AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shehzada: ಹೀನಾಯ ಸ್ಥಿತಿಯಲ್ಲಿ ‘ಶೆಹಜಾದಾ’ ಕಲೆಕ್ಷನ್​; ಶಿವರಾತ್ರಿ ಹಬ್ಬದಲ್ಲೂ ಕಾರ್ತಿಕ್​ ಆರ್ಯನ್​ಗೆ ನಿರಾಸೆ

Shehzada Collection | Kartik Aaryan: ಸಾಮಾನ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ಸಿನಿಮಾ ಬಿಡುಗಡೆ ಮಾಡಿದರೆ ಉತ್ತಮ ಕಲೆಕ್ಷನ್​ ಆಗುತ್ತದೆ. ಆದರೆ ‘ಶೆಹಜಾದಾ’ ಚಿತ್ರದ ವಿಚಾರದಲ್ಲಿ ಈ ಸೂತ್ರ ವರ್ಕೌಟ್​ ಆಗಿಲ್ಲ.

Shehzada: ಹೀನಾಯ ಸ್ಥಿತಿಯಲ್ಲಿ ‘ಶೆಹಜಾದಾ’ ಕಲೆಕ್ಷನ್​; ಶಿವರಾತ್ರಿ ಹಬ್ಬದಲ್ಲೂ ಕಾರ್ತಿಕ್​ ಆರ್ಯನ್​ಗೆ ನಿರಾಸೆ
ಕಾರ್ತಿಕ್ ಆರ್ಯನ್
ಮದನ್​ ಕುಮಾರ್​
|

Updated on:Feb 19, 2023 | 5:51 PM

Share

ನಟ ಕಾರ್ತಿಕ್​ ಆರ್ಯನ್ (Kartik Aaryan)​ ಅವರು ಈ ವರ್ಷ ದೊಡ್ಡ ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ನಿರಾಸೆ ಆಗಿದೆ. ಅವರು ನಟಿಸಿರುವ ‘ಶೆಹಜಾದಾ’ ಸಿನಿಮಾ ಫೆಬ್ರವರಿ 17ರಂದು ಬಿಡುಗಡೆ ಆಯಿತು. ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ಈ ಸಿನಿಮಾ ಸೋತಿದೆ. ಮೊದಲ ದಿನ ‘ಶೆಹಜಾದಾ’ (Shehzada Movie) ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ ಸಂಗ್ರಹ ಆಗಿದ್ದು ಕೇವಲ 6 ಕೋಟಿ ರೂಪಾಯಿ. ಎರಡನೇ ದಿನ (ಫೆ.18) ಬರೀ 6.65 ಕೋಟಿ ರೂಪಾಯಿ ಕಲೆಕ್ಷನ್​ (Shehzada Box Office Collection) ಆಗಿದೆ. ವೀಕೆಂಡ್​ನಲ್ಲಿ ಇಷ್ಟು ಕಡಿಮೆ ಆದಾಯ ಬಂದರೆ ಸೋಮವಾರದ ಹೊತ್ತಿಗೆ ಈ ಸಿನಿಮಾ ಮಕಾಡೆ ಮಲಗುವುದು ಖಚಿತ ಎಂದು ಟ್ರೇಡ್​ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​​ಗೆ ಜೋಡಿಯಾಗಿ ಕೃತಿ ಸನೋನ್​ ನಟಿಸಿದ್ದಾರೆ.

ಸಾಮಾನ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ಸಿನಿಮಾ ಬಿಡುಗಡೆಯಾದರೆ ಉತ್ತಮ ಕಲೆಕ್ಷನ್​ ಆಗುತ್ತದೆ. ಅದೇ ಉದ್ದೇಶದಿಂದ ಶಿವರಾತ್ರಿ ಪ್ರಯುಕ್ತ ‘ಶೆಹಜಾದಾ’ ಸಿನಿಮಾವನ್ನು ತೆರೆ ಕಾಣಿಸಲಾಯಿತು. ಶನಿವಾರ (ಫೆ.18) ಹಬ್ಬ ಮತ್ತು ವೀಕೆಂಡ್​ ಇದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿಲ್ಲ. ಇದರಿಂದ ಕಾರ್ತಿಕ್​ ಆರ್ಯನ್​ ಅವರ ಚಿತ್ರಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

‘ಶೆಹಜಾದಾ’ ಸೋಲಿಗೆ ಕಾರಣ ಏನು?

ಕಳೆದ ವರ್ಷ ಕಾರ್ತಿಕ್​ ಆರ್ಯನ್​ ಅವರು ‘ಭೂಲ್​ ಭುಲಯ್ಯ 2’ ಸಿನಿಮಾ ಮಾಡಿ ಗೆದ್ದಿದ್ದರು. ಆದರೆ ಈ ವರ್ಷ ಆರಂಭದಲ್ಲೇ ಅವರು ಮುಗ್ಗರಿಸುವಂತಾಗಿದೆ. ಇದಕ್ಕೆ ಕಾರಣ ಆಗಿದ್ದು ರಿಮೇಕ್. ಹೌದು, ತೆಲುಗಿನ ‘ಅಲಾ ವೈಕುಂಠಪುರಮುಲೋ’ ಚಿತ್ರದ ಹಿಂದಿ ರಿಮೇಕ್​ ಆಗಿ ‘ಶೆಹಜಾದಾ’ ಸಿನಿಮಾ ಮೂಡಿಬಂದಿದೆ. ಮೂಲ ಸಿನಿಮಾವನ್ನು ಜನರು ಈಗಾಗಲೇ ಚಿತ್ರಮಂದಿರ ಮತ್ತು ಒಟಿಟಿಯಲ್ಲಿ ನೋಡಿರುವುದರಿಂದ ಹಿಂದಿ ರಿಮೇಕ್​ ಬಗ್ಗೆ ಪ್ರೇಕ್ಷಕರು ಹೆಚ್ಚು ಆಸಕ್ತಿ ತೋರಿಸಿಲ್ಲ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ

ಫೈಟ್​ ಮಾಡಲು ಹೋಗಿ ಪೆಟ್ಟು ತಿಂದ ಕಾರ್ತಿಕ್​ ಆರ್ಯನ್​:

ನಟ ಕಾರ್ತಿಕ್​ ಆರ್ಯನ್ ಅವರು ಈವರೆಗೂ ಲವರ್​ ಬಾಯ್​ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು. ಆದರೆ ‘ಶೆಹಜಾದಾ’ ಸಿನಿಮಾ ಮೂಲಕ ಅವರು ಆ್ಯಕ್ಷನ್​ ಅವತಾರ ತಾಳಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿಯಾಗಿ ಫೈಟ್​ ಮಾಡಿದ್ದಾರೆ. ಆದರೂ ಕೂಡ ಇದು ಅವರ ಅಭಿಮಾನಿಗಳಿಗೆ ಇಷ್ಟ ಆಗಿಲ್ಲ. ಆ್ಯಕ್ಷನ್​ ಹೀರೋ ಗೆಟಪ್​ನಲ್ಲಿ ಅವರನ್ನು ಪ್ರೇಕ್ಷಕರು ಒಪ್ಪಿಕೊಂಡಿಲ್ಲ. ಹಾಗಾಗಿ ಫೈಟ್​ ಮಾಡಲು ಹೋಗಿ ಅವರು ಪೆಟ್ಟು ತಿಂದಂತಾಗಿದೆ.

ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾ ಇಂದಿಗೂ ಹಲವು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಜೊತೆಗೆ ಹಾಲಿವುಡ್​ ಸಿನಿಮಾಗಳು ಕೂಡ ಬಿಡುಗಡೆಯಾಗಿ ಪೈಪೋಟಿ ನೀಡುತ್ತಿವೆ. ಈ ಎಲ್ಲ ಚಿತ್ರಗಳ ನಡುವೆ ಸ್ಪರ್ಧಿಸುವಲ್ಲಿ ‘ಶೆಹಜಾದಾ’ ಸಿನಿಮಾ ವಿಫಲವಾಗಿದೆ. ಈ ಚಿತ್ರಕ್ಕೆ ರೋಹಿತ್​ ಧವನ್​ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:51 pm, Sun, 19 February 23

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ