AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊತೆಯಾಗಿ ಸುತ್ತಾಡುತ್ತಿರುವ ಶ್ರೀಲೀಲಾ, ಕಾರ್ತಿಕ್ ಆರ್ಯನ್; ಸಿಕ್ತು ಸಾಕ್ಷಿ

ಬಾಲಿವುಡ್ ಹೀರೋ ಕಾರ್ತಿಕ್ ಆರ್ಯನ್ ಅವರು ಈಗ ಶ್ರೀಲೀಲಾ ಜೊತೆ ಸುತ್ತಾಡಲು ಆರಂಭಿಸಿದ್ದಾರೆ. ಫೋಟೋಗಳು, ವಿಡಿಯೋಗಳು ವೈರಲ್ ಆಗಿವೆ. ಆದರೆ ಅವರಿಬ್ಬರು ತಮ್ಮ ರಿಲೇಷನ್​ಶಿಪ್ ಬಗ್ಗೆ ಮೌನ ಮುರಿದಿಲ್ಲ. ಅನುರಾಗ್ ಬಸು ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಅವರಿಬ್ಬರು ನಟಿಸುತ್ತಿದ್ದಾರೆ. ಸಿನಿಮಾದ ಆಚೆಗೂ ಅವರ ನಡುವೆ ನಂಟು ಬೆಳೆದಿದೆ.

ಜೊತೆಯಾಗಿ ಸುತ್ತಾಡುತ್ತಿರುವ ಶ್ರೀಲೀಲಾ, ಕಾರ್ತಿಕ್ ಆರ್ಯನ್; ಸಿಕ್ತು ಸಾಕ್ಷಿ
Kartik Aaryan, Sreeleela
ಮದನ್​ ಕುಮಾರ್​
|

Updated on: Jul 03, 2025 | 3:18 PM

Share

ನಟಿ ಶ್ರೀಲೀಲಾ (Sreeleela) ಅವರು ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಫೇಮಸ್ ಆಗಿದ್ದಾರೆ. ಅಲ್ಲದೇ ಅವರಿಗೆ ಬಾಲಿವುಡ್​ ಕೂಡ ಕೈ ಬೀಸಿ ಕರೆದಿದೆ. ಈಗಾಗಲೇ ಅವರು ಕಾರ್ತಿಕ್ ಆರ್ಯನ್ (Kartik Aaryan) ಜೊತೆಗಿನ ಹೊಸ ಸಿನಿಮಾಗೆ ಶೂಟಿಂಗ್ ಮಾಡುತ್ತಿದ್ದಾರೆ. ಅಚ್ಚರಿ ಏನೆಂದರೆ, ಶೂಟಿಂಗ್ ಹೊರತಾಗಿಯೂ ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಅವರು ಭೇಟಿ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರಿಬ್ಬರು ಒಟ್ಟಿಗೆ ಡೇಟಿಂಗ್​ಗೆ ತೆರಳಿರುವ ವಿಷಯ ಬಹಿರಂಗ ಆಗಿದೆ. ಇಬ್ಬರೂ ಒಂದೇ ರೆಸ್ಟೋರೆಂಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಅಭಿಮಾನಿಗಳಿಗೆ ಇದ್ದ ಅನುಮಾನಕ್ಕೆ ಇನ್ನಷ್ಟು ಬಲ ಬಂದಂತೆ ಆಗಿದೆ.

ಕಾರ್ತಿಕ್ ಆರ್ಯನ್ ಜೊತೆ ಯಾವುದೇ ನಟಿ ಸಿನಿಮಾ ಮಾಡಿದರೂ ಕೂಡ ಗಾಸಿಪ್ ಹುಟ್ಟಿಕೊಳ್ಳುತ್ತದೆ. ಈ ಮೊದಲು ಸಾರಾ ಅಲಿ ಖಾನ್ ಜೊತೆ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಈಗ ಶ್ರೀಲೀಲಾ ಹೆಸರು ಕೇಳಿಬರುತ್ತಿದೆ. ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಅವರು ಸಿನಿಮಾ ಹೊರತಾಗಿಯೂ ಆತ್ಮೀಯತೆ ಬೆಳೆಸಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಫೋಟೋ ಮತ್ತು ವಿಡಿಯೋ ಸಾಕ್ಷಿ ಆಗಿದೆ.

ಇದನ್ನೂ ಓದಿ
Image
ಡ್ಯಾನ್ಸರ್ ಎಂದ ನಿರೂಪಕಿಗೆ ಜಾಡಿಸಿದ ನಟಿ ಶ್ರೀಲೀಲಾ
Image
ಶ್ರೀಲೀಲಾ ಬಗ್ಗೆ ತೆಲುಗು ನಿರ್ಮಾಪಕರ ಬೇಸರ, ಸಂಘಕ್ಕೆ ದೂರು ಸಾಧ್ಯತೆ
Image
ಇಬ್ಬರು ಮಕ್ಕಳ ದತ್ತು ಪಡೆದಿದ್ದಾರೆ ಶ್ರೀಲೀಲಾ: ಈ ವಿಚಾರ ಗೊತ್ತೇ?
Image
‘ಪುಷ್ಪ 2’ ತಂಡಕ್ಕೆ ಏಳು ಕೋಟಿ ಹಣ ಉಳಿಸಿದ ನಟಿ ಶ್ರೀಲೀಲಾ

ಶ್ರೀಲೀಲಾ ಅವರು ಕಾರ್ತಿಕ್ ಆರ್ಯನ್ ಜೊತೆ ಊಟಕ್ಕೆ ತೆರಳಿದ್ದಾರೆ. ಒಂದೇ ರೆಸ್ಟೋರೆಂಟ್​ನಲ್ಲಿ ಊಟ ಮಾಡಿದ್ದರೂ ಕೂಡ ಅವರು ಅಲ್ಲಿಂದ ಹೊರಡುವಾಗ ಪ್ರತ್ಯೇಕವಾಗಿ ಹೊರಗೆ ಬಂದಿದ್ದಾರೆ. ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಜೊತೆಯಾಗಿ ಕಾಣಿಸಿಕೊಳ್ಳುವುದು ಬೇಡ ಎಂಬುದು ಅವರ ಉದ್ದೇಶ ಆಗಿತ್ತು. ಆದರೆ ಕೂಡ ಕೆಲವು ಫೋಟೋಗಳು ಲಭ್ಯವಾಗಿವೆ.

View this post on Instagram

A post shared by India Forums (@indiaforums)

ವೈರಲ್ ಆಗಿರುವ ವಿಡಿಯೋಗೆ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ. ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ. ಆದರೆ ತಮ್ಮಿಬ್ಬರ ರಿಲೇಷನ್​​ಶಿಪ್ ಏನು ಎಂಬ ಬಗ್ಗೆ ಅವರಿಬ್ಬರು ಬಹಿರಂಗವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ. ಒಟ್ಟಿನಲ್ಲಿ ಗಾಸಿಪ್ ಜೋರಾಗಿ ಹಬ್ಬುತ್ತಲೇ ಇದೆ.

ಇದನ್ನೂ ಓದಿ: ಶ್ರೀಲೀಲಾ ಬಗ್ಗೆ ತೆಲುಗು ಚಿತ್ರರಂಗದಲ್ಲಿ ಅಸಮಾಧಾನ: ಕಾರಣವೇನು?

ದಕ್ಷಿಣ ಭಾರತಕ್ಕಿಂತಲೂ ಬಾಲಿವುಡ್ ಕಡೆಗೆ ಶ್ರೀಲೀಲಾ ಅವರಿಗೆ ಆಸಕ್ತಿ ಹೆಚ್ಚಿದಂತಿದೆ. ರಶ್ಮಿಕಾ ಮಂದಣ್ಣ ರೀತಿ ಶ್ರೀಲೀಲಾ ಕೂಡ ಹೊಸ ಹೊಸ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕಾರ್ತಿಕ್ ಆರ್ಯನ್ ಜೊತೆಗಿನ ಸಿನಿಮಾ ಹಿಟ್ ಆದರೆ ಶ್ರೀಲೀಲಾಗೆ ಅವಕಾಶಗಳ ಹೊಳೆಯೇ ಹರಿಯಲಿದೆ. ತೆಲುಗಿನಲ್ಲಿ ಈಗಾಗಲೇ ಅವರು ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು