Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಪೂರ್​​​ಗೆ ಬಾಡಿಗೆ ತಾಯ್ತನದ ಆಲೋಚನೆ; ಅಚ್ಚರಿಯ ವಿಚಾರ ಬಿಚ್ಚಿಟ್ಟ ನಟಿ

ತೈಮೂರ್​ ಅಲಿ ಖಾನ್​​ ಜನಿಸಿದ ನಾಲ್ಕು ವರ್ಷಗಳ ನಂತರದಲ್ಲಿ ಕರೀನಾಗೆ ಮತ್ತೊಂದು ಮಗು ಜನಿಸಿದೆ. ಫೆಬ್ರವರಿ ತಿಂಗಳಲ್ಲಿ ಹೊಸ ಸದಸ್ಯನ ಆಗಮನ ಆಗಿತ್ತು.

ಕರೀನಾ ಕಪೂರ್​​​ಗೆ ಬಾಡಿಗೆ ತಾಯ್ತನದ ಆಲೋಚನೆ; ಅಚ್ಚರಿಯ ವಿಚಾರ ಬಿಚ್ಚಿಟ್ಟ ನಟಿ
ಕರೀನಾ ಕಪೂರ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 18, 2021 | 8:09 PM

ವಿಜ್ಞಾನ ಹಾಗೂ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಭೂಮಿಯ ಅಂತರಾಳದಿಂದ ಹಿಡಿದು, ಆಗಸದ ತುದಿಗೆ ಮಾನವ ಅಧ್ಯಯನ ನಡೆಸುತ್ತಿದ್ದಾನೆ. ಇದರ ಜತೆಗೆ ಮಗುವನ್ನು ಪಡೆಯುವ ವಿಚಾರದಲ್ಲೂ ಮನುಷ್ಯ ಒಂದಷ್ಟು ಅಧ್ಯಯನ ನಡೆಸಿದ್ದಾನೆ. ಅದರಲ್ಲಿ ಬಾಡಿಗೆ ತಾಯ್ತನ ಕೂಡ ಒಂದು. ಈ ಬಗ್ಗೆ ಕರೀನಾ ಕಪೂರ್ ಹಾಗೂ ಸೈಫ್​ ಅಲಿ ಖಾನ್​ ಚರ್ಚೆ ನಡೆಸಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ತೈಮೂರ್​ ಅಲಿ ಖಾನ್​​ ಜನಿಸಿದ ನಾಲ್ಕು ವರ್ಷಗಳ ನಂತರದಲ್ಲಿ ಕರೀನಾಗೆ ಮತ್ತೊಂದು ಮಗು ಜನಿಸಿದೆ. ಫೆಬ್ರವರಿ ತಿಂಗಳಲ್ಲಿ ಹೊಸ ಸದಸ್ಯನ ಆಗಮನ ಆಗಿತ್ತು. ಇದಕ್ಕೂ ಮೊದಲು ಸೈಫ್​ ಹಾಗೂ ಕರೀನಾ ಬಾಡಿಗೆ ತಾಯ್ತನದ ಬಗ್ಗೆ ಆಲೋಚನೆ ಮಾಡಿದ್ದರಂತೆ.

‘ನಾನು ಹಾಗೂ ಸೈಫ್​ ಇಬ್ಬರೂ ಬಾಡಿಗೆ ತಾಯ್ತನದ ಬಗ್ಗೆ ಮಾತುಕತೆ ನಡೆಸಿದ್ದೆವು. ನಾರ್ಮಲ್​ ಆಗಿ ಮಗುವನ್ನು ಪಡೆಯುವ ಪ್ರಯತ್ನ ಮಾಡೋಣ, ಆಗದಿದ್ದರೆ ಬಾಡಿಗೆ ತಾಯ್ತನದ ಬಗ್ಗೆ ಆಲೋಚಿಸೋಣ ಎಂದು ನಾವಿಬ್ಬರೂ ನಿರ್ಧರಿಸಿದ್ದೆವು. ಆದರೆ, ದೇವರ ದಯೆಯಿಂದ ಮಗುವಾಗಿದೆ. ಬಾಡಿಗೆ ತಾಯ್ತನ ಅನ್ನೋದು ನಮ್ಮ ಎರಡನೇ ಆಯ್ಕೆ ಆಗಿತ್ತು’ ಎಂದಿದ್ದಾರೆ ಅವರು.

‘ನಾನು ಸೈಫ್​ ಮದುವೆ ಆದ ನಂತರದಲ್ಲಿ ನನ್ನ ಕರಿಯರ್​ ಅಂತ್ಯಗೊಂಡಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಮದುವೆ ನಂತರವೂ ವೃತ್ತಿಜೀವನಕ್ಕೆ ಧಕ್ಕೆ ಆಗುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಾನು ಮದುವೆ ಆದಾಗ ನನಗೆ ಅವಕಾಶ ಸಿಗುವುದಿಲ್ಲ ಎಂದುಕೊಂಡಿದ್ದರು. ಆದರೆ, ಈಗ ಅದು ಸುಳ್ಳು ಎಂಬುದು ಸಾಬೀತಾಗಿದೆ ಎಂದಿದ್ದಾರೆ’ ಕರೀನಾ.

ಸೈಫ್​ ಅಲಿ ಖಾನ್ ಮತ್ತು ಕರೀನಾ ಕಪೂರ್​ ಖಾನ್​ ಮೊದಲ ಮಗುವಿಗೆ ತೈಮೂರ್​ ಅಲಿ ಖಾನ್​ ಎಂದು ನಾಮಕರಣ ಮಾಡಿದ್ದು ಬಹಳ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಅನೇಕರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಈಗ ಸೈಫ್​-ಕರೀನಾ ಎರಡನೇ ಮಗುವಿಗೆ ಜಹಾಂಗೀರ್​ ಎಂದು ನಾಮಕರಣ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Kareena Kapoor: ಸೀತೆಯ ಪಾತ್ರಕ್ಕೆ 12 ಕೋಟಿ ಸಂಭಾವನೆ ಕೇಳಿದ ಸುದ್ದಿಗೆ ತಲೆ ಅಲ್ಲಾಡಿಸಿದ ಕರೀನಾ; ಏನಿದರ ಅರ್ಥ?

Published On - 8:05 pm, Wed, 18 August 21

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್