AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಾ ಅಲಿ ಖಾನ್ ಓಪನ್ ಟಾಕ್ ಬಗ್ಗೆ ಅಪ್ಸೆಟ್ ಆದ ಕಾರ್ತಿಕ್ ಆರ್ಯನ್?

ಕಾರ್ತಿಕ್ ಆಡಿದ ಮಾತುಗಳು ಸಾಕಷ್ಟು ಅರ್ಥಗಳನ್ನು ಹೊಂದಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇವುಗಳು ನೇರವಾಗಿ ಸಾರಾ ಹಾಗೂ ಅನನ್ಯಾ ಅವರನ್ನು ಉದ್ದೇಶಿಸಿ ಹೇಳಿದ ಮಾತು ಎಂದು ಕೂಡ ಹೇಳಲಾಗುತ್ತಿದೆ.

ಸಾರಾ ಅಲಿ ಖಾನ್ ಓಪನ್ ಟಾಕ್ ಬಗ್ಗೆ ಅಪ್ಸೆಟ್ ಆದ ಕಾರ್ತಿಕ್ ಆರ್ಯನ್?
ಸಾರಾ-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Nov 23, 2023 | 10:29 AM

Share

‘ಕಾಫಿ ವಿತ್ ಕರಣ್’ ಶೋನಲ್ಲಿ ಎದುರಾಗುವ ಬಹುತೇಕ ವಿಚಾರಗಳು ಕಾಂಟ್ರವರ್ಸಿ ಹುಟ್ಟುಹಾಕುತ್ತವೆ. ಲವ್​, ಅಫೇರ್ ಕುರಿತು ಹೆಚ್ಚಿನ ಪ್ರಶ್ನೆ ಕೇಳಲಾಗುತ್ತದೆ. ಬಂದ ಅತಿಥಿಗಳು ನೀಡುವ ಉತ್ತರ ಮತ್ತೊಬ್ಬರ ಬದುಕಿನ ಮೇಲೆ ಪ್ರಭಾವ ಬೀರುತ್ತವೆ. ಇತ್ತೀಚೆಗೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಹಾಗೂ ಅನನ್ಯಾ ಪಾಂಡೆ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ತಿಕ್ ಆರ್ಯನ್ ವಿಚಾರ ಚರ್ಚೆಗೆ ಬಂದಿದೆ. ಈ ಸಂದರ್ಭದಲ್ಲಿ ಅವರು ಆಡಿದ ಮಾತುಗಳಿಂದ ಕಾರ್ತಿಕ್ ಅಪ್ಸೆಟ್ ಆಗಿದ್ದಾರೆ.

ಕಾರ್ತಿಕ್ ಆರ್ಯನ್ ಜೊತೆ ಅನನ್ಯಾ ಹಾಗೂ ಸಾರಾ ಇಬ್ಬರೂ ಡೇಟ್ ಮಾಡಿದ್ದಾರೆ ಎನ್ನಲಾಗಿದೆ. ಕರಣ್ ಜೋಹರ್ ಈ ಬಗ್ಗೆ ಕೇಳಿದಾಗ ಸಾರಾ ಹಾಗೂ ಅನನ್ಯಾ ನೋ ಎಂದು ಹೇಳಿಲ್ಲ. ಇನ್ನು, ಎಕ್ಸ್ ಜೊತೆ ಫ್ರೆಂಡ್ ಆಗಿರುವುದು ಎಷ್ಟು ಕಷ್ಟ ಎಂಬುದನ್ನು ಸಾರಾ ವಿವರಿಸಿದ್ದರು. ಈ ಎಲ್ಲಾ ಮಾತುಗಳು ಕಾರ್ತಿಕ್ ಅವರ ಅಸಮಾಧಾನಕ್ಕೆ ಕಾರಣ ಆಗಿದೆ. ಅವರು ಸಂದರ್ಶನ ಒಂದರಲ್ಲಿ ಹೇಳಿದ ಮಾತು ಸಾರಾಗೆ ಹೇಳಿದ ರೀತಿಯಲ್ಲಿ ಇದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ನಾನು ನಂಬುವ ಒಂದು ವಿಚಾರ ಎಂದರೆ ರಿಲೇಶನ್​ಶಿಪ್ ಇಬ್ಬರ ಮಧ್ಯೆ ಇದ್ದಾಗ ಇನ್ನೊಬ್ಬ ವ್ಯಕ್ತಿ ಅದರ ಬಗ್ಗೆ ಮಾತನಾಡಬಾರದು. ನಾವೆಲ್ಲರೂ ನಮ್ಮ ಸಂಬಂಧಗಳನ್ನು ಗೌರವಿಸಬೇಕು. ನನ್ನ ಸಂಗಾತಿಯಿಂದ ನಾನು ನಿರೀಕ್ಷಿಸುವುದು ಅದನ್ನೇ. ರಿಲೇಶನ್​ಶಿಪ್​ ಬಗ್ಗೆ ಯಾರ್ಯಾರೋ ಮಾತನಾಡುವುದು ಸರಿಯಲ್ಲ. ನೀವು ಯಾರೊಂದಿಗಾದರೂ ಇದ್ದಾಗ ಆ ಸಂಬಂಧ ಕೊನೆಗೊಳ್ಳುತ್ತದೆ ಎಂದು ನೀವು ಊಹಿಸುವುದಿಲ್ಲ’ ಎಂದಿದ್ದಾರೆ ಕಾರ್ತಿಕ್ ಆರ್ಯನ್.

ಕಾರ್ತಿಕ್ ಆಡಿದ ಮಾತುಗಳು ಸಾಕಷ್ಟು ಅರ್ಥಗಳನ್ನು ಹೊಂದಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇವುಗಳು ನೇರವಾಗಿ ಸಾರಾ ಹಾಗೂ ಅನನ್ಯಾ ಅವರನ್ನು ಉದ್ದೇಶಿಸಿ ಹೇಳಿದ ಮಾತು ಎಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ: ‘ನೀನು ನನ್ನ ಹುಡುಗನನ್ನು ನೋಡಿದ್ರೆ ಹೊಡೆಯುತ್ತೇನೆ’; ಅನನ್ಯಾಗೆ ಬೆದರಿಕೆ ಹಾಕಿದ್ದ ಸಾರಾ ಅಲಿ ಖಾನ್​

ಕಾರ್ತಿಕ್ ಆರ್ಯನ್ ನಟನೆಯ ‘ಶೆಹಜಾದ’ ಹಾಗೂ ‘ಸತ್ಯಪ್ರೇಮ್​ ಕಿ ಕಥಾ’ ಈ ವರ್ಷ ರಿಲೀಸ್ ಆಯಿತು. ‘ಶೆಹಜಾದ’ ಸಿನಿಮಾ ಹೀನಾಯವಾಗಿ ಸೋತರೆ, ‘ಸತ್ಯಪ್ರೇಮ್ ಕಿ ಕಥಾ’ ಸಾಧಾರಣ ಹಿಟ್ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​