ಕೊನೆಯಾಯಿತು ಅನುಷ್ಕಾ ಶರ್ಮಾ ತಮ್ಮನ ಲವ್ ಸ್ಟೋರಿ; ಯುವ ನಟಿಯ ಜೊತೆ ಬ್ರೇಕಪ್

ನೆಟ್​​ಫ್ಲಿಕ್ಸ್​ನಲ್ಲಿ ರಿಲೀಸ್​ ಆದ ‘ಬುಲ್​ಬುಲ್’​ ಸಿನಿಮಾದ ನಾಯಕಿ ತೃಪ್ತಿ ದಿಮ್ರಿ ಜೊತೆ ಅವರು ಡೇಟಿಂಗ್ ಮಾಡುತ್ತಿದ್ದರು. ಈಗ ಇಬ್ಬರೂ ಬೇರೆ ಆಗಿದ್ದಾರೆ.

ಕೊನೆಯಾಯಿತು ಅನುಷ್ಕಾ ಶರ್ಮಾ ತಮ್ಮನ ಲವ್ ಸ್ಟೋರಿ; ಯುವ ನಟಿಯ ಜೊತೆ ಬ್ರೇಕಪ್
ಅನುಷ್ಕಾ-ತೃಪ್ತಿ, ಕರ್ಣೇಶ್
Follow us
|

Updated on: Jul 05, 2023 | 12:37 PM

ಅನುಷ್ಕಾ ಶರ್ಮಾ (Anushka Sharma) ಅವರ ತಮ್ಮ ಕರ್ಣೇಶ್ ಶರ್ಮಾ ಅವರು ಕಳೆದ ಕೆಲ ವರ್ಷಗಳಿಂದ ಸುದ್ದಿಯಲ್ಲಿದ್ದರು. ಅವರು ನಿರ್ಮಾಣ ಮಾಡಿದ ‘ಪಾತಾಳ್ ಲೋಕ್​’ ಸೇರಿ ಅನೇಕ ವೆಬ್ ಸೀರಿಸ್​ಗಳು ಸದ್ದು ಮಾಡಿದ್ದವು. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿಯೂ ಕರ್ಣೇಶ್ (Karnesh Sharma) ಜನಪ್ರಿಯತೆ ಪಡೆದಿದ್ದಾರೆ. ಕರ್ಣೇಶ್ ಅವರು ತೃಪ್ತಿ ದಿಮ್ರಿ ಜೊತೆ ಸುತ್ತಾಟ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಈಗ ಇವರ ಸಂಬಂಧ ಕೊನೆಯಾಗಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಸೆಲೆಬ್ರಿಟಿಗಳ ಮೇಲೆ, ಅವರ ಕುಟುಂಬದವರ ಮೇಲೆ ಅಭಿಮಾನಿಗಳು ಕಣ್ಣಿಟ್ಟಿರುತ್ತಾರೆ. ನಟ/ನಟಿಯ ಕುಟುಂಬ ಸದಸ್ಯರು ಏನು ಮಾಡುತ್ತಾರೆ? ಯಾರ ಜತೆ ಸುತ್ತಾಟ ನಡೆಸುತ್ತಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಹೆಚ್ಚು ಆಸಕ್ತಿ ತೋರಿಸುತ್ತಾರೆ. ಅದೇ ರೀತಿ ಅನುಷ್ಕಾ ಶರ್ಮಾ ಸಹೋದರ ಕರ್ಣೇಶ್​ ಶರ್ಮಾ ಮೇಲೆ ಅಭಿಮಾನಿಗಳ ಹಲವು ವರ್ಷಗಳಿಂದ ಕಣ್ಣಿಟ್ಟಿದ್ದರು. ನೆಟ್​​ಫ್ಲಿಕ್ಸ್​ನಲ್ಲಿ ರಿಲೀಸ್​ ಆದ ‘ಬುಲ್​ಬುಲ್’​ ಸಿನಿಮಾದ ನಾಯಕಿ ತೃಪ್ತಿ ದಿಮ್ರಿ ಜೊತೆ ಅವರು ಡೇಟಿಂಗ್ ಮಾಡುತ್ತಿದ್ದರು. ಈಗ ಇಬ್ಬರೂ ಬೇರೆ ಆಗಿದ್ದಾರೆ.

ಅನುಷ್ಕಾ ಹಾಗೂ ಕರ್ಣೇಶ್ ಒಟ್ಟಾಗಿ ‘ಕ್ಲೀನ್​ ಸ್ಲೇಟ್​ ಫಿಲ್ಮ್ಸ್’ ಹೆಸರಿನ ಪ್ರೊಡಕ್ಷನ್​ಹೌಸ್​ ಆರಂಭಿಸಿದ್ದರು. ಈಗ ಅನುಷ್ಕಾ ಶರ್ಮಾ ಅವರು ಇದರ ಸಂಪೂರ್ಣ ಜವಾಬ್ದಾರಿಯನ್ನು ಕರ್ಣೇಶ್​ಗೆ ವಹಿಸಿದ್ದಾರೆ. ಕರ್ಣೇಶ್ ಪ್ರೀತಿಸುತ್ತಿದ್ದ ವಿಚಾರ ಅನುಷ್ಕಾಗೂ ಗೊತ್ತಿತ್ತು. ಅಚ್ಚರಿ ಎಂಬಂತೆ ಇನ್​​ಸ್ಟಾಗ್ರಾಮ್​ನಲ್ಲಿ ಕರ್ಣೇಶ್ ಹಾಗೂ ತೃಪ್ತಿ ಪರಸ್ಪರ ಒಬ್ಬರನ್ನೊಬ್ಬರು ಅನ್​ಫಾಲೋ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಜೋಡಿ ಫೋಟೋಗಳನ್ನು ಡಿಲಿಟ್ ಮಾಡಲಾಗಿದೆ.

ಇದನ್ನೂ ಓದಿ: ಪತ್ನಿ ಅನುಷ್ಕಾ ಶರ್ಮಾ ಮೇಲೆ ಎಷ್ಟೊಂದು ಪ್ರೀತಿ; ಶತಕ ಬಾರಿಸಿದ ಬಳಿಕ ವಿರಾಟ್​ ಮಾಡಿದ್ದೇನು?

‘ಬುಲ್​ಬುಲ್’ ಚಿತ್ರ 2020ರಲ್ಲಿ ತೆರೆಗೆ ಬಂತು. ಈ ಚಿತ್ರಕ್ಕೆ 2019ರಲ್ಲಿ ಶೂಟಿಂಗ್ ನಡೆದಿದ್ದು 2019ರಲ್ಲಿ. ಇವರ ಮಧ್ಯೆ ಮೂಡಿದ್ದ ಗೆಳೆತನ ನಂತರ ಪ್ರೀತಿಗೆ ಬದಲಾಯಿತು. ಇಬ್ಬರೂ ಡೇಟಿಂಗ್​ ನಡೆಸುತ್ತಿದ್ದರು. ಸುಮಾರು ಮೂರು ವರ್ಷ ಒಟ್ಟಾಗಿದ್ದ ಇವರು ಈಗ ಬೇರೆ ಆಗಿದ್ದಾರೆ. ‘ಕ್ಲೀನ್ ಸ್ಲೇಟ್ ಫಿಲ್ಮ್ಸ್​’ ಬ್ಯಾನರ್​ ಅಡಿಯಲ್ಲಿ ಸಾಕಷ್ಟು ಚಿತ್ರಗಳು ತಯಾರಾಗಿವೆ. ಈ ನಿರ್ಮಾಣ ಸಂಸ್ಥೆಯಲ್ಲಿ ಮೂಡಿಬಂದ ‘ಪಾತಾಳ್​ ಲೋಕ್’​ ವೆಬ್​ ಸೀರಿಸ್ ವೀಕ್ಷಕರಿಂದ ಮೆಚ್ಚುಗೆ ಪಡೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು