AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kartik Aaryan: 100 ಕೋಟಿ ರೂಪಾಯಿ ಗಳಿಸಿದ ‘ಸತ್ಯಪ್ರೇಮ್​ ಕಿ ಕಥಾ’: ಕಿಯಾರಾ ಅಡ್ವಾಣಿ, ಕಾರ್ತಿಕ್​ ಆರ್ಯನ್​ಗೆ ಮತ್ತೊಂದು ಗೆಲುವು

Satyaprem Ki Katha Collection: 13 ದಿನ ಪ್ರದರ್ಶನ ಕಂಡಿರುವ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ 68 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿದೆ. ವಿದೇಶದ ಕಲೆಕ್ಷನ್​ ಕೂಡ ಸೇರಿಸಿದರೆ 100 ಕೋಟಿ ರೂಪಾಯಿ ದಾಟಿದಂತಾಗುತ್ತದೆ.

Kartik Aaryan: 100 ಕೋಟಿ ರೂಪಾಯಿ ಗಳಿಸಿದ ‘ಸತ್ಯಪ್ರೇಮ್​ ಕಿ ಕಥಾ’: ಕಿಯಾರಾ ಅಡ್ವಾಣಿ, ಕಾರ್ತಿಕ್​ ಆರ್ಯನ್​ಗೆ ಮತ್ತೊಂದು ಗೆಲುವು
ಕಿಯಾರಾ ಅಡ್ವಾಣಿ, ಕಾರ್ತಿಕ್​ ಆರ್ಯನ್​
ಮದನ್​ ಕುಮಾರ್​
|

Updated on:Jul 11, 2023 | 4:35 PM

Share

ಬಾಲಿವುಡ್​ನಲ್ಲಿ ಕಿಯಾರಾ ಅಡ್ವಾಣಿ (Kiara Advani) ಮತ್ತು ಕಾರ್ತಿಕ್​ ಆರ್ಯನ್​ ಅವರು ಸೂಪರ್​ ಹಿಟ್​ ಜೋಡಿ ಎನಿಸಿಕೊಂಡಿದ್ದಾರೆ. ‘ಭೂಲ್​ ಭುಲಯ್ಯ 2’ ಸಿನಿಮಾ ಮೂಲಕ ಅವರು ಗೆದ್ದು ಬೀಗಿದ್ದರು. ಈಗ ಅವರಿಗೆ ಮತ್ತೊಂದು ಯಶಸ್ಸು ಸಿಕ್ಕಿದೆ. ಇತ್ತೀಚೆಗೆ ಬಿಡುಗಡೆಯಾದ ‘ಸತ್ಯಪ್ರೇಮ್​ ಕಿ ಕಥಾ’ (Satyaprem Ki Katha) ಸಿನಿಮಾ ಹಿಟ್​ ಆಗಿದೆ. ವಿಶ್ವಾದ್ಯಂತ ಈ ಸಿನಿಮಾಗೆ 100 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಇದರಿಂದ ಕಿಯಾರಾ ಅಡ್ವಾಣಿ ಮತ್ತು ಕಾರ್ತಿಕ್​ ಆರ್ಯನ್​ (Kartik Aaryan) ಅವರ ಖ್ಯಾತಿ ಹೆಚ್ಚಾಗಿದೆ. ಬಾಲಿವುಡ್​ನಲ್ಲಿ ಇರುವ ಗುಂಪುಗಾರಿಕೆಯನ್ನು ಎದುರಿಸಿ ನಿಂತವರು ಕಾರ್ತಿಕ್​ ಆರ್ಯನ್​. ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ ಗೆದ್ದಿದ್ದಕ್ಕೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

‘ಸತ್ಯಪ್ರೇಮ್​ ಕಿ ಕಥಾ’ ಬಿಡುಗಡೆ ಆಗಿದ್ದು ಜೂನ್​ 29ರಂದು. ಮೊದಲ ದಿನ ಈ ಚಿತ್ರಕ್ಕೆ 9.25 ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಎರಡನೇ ದಿನದ ಕಲೆಕ್ಷನ್​ ಕೊಂಚ ಕುಸಿಯಿತು. ಅಂದು ಕೇವಲ 6.50 ಕೋಟಿ ರೂಪಾಯಿ ಕಮಾಯಿ ಆಯಿತು. ಆದರೆ ಮೂರು ಮತ್ತು ನಾಲ್ಕನೇ ದಿನ ಏರಿಕೆ ಕಂಡುಬಂತು. ಜೂನ್​ 1ರಂದು 10.10 ಹಾಗೂ ಜೂನ್​ 2ರಂದು 11.50 ಕೋಟಿ ರೂಪಾಯಿ ಕಲೆಕ್ಷನ್​ ಆಯಿತು.

ಇದನ್ನೂ ಓದಿ: Karthik Aaryan: ವೇದಿಕೆ ಮೇಲೆ ಚಪ್ಪಲಿ ಹಾಕಿಕೊಳ್ಳಲು ಕಿಯಾರಾಗೆ ಸಹಾಯ ಮಾಡಿದ ಕಾರ್ತಿಕ್​ ಆರ್ಯನ್​; ವಿಡಿಯೋ ವೈರಲ್​

ಈತನಕ 13 ದಿನ ಪ್ರದರ್ಶನ ಕಂಡಿರುವ ಈ ಸಿನಿಮಾ 68 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿದೆ. ವಿದೇಶದ ಕಲೆಕ್ಷನ್​ ಕೂಡ ಸೇರಿಸಿದರೆ 100 ಕೋಟಿ ರೂಪಾಯಿ ದಾಟಿದಂತಾಗುತ್ತದೆ. ಈ ಗೆಲುವನ್ನು ಚಿತ್ರತಂಡದವರು ಸಂಭ್ರಮಿಸುತ್ತಿದ್ದಾರೆ. ಸಮೀರ್ ವಿದ್ವಾಂಸ್​ ಅವರು ‘ಸತ್ಯಪ್ರೇಮ್​ ಕಿ ಕಥಾ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಗಜರಾಜ್​ ರಾವ್​, ಸುಪ್ರಿಯಾ ಪಾಠಕ್​, ರಾಜ್​ಪಾಲ್​ ಯಾದವ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Kiara Advani: ಮದುವೆ ಬಳಿಕ ಐಷಾರಾಮಿ ಕಾರು ಖರೀದಿಸಿದ ನಟಿ ಕಿಯಾರಾ ಅಡ್ವಾಣಿ; ಇದರ ಬೆಲೆ ಇಷ್ಟೊಂದಾ?

ಕಾರ್ತಿಕ್​ ಆರ್ಯನ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಸಿನಿಮಾಗಳಲ್ಲಿ ಭರಪೂರ ಎಂಟರ್​ಟೇನ್ಮೆಂಟ್​ ಇರಲಿದೆ. ಅಲ್ಲದೇ ಫ್ಯಾಮಿಲಿ ಪ್ರೇಕ್ಷಕರನ್ನು ಕೂಡ ಅವರು ಸೆಳೆದುಕೊಂಡಿದ್ದಾರೆ. ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾದಲ್ಲಿ ರೊಮ್ಯಾಂಟಿಕ್​ ಲವ್​ ಸ್ಟೋರಿ ಜೊತೆಗೆ ಒಂದು ಸೋಶಿಯಲ್​ ಮೆಸೇಜ್​ ಕೂಡ ಇದೆ. ಅದು ಪ್ರೇಕ್ಷಕರಿಗೆ ಇಷ್ಟ ಆಗಿದೆ. ಎಷ್ಟೇ ಯಶಸ್ಸು ಸಿಕ್ಕರೂ ಕೂಡ ಕಾರ್ತಿಕ್​ ಆರ್ಯನ್​ ಅವರು ಸರಳತೆ ಮರೆತಿಲ್ಲ. ಹಾಗಾಗಿ ಅವರನ್ನು ಅಭಿಮಾನಿಗಳು ಹೆಚ್ಚು ಇಷ್ಟಪಡುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:32 pm, Tue, 11 July 23

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ