AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು

ಕರೀನಾ ಕಪೂರ್​ ಹಾಗೂ ಸೈಫ್​ ಅಲಿ ಖಾನ್​ ಸಾಕಷ್ಟು ಬಾರಿ ಟ್ರೋಲ್​ಗಳಿಗೆ ಆಹಾರವಾಗಿದ್ದಾರೆ. ಮದುವೆ ವಿಚಾರ, ಅವರ ಸಂಭಾವನೆ ವಿಚಾರ, ಕೊನೆಗೆ ಮಕ್ಕಳ ವಿಚಾರದಲ್ಲೂ ಈ ದಂಪತಿ ಟ್ರೋಲ್​ಗೆ ಒಳಗಾಗಿದ್ದಾರೆ.

ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು
ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು
TV9 Web
| Edited By: |

Updated on: Sep 05, 2021 | 2:42 PM

Share

ಕರೀನಾ ಕಪೂರ್​ ಹಾಗೂ ಸೈಫ್​ ಅಲಿ ಖಾನ್​ ಮದುವೆ ಆಗಿ ಅನೇಕ ವರ್ಷಗಳು ಕಳೆದಿವೆ. ಕರೀನಾಗೆ ಇಬ್ಬರು ಮಕ್ಕಳು ಜನಿಸಿದ್ದು, ಹಾಯಾಗಿ ಕುಟುಂಬ ನಡೆಸಿಕೊಂಡು ಹೋಗುತ್ತಿದ್ದಾರೆ. ಮೊದಲಿಗೆ ಹೋಲಿಕೆ ಮಾಡಿದರೆ ಕರೀನಾ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್​ ಆಗಿಲ್ಲ. ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿಯಾಗಿರುವ ಅವರು, ಸಿನಿಮಾದಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿಲ್ಲ. ಈ ಮಧ್ಯೆ ಸೈಫ್​ಗೆ ಕರೀನಾ ಕಡೆಯಿಂದ ಕಟ್ಟುನಿಟ್ಟಿನ ಆದೇಶವೊಂದು ಬಂದಿದೆ. ಇದನ್ನು ಅವರು ಈಗ ಪಾಲಿಸಲೇಬೇಕಾಗಿದೆ. ಅಷ್ಟಕ್ಕೂ ಏನಿದು ಆದೇಶ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕರೀನಾ ಕಪೂರ್​ ಹಾಗೂ ಸೈಫ್​ ಅಲಿ ಖಾನ್​ ಸಾಕಷ್ಟು ಬಾರಿ ಟ್ರೋಲ್​ಗಳಿಗೆ ಆಹಾರವಾಗಿದ್ದಾರೆ. ಮದುವೆ ವಿಚಾರ, ಅವರ ಸಂಭಾವನೆ ವಿಚಾರ, ಕೊನೆಗೆ ಮಕ್ಕಳ ವಿಚಾರದಲ್ಲೂ ಈ ದಂಪತಿ ಟ್ರೋಲ್​ಗೆ ಒಳಗಾಗಿದ್ದಾರೆ. ನಿರಂತರವಾಗಿ ಟೀಕೆಗೆ ಒಳಗಾಗುತ್ತಿದ್ದರೆ ಮಾನಸಿಕವಾಗಿ ಕುಗ್ಗುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ಸೈಫ್​ಗೆ ಟ್ರೋಲ್​ಗಳನ್ನು ನೋಡದಂತೆ ಹಾಗೂ ತಮ್ಮ ಬಗ್ಗೆ ತಾವೇ ಗೂಗಲ್​ನಲ್ಲಿ ಸರ್ಚ್​ ಮಾಡದಂತೆ ಸೂಚಿಸಿದ್ದಾರೆ ಕರೀನಾ. ಈ ವಿಚಾರವನ್ನು ಸೈಫ್​ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

‘ನಾನು ಟ್ರೋಲ್​ ಹಾಗೂ ಕಮೆಂಟ್​ಗಳನ್ನು ಓದುವುದಿಲ್ಲ. ಹಾಗೆ ಓದದೇ ಇದ್ದರೆ ತುಂಬಾನೇ ಕೂಲ್​​ ಆಗಿ ಇರಬಹುದು. ಜತೆಗೆ ಒಂದು ವಿಚಾರದ ಬಗ್ಗೆ ಫೋಕಸ್​ ಆಗಿ ಇರಬಹುದು. ನನ್ನ ಬಗ್ಗೆ ನಾನೇ ಗೂಗಲ್​ನಲ್ಲಿ ಸರ್ಚ್​ ಮಾಡಿ ನೋಡಿಕೊಳ್ಳಬಹುದು. ಆದರೆ, ಕೆಲ ವಿಚಾರಗಳು ನನಗೆ ಇಷ್ಟವಾಗುವುದಿಲ್ಲ. ಅದು ನನ್ನ ಮೂಡ್​ ಹಾಳು ಮಾಡಬಹುದು’ ಎಂದಿದ್ದಾರೆ ಅವರು.

‘ಸೋಶಿಯಲ್​ ಮೀಡಿಯಾ ತುಂಬಾನೇ ಡೇಂಜರ್​. ಅಲ್ಲಿ ಬೇಡದ ವಿಚಾರಗಳು ಸಾಕಷ್ಟು ಸಿಗುತ್ತವೆ. ಈ ಕಾರಣಕ್ಕೆ ಕರೀನಾ ನನಗೆ ನನ್ನ ಬಗ್ಗೆ ಗೂಗಲ್​ನಲ್ಲಿ ಸರ್ಚ್​ ಮಾಡಬೇಡಿ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾಳೆ’ ಎಂದಿದ್ದಾರೆ ಸೈಫ್.

ಸೈಫ್​ ಸೋಶಿಯಲ್​ ಮೀಡಿಯಾದಲ್ಲಿ ಇಲ್ಲ. ಕರೀನಾ 2020ರಲ್ಲಿ ಇನ್​ಸ್ಟಾಗ್ರಾಮ್​ಗೆ ಎಂಟ್ರಿ ಕೊಟ್ಟಿದ್ದರು. ನಂತರ ಅವರು ಆಗೊಂದು ಈಗೊಂದು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಸೈಫ್​ ಸದ್ಯ, ಭೂತ್​ ಪೊಲೀಸ್​ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಕರೀನಾ ಎರಡನೇ ಮಗು ಜನಿಸಿದ ನಂತರದಲ್ಲಿ ಪುಸ್ತಕ ಕೂಡ ಬರೆದಿದ್ದಾರೆ.

ಇದನ್ನೂ ಓದಿ: Kareena Kapoor: ಮಕ್ಕಳನ್ನು ಕರೆದುಕೊಂಡು ತಂದೆಯ ಮನೆಗೆ ಹೊರಟ ಕರೀನಾ; ಏನು ವಿಶೇಷ?

‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ