ಕರ್ನಾಟಕದ ಈ ಸ್ಥಳಕ್ಕೆ ಭೇಟಿ ಮಾಡಲು ಬಯಸಿದ್ದಾರೆ ಕಾರ್ತಿಕ್ ಆರ್ಯನ್

ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ ಆಗಿದೆ. ಇದು 1336ರಿಂದ 1565ರವರೆಗೆ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೂಲ ಹೆಸರು ಪಂಪಾ ಎಂದು ಇತ್ತು. ಆ ಬಳಿಕ ಇದರ ಹೆಸರನ್ನು ಬದಲಿಸಲಾಯಿತು.

ಕರ್ನಾಟಕದ ಈ ಸ್ಥಳಕ್ಕೆ ಭೇಟಿ ಮಾಡಲು ಬಯಸಿದ್ದಾರೆ ಕಾರ್ತಿಕ್ ಆರ್ಯನ್
ಕಾರ್ತಿಕ್ ಆರ್ಯನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 24, 2024 | 8:36 AM

ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರಿಗೆ ಬೇಡಿಕೆ ಸೃಷ್ಟಿ ಆಗುತ್ತಿದ್ದಾರೆ. ಈಗ ಕಾರ್ತಿಕ್ ಆರ್ಯನ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕರ್ನಾಟಕದ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಬಯಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಕಾರ್ತಿಕ್ ಆರ್ಯನ್ ಅವರು ಸಂದರ್ಶನ ಒಂದರಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ನಿಮ್ಮ ಬಕೆಟ್​ ಲಿಸ್ಟ್​ನಲ್ಲಿ ಇರುವ ಸ್ಥಳ ಯಾವುದು ಎಂದು ಕೇಳಲಾಯಿತು. ಇದಕ್ಕೆ ಕಾರ್ತಿಕ್ ಆರ್ಯನ್ ಅವರು ನೇರವಾಗಿ ಉತ್ತರ ನೀಡಿದ್ದರು. ‘ನನಗೆ ಹಂಪಿ ಇಷ್ಟ. ಅಲ್ಲಿಗೆ ಒಮ್ಮೆ ತೆರಳಬೇಕು’ ಎಂದಿದ್ದರು ಅವರು.

ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ ಆಗಿದೆ. ಇದು 1336ರಿಂದ 1565ರವರೆಗೆ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೂಲ ಹೆಸರು ಪಂಪಾ ಎಂದು ಇತ್ತು. ಆ ಬಳಿಕ ಇದರ ಹೆಸರನ್ನು ಬದಲಿಸಲಾಯಿತು. ಈ ಸ್ಥಳಕ್ಕೆ ನಿತ್ಯ ಸಾಕಷ್ಟು ಜನರು ಬಂದು ಭೇಟಿ ಮಾಡುತ್ತಾರೆ. ಈ ಜಾಗವನ್ನು ಅನೇಕರು ಇಷ್ಟಪಡುತ್ತಾರೆ. ಬಾಲಿವುಡ್ ಹೀರೋಗಳಿಗೂ ಈ ಸ್ಥಳ ನೋಡಬೇಕು ಎನ್ನುವ ಆಸೆ ಇದೆ ಅನ್ನೋದು ವಿಶೇಷ.

ಕಾರ್ತಿಕ್ ಆರ್ಯನ್ ಅವರ ಬಗ್ಗೆ ಹೇಳಬೇಕು ಎಂದರೆ ಅವರು 2011ರ ‘ಪ್ಯಾರ್ ಕಾ ಪಂಚ್​ನಾಮಾ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ಮೂಲಕ ಅವರು ಗಮನ ಸೆಳೆದರು. ನಂತರ ಹಲವು ಸಿನಿಮಾಗಳನ್ನು ಅವರು ಮಾಡಿದರು. ‘ಸೋನು ಕಿ ಟಿಟ್ಟು ಕಿ ಸ್ವೀಟಿ’ ಚಿತ್ರದ ಮೂಲಕ ಅವರು ದೊಡ್ಡ ಮಟ್ಟದ ಹೆಸರು ಮಾಡಿದರು. 2022ರಲ್ಲಿ ರಿಲೀಸ್ ಆದ ‘ಭೂಲ್​ ಭುಲಯ್ಯ 2’ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿತು. ಅವರು ಹೀರೋ ಆಗಿ ಗಮನ ಸೆಳೆಯುತ್ತಿದ್ದಾರೆ.

ಇದನ್ನೂ ಓದಿ: ‘ನಾನು ರೂಲ್ಸ್​​ನ ಸೆಟ್​​ ಮಾಡ್ತೀನಿ’; ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಕಾರ್ತಿಕ್ ಮಹೇಶ್

ಕಾರ್ತಿಕ್ ಆರ್ಯನ್ ಅವರು ‘ಭೂಲ್​ ಬುಲಯ್ಯ 3’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ದೀಪಾವಳಿಗೆ ರಿಲೀಸ್ ಆಗಲಿದೆ ಎಂದು ಈ ಮೊದಲೇ ಘೋಷಣೆ ಆಗಿದೆ. ವಿದ್ಯಾ ಬಾಲನ್ ಶೋಗೆ ಕಂಬ್ಯಾಕ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:17 am, Tue, 24 September 24

‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ
‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ
ಅಶ್ವಿನ್ ವಿರುದ್ಧ ಪತ್ನಿ ಪ್ರೀತಿ ಹೊರಿಸಿದ ಆರೋಪವೇನು? ವಿಡಿಯೋ ನೋಡಿ
ಅಶ್ವಿನ್ ವಿರುದ್ಧ ಪತ್ನಿ ಪ್ರೀತಿ ಹೊರಿಸಿದ ಆರೋಪವೇನು? ವಿಡಿಯೋ ನೋಡಿ