AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಗಿಟಾರ್​ನಿಂದ ಹಲ್ಲೆ ಮಾಡಿದ ಕಾರ್ತಿಕ್ ಆರ್ಯನ್; ವೈರಲ್ ವಿಡಿಯೋದ ಅಸಲಿಯತ್ತು ಏನು?

ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಅವರ ಕೆಲವು ವಿಡಿಯೋಗಳು ವೈರಲ್ ಆಗಿದೆ. ಈ ವಿಡಿಯೋಗಳಲ್ಲಿ ನಟಿ ಶ್ರೀಲೀಲಾ ಕೂಡ ಇದ್ದಾರೆ. ಇವರಿಬ್ಬರು ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸೆಟ್​ನಿಂದ ವಿಡಿಯೋಗಳು ಲೀಕ್ ಆಗಿವೆ. ಅದರ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ವೇದಿಕೆ ಮೇಲೆ ಗಿಟಾರ್​ನಿಂದ ಹಲ್ಲೆ ಮಾಡಿದ ಕಾರ್ತಿಕ್ ಆರ್ಯನ್; ವೈರಲ್ ವಿಡಿಯೋದ ಅಸಲಿಯತ್ತು ಏನು?
Kartik Aaryan
Follow us
ಮದನ್​ ಕುಮಾರ್​
|

Updated on: Apr 01, 2025 | 5:33 PM

ಬಿ-ಟೌನ್ ನಟ ಕಾರ್ತಿಕ್ ಆರ್ಯನ್ (Kartik Aaryan) ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ‘ಭೂಲ್ ಭುಲಯ್ಯ 3’, ‘ಚಂದು ಚಾಂಪಿಯನ್’ ಮುಂತಾದ ಸಿನಿಮಾಗಳ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈಗ ಕಾರ್ತಿಕ್ ಆರ್ಯನ್ ಅವರು ಹೊಸ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಕನ್ನಡದ ನಟಿ ಶ್ರೀಲೀಲಾ (Sreeleela) ಅವರು ಹೀರೋಯಿನ್ ಆಗಿದ್ದಾರೆ. ಈ ನಡುವೆ ಒಂದು ವಿಡಿಯೋ ವೈರಲ್ ಆಗಿದೆ. ವೇದಿಕೆ ಮೇಲೆ ವ್ಯಕ್ತಿಯೊಬ್ಬನ ಮೇಲೆ ಕಾರ್ತಿಕ್ ಆರ್ಯನ್ ಅವರು ಗಿಟಾರ್ ಹಿಡಿದು ಹಲ್ಲೆ ಮಾಡುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ವೈರಲ್ ಆಗಿರುವ ವಿಡಿಯೋ (Kartik Aaryan Viral Video) ಬಗ್ಗೆ ಇಲ್ಲಿದೆ ಮಾಹಿತಿ..

ಕಾರ್ತಿಕ್ ಆರ್ಯನ್ ಹಾಗೂ ಶ್ರೀಲೀಲಾ ಜೋಡಿಯ ಸಿನಿಮಾಗೆ ಮೊದಲು ‘ಆಶಿಕಿ 3’ ಎಂದು ಶೀರ್ಷಿಕೆ ಇಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೆಲವು ವಿಘ್ನಗಳು ಎದುರಾಗಿದ್ದರಿಂದ ಟೈಟಲ್ ಬದಲಾಯಿಸಲು ಚಿತ್ರತಂಡ ತೀರ್ಮಾನಿಸಿದಂತಿದೆ. ‘ತು ಮೇರಿ ಜಿಂದಗಿ ಹೈ’ ಎಂದು ಶೀರ್ಷಿಕೆ ಇಡುವ ಸಾಧ್ಯತೆ ದಟ್ಟವಾಗಿದೆ. ಈ ಸಿನಿಮಾದ ಶೂಟಿಂಗ್ ಸೆಟ್​ನಿಂದ ಕೆಲವು ವಿಡಿಯೋಗಳು ಲೀಕ್ ಆಗಿವೆ.

ಇದನ್ನೂ ಓದಿ
Image
ಶ್ರೀಲೀಲಾಗೆ ‘ನೀನೇ ನನ್ನ ಜೀವನ’ ಎಂದ ಬಾಲಿವುಡ್ ಹೀರೋ ಕಾರ್ತಿಕ್ ಆರ್ಯನ್
Image
ಏರುತ್ತಲೇ ಸಾಗುತ್ತಿದೆ ಕಾರ್ತಿಕ್ ಆರ್ಯನ್ ರಿಯಲ್ ಎಸ್ಟೇಟ್ ಹೂಡಿಕೆ
Image
ಸುಶಾಂತ್ ಸಾವಿನ ಬಳಿಕ ಕಾರ್ತಿಕ್ ಆರ್ಯನ್​ ಬಗ್ಗೆ ಮೂಡಿತ್ತು ಆತಂಕ
Image
ಗುರುತೇ ಸಿಗದಂತೆ ಬದಲಾದ ಸ್ಟಾರ್​ ನಟ; ಬಾಲಿವುಡ್​ ಕಲಾವಿದನ ಪೋಸ್ಟರ್​ ವೈರಲ್

ಮೊದಲ ವಿಡಿಯೋದಲ್ಲಿ ಕಾರ್ತಿಕ್ ಆರ್ಯನ್ ಅವರು ಗಿಟಾರ್ ನಡಿಸುತ್ತಾ, ವೇದಿಕೆಯಲ್ಲಿ ಹಾಡುತ್ತಿರುವ ದೃಶ್ಯವಿದೆ. ಅವರ ಹಿಂದೆ ಶ್ರೀಲೀಲಾ ಕೂಡ ಗಿಟಾರ್ ಹಿಡಿದು ನಿಂತಿದ್ದಾರೆ. ನಿರ್ದೇಶಕ ಅನುರಾಗ್ ಬಸು ಅವರು ವೇದಿಕೆ ಮುಂಭಾಗ ನಿಂತಿರುವ ಪ್ರೇಕ್ಷಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಶೂಟಿಂಗ್ ಸೆಟ್​ನಿಂದ ಈ ರೀತಿ ವಿಡಿಯೋ ಲೀಕ್ ಆಗಿರುವುದಕ್ಕೆ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ ಹಲ್ಲೆಯ ದೃಶ್ಯವಿದೆ. ಕಾರ್ತಿಕ್ ಆರ್ಯನ್ ಅವರು ವ್ಯಕ್ತಿಯೊಬ್ಬನಿಗೆ ಗಿಟಾರ್​ನಿಂದ ಹೊಡೆಯುತ್ತಾರೆ. ಬಳಿಕ ಆತನಿಗೆ ಒದ್ದು ವೇದಿಕೆಯಿಂದ ಕೆಳಗೆ ಬೀಳಿಸುತ್ತಾರೆ. ಇದು ರಿಯಲ್ ಅಲ್ಲ. ಸಿನಿಮಾ ಶೂಟಿಂಗ್ ಅಷ್ಟೇ. ಆದರೆ ಈ ರೀತಿಯ ಪ್ರಮುಖ ದೃಶ್ಯಗಳು ಲೀಕ್ ಆದರೆ ಸಿನಿಮಾದಲ್ಲಿ ನೋಡಲು ಏನು ಉಳಿದಿರುತ್ತದೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಶ್ರೀಲೀಲಾಗೆ ‘ನೀನೇ ನನ್ನ ಜೀವನ’ ಎಂದ ಬಾಲಿವುಡ್ ಹೀರೋ ಕಾರ್ತಿಕ್ ಆರ್ಯನ್

ಈ ಸಿನಿಮಾಗಾಗಿ ಕಾರ್ತಿಕ್ ಆರ್ಯನ್ ಅವರು ಗೆಟಪ್ ಬದಲಾಯಿಸಿಕೊಂಡಿದ್ದಾರೆ. ಲವರ್ ಬಾಯ್ ಅವತಾರ ಬಿಟ್ಟು ಸಿಕ್ಕಾಪಟ್ಟೆ ಮಾಸ್ ಗೆಟಪ್ ಧರಿಸಿದ್ದಾರೆ. ಅವರನ್ನು ನೋಡಿದರೆ ‘ಅನಿಮಲ್’ ಹಾಗೂ ‘ಕಬೀರ್ ಸಿಂಗ್’ ಸಿನಿಮಾಗಳು ನೆನಪಾಗುತ್ತಿವೆ ಎಂದು ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್