AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಪೂರ್​​​ಗೆ ಬಾಡಿಗೆ ತಾಯ್ತನದ ಆಲೋಚನೆ; ಅಚ್ಚರಿಯ ವಿಚಾರ ಬಿಚ್ಚಿಟ್ಟ ನಟಿ

ತೈಮೂರ್​ ಅಲಿ ಖಾನ್​​ ಜನಿಸಿದ ನಾಲ್ಕು ವರ್ಷಗಳ ನಂತರದಲ್ಲಿ ಕರೀನಾಗೆ ಮತ್ತೊಂದು ಮಗು ಜನಿಸಿದೆ. ಫೆಬ್ರವರಿ ತಿಂಗಳಲ್ಲಿ ಹೊಸ ಸದಸ್ಯನ ಆಗಮನ ಆಗಿತ್ತು.

ಕರೀನಾ ಕಪೂರ್​​​ಗೆ ಬಾಡಿಗೆ ತಾಯ್ತನದ ಆಲೋಚನೆ; ಅಚ್ಚರಿಯ ವಿಚಾರ ಬಿಚ್ಚಿಟ್ಟ ನಟಿ
ಕರೀನಾ ಕಪೂರ್​ ಖಾನ್​
TV9 Web
| Edited By: |

Updated on:Aug 18, 2021 | 8:09 PM

Share

ವಿಜ್ಞಾನ ಹಾಗೂ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಭೂಮಿಯ ಅಂತರಾಳದಿಂದ ಹಿಡಿದು, ಆಗಸದ ತುದಿಗೆ ಮಾನವ ಅಧ್ಯಯನ ನಡೆಸುತ್ತಿದ್ದಾನೆ. ಇದರ ಜತೆಗೆ ಮಗುವನ್ನು ಪಡೆಯುವ ವಿಚಾರದಲ್ಲೂ ಮನುಷ್ಯ ಒಂದಷ್ಟು ಅಧ್ಯಯನ ನಡೆಸಿದ್ದಾನೆ. ಅದರಲ್ಲಿ ಬಾಡಿಗೆ ತಾಯ್ತನ ಕೂಡ ಒಂದು. ಈ ಬಗ್ಗೆ ಕರೀನಾ ಕಪೂರ್ ಹಾಗೂ ಸೈಫ್​ ಅಲಿ ಖಾನ್​ ಚರ್ಚೆ ನಡೆಸಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ತೈಮೂರ್​ ಅಲಿ ಖಾನ್​​ ಜನಿಸಿದ ನಾಲ್ಕು ವರ್ಷಗಳ ನಂತರದಲ್ಲಿ ಕರೀನಾಗೆ ಮತ್ತೊಂದು ಮಗು ಜನಿಸಿದೆ. ಫೆಬ್ರವರಿ ತಿಂಗಳಲ್ಲಿ ಹೊಸ ಸದಸ್ಯನ ಆಗಮನ ಆಗಿತ್ತು. ಇದಕ್ಕೂ ಮೊದಲು ಸೈಫ್​ ಹಾಗೂ ಕರೀನಾ ಬಾಡಿಗೆ ತಾಯ್ತನದ ಬಗ್ಗೆ ಆಲೋಚನೆ ಮಾಡಿದ್ದರಂತೆ.

‘ನಾನು ಹಾಗೂ ಸೈಫ್​ ಇಬ್ಬರೂ ಬಾಡಿಗೆ ತಾಯ್ತನದ ಬಗ್ಗೆ ಮಾತುಕತೆ ನಡೆಸಿದ್ದೆವು. ನಾರ್ಮಲ್​ ಆಗಿ ಮಗುವನ್ನು ಪಡೆಯುವ ಪ್ರಯತ್ನ ಮಾಡೋಣ, ಆಗದಿದ್ದರೆ ಬಾಡಿಗೆ ತಾಯ್ತನದ ಬಗ್ಗೆ ಆಲೋಚಿಸೋಣ ಎಂದು ನಾವಿಬ್ಬರೂ ನಿರ್ಧರಿಸಿದ್ದೆವು. ಆದರೆ, ದೇವರ ದಯೆಯಿಂದ ಮಗುವಾಗಿದೆ. ಬಾಡಿಗೆ ತಾಯ್ತನ ಅನ್ನೋದು ನಮ್ಮ ಎರಡನೇ ಆಯ್ಕೆ ಆಗಿತ್ತು’ ಎಂದಿದ್ದಾರೆ ಅವರು.

‘ನಾನು ಸೈಫ್​ ಮದುವೆ ಆದ ನಂತರದಲ್ಲಿ ನನ್ನ ಕರಿಯರ್​ ಅಂತ್ಯಗೊಂಡಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಮದುವೆ ನಂತರವೂ ವೃತ್ತಿಜೀವನಕ್ಕೆ ಧಕ್ಕೆ ಆಗುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಾನು ಮದುವೆ ಆದಾಗ ನನಗೆ ಅವಕಾಶ ಸಿಗುವುದಿಲ್ಲ ಎಂದುಕೊಂಡಿದ್ದರು. ಆದರೆ, ಈಗ ಅದು ಸುಳ್ಳು ಎಂಬುದು ಸಾಬೀತಾಗಿದೆ ಎಂದಿದ್ದಾರೆ’ ಕರೀನಾ.

ಸೈಫ್​ ಅಲಿ ಖಾನ್ ಮತ್ತು ಕರೀನಾ ಕಪೂರ್​ ಖಾನ್​ ಮೊದಲ ಮಗುವಿಗೆ ತೈಮೂರ್​ ಅಲಿ ಖಾನ್​ ಎಂದು ನಾಮಕರಣ ಮಾಡಿದ್ದು ಬಹಳ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಅನೇಕರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಈಗ ಸೈಫ್​-ಕರೀನಾ ಎರಡನೇ ಮಗುವಿಗೆ ಜಹಾಂಗೀರ್​ ಎಂದು ನಾಮಕರಣ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Kareena Kapoor: ಸೀತೆಯ ಪಾತ್ರಕ್ಕೆ 12 ಕೋಟಿ ಸಂಭಾವನೆ ಕೇಳಿದ ಸುದ್ದಿಗೆ ತಲೆ ಅಲ್ಲಾಡಿಸಿದ ಕರೀನಾ; ಏನಿದರ ಅರ್ಥ?

Published On - 8:05 pm, Wed, 18 August 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ