AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಪೂರ್​​​ಗೆ ಬಾಡಿಗೆ ತಾಯ್ತನದ ಆಲೋಚನೆ; ಅಚ್ಚರಿಯ ವಿಚಾರ ಬಿಚ್ಚಿಟ್ಟ ನಟಿ

ತೈಮೂರ್​ ಅಲಿ ಖಾನ್​​ ಜನಿಸಿದ ನಾಲ್ಕು ವರ್ಷಗಳ ನಂತರದಲ್ಲಿ ಕರೀನಾಗೆ ಮತ್ತೊಂದು ಮಗು ಜನಿಸಿದೆ. ಫೆಬ್ರವರಿ ತಿಂಗಳಲ್ಲಿ ಹೊಸ ಸದಸ್ಯನ ಆಗಮನ ಆಗಿತ್ತು.

ಕರೀನಾ ಕಪೂರ್​​​ಗೆ ಬಾಡಿಗೆ ತಾಯ್ತನದ ಆಲೋಚನೆ; ಅಚ್ಚರಿಯ ವಿಚಾರ ಬಿಚ್ಚಿಟ್ಟ ನಟಿ
ಕರೀನಾ ಕಪೂರ್​ ಖಾನ್​
TV9 Web
| Edited By: |

Updated on:Aug 18, 2021 | 8:09 PM

Share

ವಿಜ್ಞಾನ ಹಾಗೂ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಭೂಮಿಯ ಅಂತರಾಳದಿಂದ ಹಿಡಿದು, ಆಗಸದ ತುದಿಗೆ ಮಾನವ ಅಧ್ಯಯನ ನಡೆಸುತ್ತಿದ್ದಾನೆ. ಇದರ ಜತೆಗೆ ಮಗುವನ್ನು ಪಡೆಯುವ ವಿಚಾರದಲ್ಲೂ ಮನುಷ್ಯ ಒಂದಷ್ಟು ಅಧ್ಯಯನ ನಡೆಸಿದ್ದಾನೆ. ಅದರಲ್ಲಿ ಬಾಡಿಗೆ ತಾಯ್ತನ ಕೂಡ ಒಂದು. ಈ ಬಗ್ಗೆ ಕರೀನಾ ಕಪೂರ್ ಹಾಗೂ ಸೈಫ್​ ಅಲಿ ಖಾನ್​ ಚರ್ಚೆ ನಡೆಸಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ತೈಮೂರ್​ ಅಲಿ ಖಾನ್​​ ಜನಿಸಿದ ನಾಲ್ಕು ವರ್ಷಗಳ ನಂತರದಲ್ಲಿ ಕರೀನಾಗೆ ಮತ್ತೊಂದು ಮಗು ಜನಿಸಿದೆ. ಫೆಬ್ರವರಿ ತಿಂಗಳಲ್ಲಿ ಹೊಸ ಸದಸ್ಯನ ಆಗಮನ ಆಗಿತ್ತು. ಇದಕ್ಕೂ ಮೊದಲು ಸೈಫ್​ ಹಾಗೂ ಕರೀನಾ ಬಾಡಿಗೆ ತಾಯ್ತನದ ಬಗ್ಗೆ ಆಲೋಚನೆ ಮಾಡಿದ್ದರಂತೆ.

‘ನಾನು ಹಾಗೂ ಸೈಫ್​ ಇಬ್ಬರೂ ಬಾಡಿಗೆ ತಾಯ್ತನದ ಬಗ್ಗೆ ಮಾತುಕತೆ ನಡೆಸಿದ್ದೆವು. ನಾರ್ಮಲ್​ ಆಗಿ ಮಗುವನ್ನು ಪಡೆಯುವ ಪ್ರಯತ್ನ ಮಾಡೋಣ, ಆಗದಿದ್ದರೆ ಬಾಡಿಗೆ ತಾಯ್ತನದ ಬಗ್ಗೆ ಆಲೋಚಿಸೋಣ ಎಂದು ನಾವಿಬ್ಬರೂ ನಿರ್ಧರಿಸಿದ್ದೆವು. ಆದರೆ, ದೇವರ ದಯೆಯಿಂದ ಮಗುವಾಗಿದೆ. ಬಾಡಿಗೆ ತಾಯ್ತನ ಅನ್ನೋದು ನಮ್ಮ ಎರಡನೇ ಆಯ್ಕೆ ಆಗಿತ್ತು’ ಎಂದಿದ್ದಾರೆ ಅವರು.

‘ನಾನು ಸೈಫ್​ ಮದುವೆ ಆದ ನಂತರದಲ್ಲಿ ನನ್ನ ಕರಿಯರ್​ ಅಂತ್ಯಗೊಂಡಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಮದುವೆ ನಂತರವೂ ವೃತ್ತಿಜೀವನಕ್ಕೆ ಧಕ್ಕೆ ಆಗುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಾನು ಮದುವೆ ಆದಾಗ ನನಗೆ ಅವಕಾಶ ಸಿಗುವುದಿಲ್ಲ ಎಂದುಕೊಂಡಿದ್ದರು. ಆದರೆ, ಈಗ ಅದು ಸುಳ್ಳು ಎಂಬುದು ಸಾಬೀತಾಗಿದೆ ಎಂದಿದ್ದಾರೆ’ ಕರೀನಾ.

ಸೈಫ್​ ಅಲಿ ಖಾನ್ ಮತ್ತು ಕರೀನಾ ಕಪೂರ್​ ಖಾನ್​ ಮೊದಲ ಮಗುವಿಗೆ ತೈಮೂರ್​ ಅಲಿ ಖಾನ್​ ಎಂದು ನಾಮಕರಣ ಮಾಡಿದ್ದು ಬಹಳ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಅನೇಕರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಈಗ ಸೈಫ್​-ಕರೀನಾ ಎರಡನೇ ಮಗುವಿಗೆ ಜಹಾಂಗೀರ್​ ಎಂದು ನಾಮಕರಣ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Kareena Kapoor: ಸೀತೆಯ ಪಾತ್ರಕ್ಕೆ 12 ಕೋಟಿ ಸಂಭಾವನೆ ಕೇಳಿದ ಸುದ್ದಿಗೆ ತಲೆ ಅಲ್ಲಾಡಿಸಿದ ಕರೀನಾ; ಏನಿದರ ಅರ್ಥ?

Published On - 8:05 pm, Wed, 18 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್