AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kareena Kapoor: ಕೊವಿಡ್​ ಮೂರನೆ ಅಲೆ ಭೀತಿ; ಪತಿ ಸೈಫ್ ಮತ್ತು ಮಕ್ಕಳೊಂದಿಗೆ ಮಾಲ್ಡೀವ್ಸ್​ಗೆ ಹಾರಿದ ಕರೀನಾ

Saif Ali Khan: ಬಾಲಿವುಡ್​ನ ಖ್ಯಾತ ತಾರಾ ಜೋಡಿ ಸೈಫ್ ಹಾಗೂ ಕರೀನಾ ಮಾಲ್ಡೀವ್ಸ್​ನತ್ತ ಪ್ರಯಾಣ ಬೆಳೆಸಿದ್ದಾರೆ.

Kareena Kapoor: ಕೊವಿಡ್​ ಮೂರನೆ ಅಲೆ ಭೀತಿ; ಪತಿ ಸೈಫ್ ಮತ್ತು ಮಕ್ಕಳೊಂದಿಗೆ ಮಾಲ್ಡೀವ್ಸ್​ಗೆ ಹಾರಿದ ಕರೀನಾ
ವಿಮಾನ ನಿಲ್ದಾಣದಲ್ಲಿ ಕರೀನಾ- ಸೈಫ್ ದಂಪತಿ
TV9 Web
| Edited By: |

Updated on: Aug 14, 2021 | 2:18 PM

Share

ಬಾಲಿವುಡ್​ನ ತಾರಾ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ತಮ್ಮ ಈರ್ವರು ಮಕ್ಕಳೊಂದಿಗೆ ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೆ ಕಾರಣವೂ ಇಲ್ಲದಿಲ್ಲ. ನಟ ಸೈಫ್ ಅಲಿ ಖಾನ್ 52ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ , ಅವರ ಜನ್ಮದಿನವನ್ನು ಆಚರಿಸಲು ಮಾಲ್ಡೀವ್ಸ್​ಗೆ ಕುಟಂಬ ಸಮೇತ ಕರೀನಾ ತೆರಳಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಖಾಸಗಿ ವಿಮಾನ ನಿಲ್ದಾಣವೊಂದರಿಂದ ಈ ಜೋಡಿ ಮಾಲ್ಡೀವ್ಸ್​ಗೆ ತೆರಳಿದೆ. ಮಕ್ಕಳಾದ ಜೇಹ್ ಮತ್ತು ತೈಮೂರ್ ಕೂಡಾ ಜೊತೆಯಲ್ಲಿದ್ದರು.

ವಿಮಾನ ನಿಲ್ದಾಣದತ್ತ ತೆರಳುತ್ತಿರುವ ಕರೀನಾ ಹಾಗೂ ಸೈಫ್ ಅಲಿ ಖಾನ್:

ಇತ್ತೀಚೆಗೆ ಕರೀನಾ ಮತ್ತು ಸೈಫ್ ಜೋಡಿ ತಮ್ಮ ಮಕ್ಕಳಿಗೆ ಇಟ್ಟ ಹೆಸರಿನ ಕುರಿತು ಹೆಚ್ಚು ಚರ್ಚೆಯಾಗುತ್ತಿದೆ. ತಮ್ಮ ಮೊದಲ ಮಗನಿಗೆ ತೈಮೂರ್ ಎಂದು ನಾಮಕರಣ ಮಾಡಿದ್ದ ಕರೀನಾ- ಸೈಫ್, ಎರಡನೇ ಮಗನಿಗೆ ಜಹಾಂಗೀರ್ ಎಂದು ಹೆಸರಿಟ್ಟಿದ್ದರು. ಇದರ ಕುರಿತು ಬಹಳಷ್ಟು ಟೀಕೆಗಳೂ ವ್ಯಕ್ತವಾಗಿದ್ದವು. ಆದರೆ ತಾರಾ ಜೋಡಿ ಅದ್ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಇತ್ತೀಚೆಗೆ ಇಂಡಿಯಾ ಟುಡೆಯೊಂದಿಗೆ ಮಾತನಾಡಿದ್ದ ಕರೀನಾ ಹೆಸರಿನ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿರುವವರಿಗೆ ಪರೋಕ್ಷವಾಗಿ ಉತ್ತರಿಸಿದ್ದರು. ‘‘ನಾನು ತುಂಬಾ ಸಕಾರಾತ್ಮಕ ವ್ಯಕ್ತಿ. ಕೋವಿಡ್​ನಂತಹ ಸಮಯದಲ್ಲಿ ಸಾಧ್ಯವಾದಷ್ಟು ಸಂತೋಷ ಮತ್ತು ಸಕಾರಾತ್ಮಕತೆಯನ್ನು ಹರಡಲು ಬಯಸುತ್ತೇನೆ. ಯಾವುದೇ ರೀತಿಯ ನಕಾರಾತ್ಮಕತೆಯ ಬಗ್ಗೆ ನಾನು ಯೋಚಿಸುವುದಿಲ್ಲ.’’ ಎಂದಿದ್ದರು.

ನಕಾರಾತ್ಮಕತೆಯನ್ನು ಹೇಗೆ ಎದುರಿಸುತ್ತೀರಿ ಎಂಬ ಪ್ರಶ್ನೆಗೆ, ಧ್ಯಾನ ಮಾಡುವುದು ಮಾತ್ರ ತನಗೆ ಉಳಿದಿರುವ ಆಯ್ಕೆ ಎಂದು ಅವರು ಹೇಳಿದ್ದರು. ‘‘ಸಕಾರಾತ್ಮಕತೆ ಇದ್ದಲ್ಲಿ ನಕಾರಾತ್ಮಕತೆಯೂ ಇರುತ್ತದೆ. ಹಾಗಾಗಿ ಇದನ್ನು ಸ್ವೀಕರಿಸಲೇಬೇಕು. ಆದರೆ ಮಾನಸಿಕ ಶಾಂತಿಗಾಗಿ ಧ್ಯಾನವೊಂದೇ ನನಗೆ ಉಳಿದಿರುವ ಆಯ್ಕೆ’’ ಎಂದಿದ್ದರು.

ಇದನ್ನೂ ಓದಿ:

Jehangir: ಎರಡನೇ ಮಗುವಿಗೆ ಜಹಾಂಗೀರ್ ಎಂದು ನಾಮಕರಣ ಮಾಡಿದ ಕರೀನಾ-ಸೈಫ್ 

ನೈತಿಕತೆ ಬಿಟ್ಟು ಮಹಿಳಾ ಸ್ಪರ್ಧಿಗೆ ಲಿಪ್​ ಕಿಸ್​ ಮಾಡಿದ ಗಾಯಕಿ; ಎತ್ತ ಸಾಗುತ್ತಿದೆ ಬಿಗ್​ ಬಾಸ್​?

(Kareena Kapoor went to Maldives with her family to celebrate Saif Ali Khan’s birthday)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್