share

ಕರೀನಾ ಕಪೂರ್​ ಹಾಗೂ ಸೈಫ್​ ಅಲಿ ಖಾನ್​ ಮದುವೆ ಆಗಿ ಅನೇಕ ವರ್ಷಗಳು ಕಳೆದಿವೆ. ಕರೀನಾಗೆ ಇಬ್ಬರು ಮಕ್ಕಳು ಜನಿಸಿದ್ದು, ಹಾಯಾಗಿ ಕುಟುಂಬ ನಡೆಸಿಕೊಂಡು ಹೋಗುತ್ತಿದ್ದಾರೆ. ಮೊದಲಿಗೆ ಹೋಲಿಕೆ ಮಾಡಿದರೆ ಕರೀನಾ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್​ ಆಗಿಲ್ಲ. ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿಯಾಗಿರುವ ಅವರು, ಸಿನಿಮಾದಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿಲ್ಲ. ಈ ಮಧ್ಯೆ ಸೈಫ್​ಗೆ ಕರೀನಾ ಕಡೆಯಿಂದ ಕಟ್ಟುನಿಟ್ಟಿನ ಆದೇಶವೊಂದು ಬಂದಿದೆ. ಇದನ್ನು ಅವರು ಈಗ ಪಾಲಿಸಲೇಬೇಕಾಗಿದೆ. ಅಷ್ಟಕ್ಕೂ ಏನಿದು ಆದೇಶ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕರೀನಾ ಕಪೂರ್​ ಹಾಗೂ ಸೈಫ್​ ಅಲಿ ಖಾನ್​ ಸಾಕಷ್ಟು ಬಾರಿ ಟ್ರೋಲ್​ಗಳಿಗೆ ಆಹಾರವಾಗಿದ್ದಾರೆ. ಮದುವೆ ವಿಚಾರ, ಅವರ ಸಂಭಾವನೆ ವಿಚಾರ, ಕೊನೆಗೆ ಮಕ್ಕಳ ವಿಚಾರದಲ್ಲೂ ಈ ದಂಪತಿ ಟ್ರೋಲ್​ಗೆ ಒಳಗಾಗಿದ್ದಾರೆ. ನಿರಂತರವಾಗಿ ಟೀಕೆಗೆ ಒಳಗಾಗುತ್ತಿದ್ದರೆ ಮಾನಸಿಕವಾಗಿ ಕುಗ್ಗುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ಸೈಫ್​ಗೆ ಟ್ರೋಲ್​ಗಳನ್ನು ನೋಡದಂತೆ ಹಾಗೂ ತಮ್ಮ ಬಗ್ಗೆ ತಾವೇ ಗೂಗಲ್​ನಲ್ಲಿ ಸರ್ಚ್​ ಮಾಡದಂತೆ ಸೂಚಿಸಿದ್ದಾರೆ ಕರೀನಾ. ಈ ವಿಚಾರವನ್ನು ಸೈಫ್​ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

‘ನಾನು ಟ್ರೋಲ್​ ಹಾಗೂ ಕಮೆಂಟ್​ಗಳನ್ನು ಓದುವುದಿಲ್ಲ. ಹಾಗೆ ಓದದೇ ಇದ್ದರೆ ತುಂಬಾನೇ ಕೂಲ್​​ ಆಗಿ ಇರಬಹುದು. ಜತೆಗೆ ಒಂದು ವಿಚಾರದ ಬಗ್ಗೆ ಫೋಕಸ್​ ಆಗಿ ಇರಬಹುದು. ನನ್ನ ಬಗ್ಗೆ ನಾನೇ ಗೂಗಲ್​ನಲ್ಲಿ ಸರ್ಚ್​ ಮಾಡಿ ನೋಡಿಕೊಳ್ಳಬಹುದು. ಆದರೆ, ಕೆಲ ವಿಚಾರಗಳು ನನಗೆ ಇಷ್ಟವಾಗುವುದಿಲ್ಲ. ಅದು ನನ್ನ ಮೂಡ್​ ಹಾಳು ಮಾಡಬಹುದು’ ಎಂದಿದ್ದಾರೆ ಅವರು.

‘ಸೋಶಿಯಲ್​ ಮೀಡಿಯಾ ತುಂಬಾನೇ ಡೇಂಜರ್​. ಅಲ್ಲಿ ಬೇಡದ ವಿಚಾರಗಳು ಸಾಕಷ್ಟು ಸಿಗುತ್ತವೆ. ಈ ಕಾರಣಕ್ಕೆ ಕರೀನಾ ನನಗೆ ನನ್ನ ಬಗ್ಗೆ ಗೂಗಲ್​ನಲ್ಲಿ ಸರ್ಚ್​ ಮಾಡಬೇಡಿ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾಳೆ’ ಎಂದಿದ್ದಾರೆ ಸೈಫ್.

ಸೈಫ್​ ಸೋಶಿಯಲ್​ ಮೀಡಿಯಾದಲ್ಲಿ ಇಲ್ಲ. ಕರೀನಾ 2020ರಲ್ಲಿ ಇನ್​ಸ್ಟಾಗ್ರಾಮ್​ಗೆ ಎಂಟ್ರಿ ಕೊಟ್ಟಿದ್ದರು. ನಂತರ ಅವರು ಆಗೊಂದು ಈಗೊಂದು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಸೈಫ್​ ಸದ್ಯ, ಭೂತ್​ ಪೊಲೀಸ್​ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಕರೀನಾ ಎರಡನೇ ಮಗು ಜನಿಸಿದ ನಂತರದಲ್ಲಿ ಪುಸ್ತಕ ಕೂಡ ಬರೆದಿದ್ದಾರೆ.

ಇದನ್ನೂ ಓದಿ: Kareena Kapoor: ಮಕ್ಕಳನ್ನು ಕರೆದುಕೊಂಡು ತಂದೆಯ ಮನೆಗೆ ಹೊರಟ ಕರೀನಾ; ಏನು ವಿಶೇಷ?

‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?