AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ

Bhool Bhulaiyaa 2 Box Office Collection: ‘ಭೂಲ್​ ಭುಲಯ್ಯ 2’ ಚಿತ್ರ ಜಯಭೇರಿ ಬಾರಿಸುತ್ತಿದೆ. ಆದಷ್ಟು ಬೇಗ ಈ ಸಿನಿಮಾ 200 ಕೋಟಿ ರೂಪಾಯಿ ಕ್ಲಬ್​ ಸೇರಲಿ ಎಂದು ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ ಹಾರೈಸುತ್ತಿದ್ದಾರೆ.

150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
ಕಾರ್ತಿಕ್ ಆರ್ಯನ್
TV9 Web
| Edited By: |

Updated on:Jun 05, 2022 | 4:18 PM

Share

ನಟ ಕಾರ್ತಿಕ್​ ಆರ್ಯನ್ (Kartik Aaryan) ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಅವರು ಚಿತ್ರರಂಗಕ್ಕೆ ಬಂದು 10 ವರ್ಷ ಕಳೆದಿದೆ. ಈ ಒಂದು ದಶಕದಲ್ಲಿ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿರುವುದು ‘ಭೂಲ್​ ಭುಲಯ್ಯ 2’ (Bhool Bhulaiyaa 2) ಸಿನಿಮಾದಿಂದ. ಹೌದು, ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಮೋಡಿ ಮಾಡುತ್ತಿದೆ. ಬಿಡುಗಡೆಯಾಗಿ 16 ದಿನ ಕಳೆದಿದ್ದರೂ ಕೂಡ ಈ ಸಿನಿಮಾದ ಆರ್ಭಟ ಕಮ್ಮಿ ಆಗಿಲ್ಲ. 16ನೇ ದಿನವೂ 4.55 ಕೋಟಿ ರೂಪಾಯಿ ಕಲೆಕ್ಷನ್​ (Box Office Collection) ಮಾಡಿದೆ. ಆ ಮೂಲಕ ‘ಭೂಲ್​ ಭುಲಯ್ಯ 2’ ಚಿತ್ರದ ಒಟ್ಟಾರೆ ಗಳಿಕೆ 149.11 ಕೋಟಿ ರೂಪಾಯಿ ಆಗಿದೆ. ಇಂದು (ಜೂನ್​ 5) ಭಾನುವಾರ ಆದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿದ್ದಾರೆ. ಅದರ ಪರಿಣಾಮವಾಗಿ ಈ ಸಿನಿಮಾ 150 ಕೋಟಿ ರೂಪಾಯಿ ಕ್ಲಬ್​ ಸೇರಿದೆ. ಇದು ಕಾರ್ತಿಕ್​ ಆರ್ಯನ್​ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ.

ಬಾಲಿವುಡ್​ನ ಕೆಲವರು ಕಾರ್ತಿಕ್​ ಆರ್ಯನ್​ ವಿರುದ್ಧ ಸಂಚು ರೂಪಿಸಿದ್ದಾರೆ ಎಂಬ ಮಾತಿದೆ. ಕಾರ್ತಿಕ್​ ಆರ್ಯನ್​ಗೆ ಸಿಗಬೇಕಿದ್ದ ಹಲವು ಆಫರ್​ಗಳು ಹಿಂದಿ ಚಿತ್ರರಂಗದ ಕೆಲವು ಪ್ರಭಾವಿ ವ್ಯಕ್ತಿಗಳಿಂದಾಗಿ ತಪ್ಪಿ ಹೋಗಿವೆ. ಮೂವೀ ಮಾಫಿಯಾದವರ ಗುಂಪುಗಾರಿಕೆಯ ಕಾರಣದಿಂದ ಅವರನ್ನು ಸೈಡ್​ ಲೈನ್​ ಮಾಡಲಾಗಿದೆ. ದೊಡ್ಡ ದೊಡ್ಡ ಪ್ರೊಡಕ್ಷನ್​ ಹೌಸ್​ಗಳು ಕಾರ್ತಿಕ್​ ಆರ್ಯನ್​ಗೆ ಅವಕಾಶ ನೀಡುತ್ತಿಲ್ಲ ಎಂಬ ಮಾತಿದೆ. ಈ ಎಲ್ಲ ತಿರಸ್ಕಾರದ ನಡುವೆಯೂ ಕಾರ್ತಿಕ್​ ಆರ್ಯನ್​ ಅವರು ಗೆದ್ದು ತೋರಿಸಿದ್ದಾರೆ.

ಇದನ್ನೂ ಓದಿ
Image
ಮೂರೇ ದಿನಕ್ಕೆ ಅರ್ಧಶತಕ ಬಾರಿಸಿದ ಕಾರ್ತಿಕ್ ಆರ್ಯನ್ ಸಿನಿಮಾ; ಬಾಲಿವುಡ್​ಗೆ ಸಿಕ್ತು ಹೊಸ ಬೂಸ್ಟ್​
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?
Image
ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಇದನ್ನೂ ಓದಿ: ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ

‘ಭೂಲ್​ ಭುಲಯ್ಯ 2’ ಸಿನಿಮಾದ ಗೆಲುವು ತುಂಬ ವಿಶೇಷವಾಗಿದೆ. ಯಾಕೆಂದರೆ, ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಸಿನಿಮಾಗಳು ಸೂಕ್ತ ರೀತಿಯಲ್ಲಿ ಕಲೆಕ್ಷನ್​ ಮಾಡುತ್ತಿಲ್ಲ. ಅಂಥದ್ದರಲ್ಲಿ ಕಾರ್ತಿಕ್​ ಆರ್ಯನ್​ ನಟನೆಯ ಈ ಸಿನಿಮಾ 150 ಕೋಟಿ ರೂಪಾಯಿ ಕಮಾಯಿ ಮಾಡಿರುವುದು ಅಚ್ಚರಿಯೇ ಸರಿ. ಅಲ್ಲದೇ, ಈ ಚಿತ್ರಕ್ಕೆ ಅನೇಕರ ಪೈಪೋಟಿ ಇತ್ತು. ಕಂಗನಾ ನಟನೆಯ ‘ಧಾಕಡ್​’ ಚಿತ್ರದ ಎದುರು ‘ಭೂಲ್​ ಭುಲಯ್ಯ 2’ ರಿಲೀಸ್​ ಆಯಿತು. ಆ ಪೈಪೋಟಿಯನ್ನು ಕಾರ್ತಿಕ್​ ಆರ್ಯನ್​ ಸಿನಿಮಾ ಎದುರಿಸಿದೆ. ಅಲ್ಲದೇ, ಈ ವಾರ (ಜೂನ್​ 3) ಬಿಡುಗಡೆಯಾದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದ ಜೊತೆಗೂ ‘ಭೂಲ್​ ಭುಲಯ್ಯ 2’ ಚಿತ್ರ ಕಠಿಣ ಸ್ಪರ್ಧೆ ನೀಡುತ್ತಿದೆ.

ಆದಷ್ಟು ಬೇಗ ಈ ಸಿನಿಮಾ 200 ಕೋಟಿ ರೂಪಾಯಿ ಕ್ಲಬ್​ ಸೇರಲಿ ಎಂದು ಕಾರ್ತಿಕ್​ ಆರ್ಯನ್​ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್​ ಬಗ್ಗೆ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:18 pm, Sun, 5 June 22

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್