AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊತೆಯಾಗಿ ಸುತ್ತಾಡುತ್ತಿರುವ ಶ್ರೀಲೀಲಾ, ಕಾರ್ತಿಕ್ ಆರ್ಯನ್; ಸಿಕ್ತು ಸಾಕ್ಷಿ

ಬಾಲಿವುಡ್ ಹೀರೋ ಕಾರ್ತಿಕ್ ಆರ್ಯನ್ ಅವರು ಈಗ ಶ್ರೀಲೀಲಾ ಜೊತೆ ಸುತ್ತಾಡಲು ಆರಂಭಿಸಿದ್ದಾರೆ. ಫೋಟೋಗಳು, ವಿಡಿಯೋಗಳು ವೈರಲ್ ಆಗಿವೆ. ಆದರೆ ಅವರಿಬ್ಬರು ತಮ್ಮ ರಿಲೇಷನ್​ಶಿಪ್ ಬಗ್ಗೆ ಮೌನ ಮುರಿದಿಲ್ಲ. ಅನುರಾಗ್ ಬಸು ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಅವರಿಬ್ಬರು ನಟಿಸುತ್ತಿದ್ದಾರೆ. ಸಿನಿಮಾದ ಆಚೆಗೂ ಅವರ ನಡುವೆ ನಂಟು ಬೆಳೆದಿದೆ.

ಜೊತೆಯಾಗಿ ಸುತ್ತಾಡುತ್ತಿರುವ ಶ್ರೀಲೀಲಾ, ಕಾರ್ತಿಕ್ ಆರ್ಯನ್; ಸಿಕ್ತು ಸಾಕ್ಷಿ
Kartik Aaryan, Sreeleela
ಮದನ್​ ಕುಮಾರ್​
|

Updated on: Jul 03, 2025 | 3:18 PM

Share

ನಟಿ ಶ್ರೀಲೀಲಾ (Sreeleela) ಅವರು ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಫೇಮಸ್ ಆಗಿದ್ದಾರೆ. ಅಲ್ಲದೇ ಅವರಿಗೆ ಬಾಲಿವುಡ್​ ಕೂಡ ಕೈ ಬೀಸಿ ಕರೆದಿದೆ. ಈಗಾಗಲೇ ಅವರು ಕಾರ್ತಿಕ್ ಆರ್ಯನ್ (Kartik Aaryan) ಜೊತೆಗಿನ ಹೊಸ ಸಿನಿಮಾಗೆ ಶೂಟಿಂಗ್ ಮಾಡುತ್ತಿದ್ದಾರೆ. ಅಚ್ಚರಿ ಏನೆಂದರೆ, ಶೂಟಿಂಗ್ ಹೊರತಾಗಿಯೂ ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಅವರು ಭೇಟಿ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರಿಬ್ಬರು ಒಟ್ಟಿಗೆ ಡೇಟಿಂಗ್​ಗೆ ತೆರಳಿರುವ ವಿಷಯ ಬಹಿರಂಗ ಆಗಿದೆ. ಇಬ್ಬರೂ ಒಂದೇ ರೆಸ್ಟೋರೆಂಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಅಭಿಮಾನಿಗಳಿಗೆ ಇದ್ದ ಅನುಮಾನಕ್ಕೆ ಇನ್ನಷ್ಟು ಬಲ ಬಂದಂತೆ ಆಗಿದೆ.

ಕಾರ್ತಿಕ್ ಆರ್ಯನ್ ಜೊತೆ ಯಾವುದೇ ನಟಿ ಸಿನಿಮಾ ಮಾಡಿದರೂ ಕೂಡ ಗಾಸಿಪ್ ಹುಟ್ಟಿಕೊಳ್ಳುತ್ತದೆ. ಈ ಮೊದಲು ಸಾರಾ ಅಲಿ ಖಾನ್ ಜೊತೆ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಈಗ ಶ್ರೀಲೀಲಾ ಹೆಸರು ಕೇಳಿಬರುತ್ತಿದೆ. ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಅವರು ಸಿನಿಮಾ ಹೊರತಾಗಿಯೂ ಆತ್ಮೀಯತೆ ಬೆಳೆಸಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಫೋಟೋ ಮತ್ತು ವಿಡಿಯೋ ಸಾಕ್ಷಿ ಆಗಿದೆ.

ಇದನ್ನೂ ಓದಿ
Image
ಡ್ಯಾನ್ಸರ್ ಎಂದ ನಿರೂಪಕಿಗೆ ಜಾಡಿಸಿದ ನಟಿ ಶ್ರೀಲೀಲಾ
Image
ಶ್ರೀಲೀಲಾ ಬಗ್ಗೆ ತೆಲುಗು ನಿರ್ಮಾಪಕರ ಬೇಸರ, ಸಂಘಕ್ಕೆ ದೂರು ಸಾಧ್ಯತೆ
Image
ಇಬ್ಬರು ಮಕ್ಕಳ ದತ್ತು ಪಡೆದಿದ್ದಾರೆ ಶ್ರೀಲೀಲಾ: ಈ ವಿಚಾರ ಗೊತ್ತೇ?
Image
‘ಪುಷ್ಪ 2’ ತಂಡಕ್ಕೆ ಏಳು ಕೋಟಿ ಹಣ ಉಳಿಸಿದ ನಟಿ ಶ್ರೀಲೀಲಾ

ಶ್ರೀಲೀಲಾ ಅವರು ಕಾರ್ತಿಕ್ ಆರ್ಯನ್ ಜೊತೆ ಊಟಕ್ಕೆ ತೆರಳಿದ್ದಾರೆ. ಒಂದೇ ರೆಸ್ಟೋರೆಂಟ್​ನಲ್ಲಿ ಊಟ ಮಾಡಿದ್ದರೂ ಕೂಡ ಅವರು ಅಲ್ಲಿಂದ ಹೊರಡುವಾಗ ಪ್ರತ್ಯೇಕವಾಗಿ ಹೊರಗೆ ಬಂದಿದ್ದಾರೆ. ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಜೊತೆಯಾಗಿ ಕಾಣಿಸಿಕೊಳ್ಳುವುದು ಬೇಡ ಎಂಬುದು ಅವರ ಉದ್ದೇಶ ಆಗಿತ್ತು. ಆದರೆ ಕೂಡ ಕೆಲವು ಫೋಟೋಗಳು ಲಭ್ಯವಾಗಿವೆ.

View this post on Instagram

A post shared by India Forums (@indiaforums)

ವೈರಲ್ ಆಗಿರುವ ವಿಡಿಯೋಗೆ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ. ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ. ಆದರೆ ತಮ್ಮಿಬ್ಬರ ರಿಲೇಷನ್​​ಶಿಪ್ ಏನು ಎಂಬ ಬಗ್ಗೆ ಅವರಿಬ್ಬರು ಬಹಿರಂಗವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ. ಒಟ್ಟಿನಲ್ಲಿ ಗಾಸಿಪ್ ಜೋರಾಗಿ ಹಬ್ಬುತ್ತಲೇ ಇದೆ.

ಇದನ್ನೂ ಓದಿ: ಶ್ರೀಲೀಲಾ ಬಗ್ಗೆ ತೆಲುಗು ಚಿತ್ರರಂಗದಲ್ಲಿ ಅಸಮಾಧಾನ: ಕಾರಣವೇನು?

ದಕ್ಷಿಣ ಭಾರತಕ್ಕಿಂತಲೂ ಬಾಲಿವುಡ್ ಕಡೆಗೆ ಶ್ರೀಲೀಲಾ ಅವರಿಗೆ ಆಸಕ್ತಿ ಹೆಚ್ಚಿದಂತಿದೆ. ರಶ್ಮಿಕಾ ಮಂದಣ್ಣ ರೀತಿ ಶ್ರೀಲೀಲಾ ಕೂಡ ಹೊಸ ಹೊಸ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕಾರ್ತಿಕ್ ಆರ್ಯನ್ ಜೊತೆಗಿನ ಸಿನಿಮಾ ಹಿಟ್ ಆದರೆ ಶ್ರೀಲೀಲಾಗೆ ಅವಕಾಶಗಳ ಹೊಳೆಯೇ ಹರಿಯಲಿದೆ. ತೆಲುಗಿನಲ್ಲಿ ಈಗಾಗಲೇ ಅವರು ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ