AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್​ ಫೈಲ್ಸ್​’?; ರಾಜ್ಯ ಬಿಜೆಪಿ ಹೊಸ ಚಿಂತನೆ

1990ರ ಸಮಯದಲ್ಲಿ ಕಾಶ್ಮೀರದ ಪಂಡಿತರು ಅನುಭವಿಸಿದ ಕಷ್ಟಗಳೇನು ಎನ್ನುವುದನ್ನು ಜನರ ಮುಂದಿಡುವ ಪ್ರಯತ್ನವನ್ನು ವಿವೇಕ್​ ಅಗ್ನಿಹೋತ್ರಿ ಮಾಡಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ.

ಶೀಘ್ರವೇ ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್​ ಫೈಲ್ಸ್​’?; ರಾಜ್ಯ ಬಿಜೆಪಿ ಹೊಸ ಚಿಂತನೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 18, 2022 | 5:27 PM

ಕಾಶ್ಮೀರಿ ಪಂಡಿತರ (Kashmiri Pandits) ಹತ್ಯೆ ಹಾಗೂ ಅವರ ವಲಸೆ ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ (The Kashmir Files) ಸಿದ್ಧಗೊಂಡಿದೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲೂ ಈ ಸಿನಿಮಾ ದೊಡ್ಡ ಮಟ್ಟದ ಚರ್ಚೆ ಸೃಷ್ಟಿ ಮಾಡಿದೆ. ಈ ಚಿತ್ರದ ಬಗ್ಗೆ ಈಗ ಒಂದು ಹೊಸ ಅಪ್​ಡೇಟ್​ ಕೇಳಿ ಬಂದಿದೆ. ಈ ಸಿನಿಮಾವನ್ನು ಕನ್ನಡಕ್ಕೆ ಡಬ್​ ಮಾಡುವ ಬಗ್ಗೆ ರಾಜ್ಯ ಬಿಜೆಪಿ (BJP) ಚಿಂತನೆ ನಡೆಸಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಕನ್ನಡದ ಸಿನಿಪ್ರಿಯರು ಖುಷಿಪಟ್ಟಿದ್ದಾರೆ.

1990ರ ಸಮಯದಲ್ಲಿ ಕಾಶ್ಮೀರದ ಪಂಡಿತರು ಅನುಭವಿಸಿದ ಕಷ್ಟಗಳೇನು ಎನ್ನುವುದನ್ನು ಜನರ ಮುಂದಿಡುವ ಪ್ರಯತ್ನವನ್ನು ವಿವೇಕ್​ ಅಗ್ನಿಹೋತ್ರಿ ಮಾಡಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಹಿಂದಿ ಮಾತನಾಡುವವರ ಹಾಗೂ ಹಿಂದಿ ಭಾಷೆಯನ್ನು ಅರ್ಥೈಸಿಕೊಳ್ಳುವವರ ಸಂಖ್ಯೆ ತುಂಬಾನೇ ಕಡಿಮೆ. ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಸಂಪೂರ್ಣವಾಗಿ ಹಿಂದಿಯಲ್ಲೇ ಇದೆ. ಹೀಗಾಗಿ, ಎಲ್ಲಾ ವಿಚಾರಗಳು ಕನ್ನಡಿಗರಿಗೆ ತಲುಪದೇ ಇರಬಹುದು. ಈ ಕಾರಣಕ್ಕೆ ಸಿನಿಮಾ ಕನ್ನಡದಲ್ಲಿ ಡಬ್​ ಆಗಿ ತೆರೆಗೆ ಬಂದರೆ ಉತ್ತಮ ಅನ್ನೋದು ಬಿಜೆಪಿ ಆಲೋಚನೆ.

ಇತ್ತೀಚೆಗೆ ವಿಧಾನಸಭೆ ಹಾಗೂ ಪರಿಷತ್ ಸಚಿವಾಲಯದಿಂದ ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಪ್ರದರ್ಶನ ಮಾಡಲಾಗಿತ್ತು. ಈ ವೇಳೆ ಬಿಜೆಪಿ ನಾಯಕರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಈಗ ಈ ಚಿತ್ರವನ್ನು ಜನರ ಮುಂದೆ ಕನ್ನಡದಲ್ಲಿ ಇಡಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಆಪ್ತ ಸಚಿವರ ಜತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಈ ವಿಚಾರಕ್ಕೆ ಧ್ವನಿಗೂಡಿಸಿದ್ದಾರೆ. ‘ಈಗ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಹಿಂದಿಯಲ್ಲಿ ಬಿಡುಗಡೆ ಆಗಿದೆ. ಈ ಚಿತ್ರ ಕನ್ನಡಕ್ಕೂ ಡಬ್​ ಆಗಿ ತೆರೆಕಾಣಬೇಕು. ಕನ್ನಡದಲ್ಲಿ ಬಂದರೆ ಹಿಂದಿ ಬಾರದವರಿಗೂ ಸಿನಿಮಾ ಅರ್ಥ ಆಗುತ್ತದೆ’ ಎಂದಿದ್ದಾರೆ ಅವರು.

ವಿವೇಕ್​ ಅಗ್ನಿಹೋತ್ರಿಗೆ ವೈ ಭದ್ರತೆ

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡಿದ್ದಕ್ಕಾಗಿ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ಕೆಲವು ಬೆದರಿಕೆ ಕರೆಗಳು ಬರುತ್ತಿವೆ. ಸೋಶಿಯಲ್​ ಮೀಡಿಯಾದಲ್ಲೂ ಅವರಿಗೆ ಬೆದರಿಕೆ ಹಾಕಲಾಗಿದೆ. ಹಾಗಾಗಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರದಿಂದ ತೀರ್ಮಾನಿಸಲಾಗಿದೆ. 7ರಿಂದ 8 ಜನ CRPF ಕಮಾಂಡೋಗಳು ವಿವೇಕ್​ ಅವರಿಗೆ ಭದ್ರತೆ ಒದಗಿಸಲಿದ್ದಾರೆ. ಸಿನಿಮಾದ ಬಿಡುಗಡೆಗೂ ಮುನ್ನವೇ ಅವರಿಗೆ ಅನೇಕರು ಕೊಲೆ ಬೆದರಿಗೆ ಹಾಕಿದ್ದರು. ಆ ಕಾರಣದಿಂದ ತಮ್ಮ ಸೋಶಿಯಲ್​ ಮೀಡಿಯಾ ಖಾತೆಯನ್ನು ಡಿಆ್ಯಕ್ಟೀವೇಟ್​​ ಮಾಡುವುದಾಗಿ ವಿವೇಕ್​ ಅಗ್ನಿಹೋತ್ರಿ ತಿಳಿಸಿದ್ದರು. ಸಿನಿಮಾ ಬಿಡುಗಡೆ ಆದ ಬಳಿಕ ಬೆದರಿಕೆ ಕರೆಗಳು ಹೆಚ್ಚಿವೆ ಎನ್ನಲಾಗಿದೆ.

ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್​ ಸಿನಿಮಾದಂತೆ ದಿ ಲಖಿಂಪುರ್​ ಫೈಲ್ಸ್​ ಸಿನಿಮಾವೂ ಬರಲಿ: ಎಸ್​ಪಿ ಮುಖ್ಯಸ್ಥ ಅಖಿಲೇಶ್​ ಯಾದವ್​

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡದವರು ದೇಶವಿರೋಧಿಗಳು; ವಿವಾದಾತ್ಮಕ ಹೇಳಿಕೆ ಕೊಟ್ಟ ಶಾಸಕ ರೇಣುಕಾಚಾರ್ಯ

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ