AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಪೂರ್​​​ಗೆ ಬಾಡಿಗೆ ತಾಯ್ತನದ ಆಲೋಚನೆ; ಅಚ್ಚರಿಯ ವಿಚಾರ ಬಿಚ್ಚಿಟ್ಟ ನಟಿ

ತೈಮೂರ್​ ಅಲಿ ಖಾನ್​​ ಜನಿಸಿದ ನಾಲ್ಕು ವರ್ಷಗಳ ನಂತರದಲ್ಲಿ ಕರೀನಾಗೆ ಮತ್ತೊಂದು ಮಗು ಜನಿಸಿದೆ. ಫೆಬ್ರವರಿ ತಿಂಗಳಲ್ಲಿ ಹೊಸ ಸದಸ್ಯನ ಆಗಮನ ಆಗಿತ್ತು.

ಕರೀನಾ ಕಪೂರ್​​​ಗೆ ಬಾಡಿಗೆ ತಾಯ್ತನದ ಆಲೋಚನೆ; ಅಚ್ಚರಿಯ ವಿಚಾರ ಬಿಚ್ಚಿಟ್ಟ ನಟಿ
ಕರೀನಾ ಕಪೂರ್​ ಖಾನ್​
TV9 Web
| Edited By: |

Updated on:Aug 18, 2021 | 8:09 PM

Share

ವಿಜ್ಞಾನ ಹಾಗೂ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಭೂಮಿಯ ಅಂತರಾಳದಿಂದ ಹಿಡಿದು, ಆಗಸದ ತುದಿಗೆ ಮಾನವ ಅಧ್ಯಯನ ನಡೆಸುತ್ತಿದ್ದಾನೆ. ಇದರ ಜತೆಗೆ ಮಗುವನ್ನು ಪಡೆಯುವ ವಿಚಾರದಲ್ಲೂ ಮನುಷ್ಯ ಒಂದಷ್ಟು ಅಧ್ಯಯನ ನಡೆಸಿದ್ದಾನೆ. ಅದರಲ್ಲಿ ಬಾಡಿಗೆ ತಾಯ್ತನ ಕೂಡ ಒಂದು. ಈ ಬಗ್ಗೆ ಕರೀನಾ ಕಪೂರ್ ಹಾಗೂ ಸೈಫ್​ ಅಲಿ ಖಾನ್​ ಚರ್ಚೆ ನಡೆಸಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ತೈಮೂರ್​ ಅಲಿ ಖಾನ್​​ ಜನಿಸಿದ ನಾಲ್ಕು ವರ್ಷಗಳ ನಂತರದಲ್ಲಿ ಕರೀನಾಗೆ ಮತ್ತೊಂದು ಮಗು ಜನಿಸಿದೆ. ಫೆಬ್ರವರಿ ತಿಂಗಳಲ್ಲಿ ಹೊಸ ಸದಸ್ಯನ ಆಗಮನ ಆಗಿತ್ತು. ಇದಕ್ಕೂ ಮೊದಲು ಸೈಫ್​ ಹಾಗೂ ಕರೀನಾ ಬಾಡಿಗೆ ತಾಯ್ತನದ ಬಗ್ಗೆ ಆಲೋಚನೆ ಮಾಡಿದ್ದರಂತೆ.

‘ನಾನು ಹಾಗೂ ಸೈಫ್​ ಇಬ್ಬರೂ ಬಾಡಿಗೆ ತಾಯ್ತನದ ಬಗ್ಗೆ ಮಾತುಕತೆ ನಡೆಸಿದ್ದೆವು. ನಾರ್ಮಲ್​ ಆಗಿ ಮಗುವನ್ನು ಪಡೆಯುವ ಪ್ರಯತ್ನ ಮಾಡೋಣ, ಆಗದಿದ್ದರೆ ಬಾಡಿಗೆ ತಾಯ್ತನದ ಬಗ್ಗೆ ಆಲೋಚಿಸೋಣ ಎಂದು ನಾವಿಬ್ಬರೂ ನಿರ್ಧರಿಸಿದ್ದೆವು. ಆದರೆ, ದೇವರ ದಯೆಯಿಂದ ಮಗುವಾಗಿದೆ. ಬಾಡಿಗೆ ತಾಯ್ತನ ಅನ್ನೋದು ನಮ್ಮ ಎರಡನೇ ಆಯ್ಕೆ ಆಗಿತ್ತು’ ಎಂದಿದ್ದಾರೆ ಅವರು.

‘ನಾನು ಸೈಫ್​ ಮದುವೆ ಆದ ನಂತರದಲ್ಲಿ ನನ್ನ ಕರಿಯರ್​ ಅಂತ್ಯಗೊಂಡಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಮದುವೆ ನಂತರವೂ ವೃತ್ತಿಜೀವನಕ್ಕೆ ಧಕ್ಕೆ ಆಗುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಾನು ಮದುವೆ ಆದಾಗ ನನಗೆ ಅವಕಾಶ ಸಿಗುವುದಿಲ್ಲ ಎಂದುಕೊಂಡಿದ್ದರು. ಆದರೆ, ಈಗ ಅದು ಸುಳ್ಳು ಎಂಬುದು ಸಾಬೀತಾಗಿದೆ ಎಂದಿದ್ದಾರೆ’ ಕರೀನಾ.

ಸೈಫ್​ ಅಲಿ ಖಾನ್ ಮತ್ತು ಕರೀನಾ ಕಪೂರ್​ ಖಾನ್​ ಮೊದಲ ಮಗುವಿಗೆ ತೈಮೂರ್​ ಅಲಿ ಖಾನ್​ ಎಂದು ನಾಮಕರಣ ಮಾಡಿದ್ದು ಬಹಳ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಅನೇಕರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಈಗ ಸೈಫ್​-ಕರೀನಾ ಎರಡನೇ ಮಗುವಿಗೆ ಜಹಾಂಗೀರ್​ ಎಂದು ನಾಮಕರಣ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Kareena Kapoor: ಸೀತೆಯ ಪಾತ್ರಕ್ಕೆ 12 ಕೋಟಿ ಸಂಭಾವನೆ ಕೇಳಿದ ಸುದ್ದಿಗೆ ತಲೆ ಅಲ್ಲಾಡಿಸಿದ ಕರೀನಾ; ಏನಿದರ ಅರ್ಥ?

Published On - 8:05 pm, Wed, 18 August 21

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು