AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಆರ್ಯನ್ ಮನೆಯಲ್ಲಿ ಹಬ್ಬ ಆಚರಿಸಿದ ಶ್ರೀಲೀಲಾ: ಹೆಚ್ಚಿತು ಅನುಮಾನ

ನಟಿ ಶ್ರೀಲೀಲಾ ಅವರು ತಮ್ಮ ಮೊದಲ ಬಾಲಿವುಡ್​​ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ಸ್ಟಾರ್ ನಟ ಕಾರ್ತಿಕ್ ಆರ್ಯನ್​ ಜೊತೆ ಅಭಿನಯಿಸುತ್ತಿದ್ದಾರೆ. ಸಿನಿಮಾದ ಕೆಲಸಗಳ ಹೊರತಾಗಿಯೂ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಬಗ್ಗೆ ಗಾಸಿಪ್ ಹಬ್ಬಲು ಇದು ಕಾರಣ ಆಗಿದೆ.

ಕಾರ್ತಿಕ್ ಆರ್ಯನ್ ಮನೆಯಲ್ಲಿ ಹಬ್ಬ ಆಚರಿಸಿದ ಶ್ರೀಲೀಲಾ: ಹೆಚ್ಚಿತು ಅನುಮಾನ
Kartik Aaryan
ಮದನ್​ ಕುಮಾರ್​
|

Updated on: Sep 08, 2025 | 10:39 PM

Share

ಬಾಲಿವುಡ್ ನಟ ಕಾರ್ತಿಕ್ ಆರ್ಯನ್ (Kartik Aaryan) ಜೊತೆ ನಟಿ ಶ್ರೀಲೀಲಾ ಅವರು ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಮೂಡಿದೆ. ಈಗಾಗಲೇ ಹಾಡು ಸಖತ್ ಸದ್ದು ಮಾಡುತ್ತಿದೆ. ಶೂಟಿಂಗ್ ಸಂದರ್ಭದ ವಿಡಿಯೋಗಳು ವೈರಲ್ ಆಗಿವೆ. ಇದೆಲ್ಲದರ ನಡುವೆ ಶ್ರೀಲೀಲಾ ಮತ್ತು ಕಾರ್ತಿಕ್ ಆರ್ಯನ್ ನಡುವೆ ಆಪ್ತತೆ ಹೆಚ್ಚುತ್ತಿದೆ. ಅದಕ್ಕೆ ಹಲವು ಸಾಕ್ಷಿಗಳು ಸಿಗುತ್ತಿವೆ. ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ (Sreeleela) ಅವರು ಒಟ್ಟಿಗೆ ಸೇರಿ ಗಣೇಶ ಚತುರ್ಥಿ ಆಚರಿಸಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

ಶ್ರೀಲೀಲಾ ಅವರು ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಬಾಲಿವುಡ್​​ನಲ್ಲಿ ಕೂಡ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಹಿಂದಿಯ ಮೊದಲ ಸಿನಿಮಾದಲ್ಲೇ ಸ್ಟಾರ್ ನಟ ಕಾರ್ತಿಕ್ ಆರ್ಯನ್ ಜೊತೆ ನಟಿಸುವ ಚಾನ್ಸ್ ಶ್ರೀಲೀಲಾಗೆ ಸಿಕ್ಕಿದೆ. ಅವರಿಬ್ಬರ ಕಾಂಬಿನೇಷನ್ ಬಗ್ಗೆ ಸಿನಿಪ್ರಿಯರಿಗೆ ಭರವಸೆ ಮೂಡಿದೆ. ಜೊತೆಗೆ ಅನುಮಾನಗಳೂ ಹುಟ್ಟಿಕೊಂಡಿವೆ.

ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಅವರು ಡೇಟಿಂಗ್ ಮಾಡುತ್ತಿದ್ದಾರಾ ಎಂಬ ಗುಮಾನಿ ಇದೆ. ಅದಕ್ಕೆ ಪೂರಕವಾಗಿ ಕಾರ್ತಿಕ್ ಆರ್ಯನ್ ಅವರ ಮನೆಯ ಗಣೇಶ ಹಬ್ಬದಲ್ಲಿ ಶ್ರೀಲೀಲಾ ಪಾಲ್ಗೊಂಡಿದ್ದಾರೆ. ಒಂದೇ ಬಣ್ಣದ ಡ್ರೆಸ್ ಹಾಕಿಕೊಂಡು ಅವರಿಬ್ಬರು ಮಿಂಚಿದ್ದಾರೆ. ಎರಡೂ ಕುಟುಂಬದವರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಈ ಫೋಟೋಗಳನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾರ್ತಿಕ್ ಆರ್ಯನ್ ಹಾಗೂ ಶ್ರೀಲೀಲಾ ಅವರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್ ಮಾತನಾಡಿಕೊಳ್ಳುತ್ತಿದ್ದಾರೆ. ಹಾಗಂತ ಇದನ್ನೆಲ್ಲ ಗಂಭೀರವಾಗಿ ಪರಿಗಣಿಸುವಂತಿಲ್ಲ. ಕಾರ್ತಿಕ್ ಆರ್ಯನ್ ಯಾವ ನಟಿಯ ಜೊತೆ ಸಿನಿಮಾ ಮಾಡಿದರೂ ಈ ರೀತಿಯ ಡೇಟಿಂಗ್ ವದಂತಿ ಹಬ್ಬಿಸುವುದು ಸಹಜ ಎಂಬಂತಾಗಿದೆ.

ಇದನ್ನೂ ಓದಿ: ಮತ್ತೊಂದು ಬಾಲಿವುಡ್ ಬಿಗ್ ಬಜೆಟ್ ಸಿನಿಮಾಕ್ಕೆ ಶ್ರೀಲೀಲಾ ಆಯ್ಕೆ

ಶ್ರೀಲೀಲಾ ಮತ್ತು ಕಾರ್ತಿಕ್ ಆರ್ಯನ್ ಅವರು ಒಟ್ಟಿಗೆ ನಟಿಸುತ್ತಿರುವ ಸಿನಿಮಾಗೆ ಇನ್ನೂ ಟೈಟಲ್ ಏನೆಂಬುದು ಬಹಿರಂಗ ಆಗಿಲ್ಲ. ಖ್ಯಾತ ನಿರ್ದೇಶಕ ಅನುರಾಗ್ ಬಸು ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಗಾಢವಾದ ಲವ್ ಸ್ಟೋರಿ ಇರಲಿದೆ. ‘ತು ಮೇರಿ ಜಿಂದಗಿ ಹೈ..’ ಹಾಡಿನ ಮೂಲಕ ಈ ಸಿನಿಮಾ ಮೇಲಿನ ಹೈಪ್ ಜಾಸ್ತಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ