AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಾ ಅಲಿ ಖಾನ್ ಓಪನ್ ಟಾಕ್ ಬಗ್ಗೆ ಅಪ್ಸೆಟ್ ಆದ ಕಾರ್ತಿಕ್ ಆರ್ಯನ್?

ಕಾರ್ತಿಕ್ ಆಡಿದ ಮಾತುಗಳು ಸಾಕಷ್ಟು ಅರ್ಥಗಳನ್ನು ಹೊಂದಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇವುಗಳು ನೇರವಾಗಿ ಸಾರಾ ಹಾಗೂ ಅನನ್ಯಾ ಅವರನ್ನು ಉದ್ದೇಶಿಸಿ ಹೇಳಿದ ಮಾತು ಎಂದು ಕೂಡ ಹೇಳಲಾಗುತ್ತಿದೆ.

ಸಾರಾ ಅಲಿ ಖಾನ್ ಓಪನ್ ಟಾಕ್ ಬಗ್ಗೆ ಅಪ್ಸೆಟ್ ಆದ ಕಾರ್ತಿಕ್ ಆರ್ಯನ್?
ಸಾರಾ-ಕಾರ್ತಿಕ್
Follow us
ರಾಜೇಶ್ ದುಗ್ಗುಮನೆ
|

Updated on: Nov 23, 2023 | 10:29 AM

‘ಕಾಫಿ ವಿತ್ ಕರಣ್’ ಶೋನಲ್ಲಿ ಎದುರಾಗುವ ಬಹುತೇಕ ವಿಚಾರಗಳು ಕಾಂಟ್ರವರ್ಸಿ ಹುಟ್ಟುಹಾಕುತ್ತವೆ. ಲವ್​, ಅಫೇರ್ ಕುರಿತು ಹೆಚ್ಚಿನ ಪ್ರಶ್ನೆ ಕೇಳಲಾಗುತ್ತದೆ. ಬಂದ ಅತಿಥಿಗಳು ನೀಡುವ ಉತ್ತರ ಮತ್ತೊಬ್ಬರ ಬದುಕಿನ ಮೇಲೆ ಪ್ರಭಾವ ಬೀರುತ್ತವೆ. ಇತ್ತೀಚೆಗೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಹಾಗೂ ಅನನ್ಯಾ ಪಾಂಡೆ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ತಿಕ್ ಆರ್ಯನ್ ವಿಚಾರ ಚರ್ಚೆಗೆ ಬಂದಿದೆ. ಈ ಸಂದರ್ಭದಲ್ಲಿ ಅವರು ಆಡಿದ ಮಾತುಗಳಿಂದ ಕಾರ್ತಿಕ್ ಅಪ್ಸೆಟ್ ಆಗಿದ್ದಾರೆ.

ಕಾರ್ತಿಕ್ ಆರ್ಯನ್ ಜೊತೆ ಅನನ್ಯಾ ಹಾಗೂ ಸಾರಾ ಇಬ್ಬರೂ ಡೇಟ್ ಮಾಡಿದ್ದಾರೆ ಎನ್ನಲಾಗಿದೆ. ಕರಣ್ ಜೋಹರ್ ಈ ಬಗ್ಗೆ ಕೇಳಿದಾಗ ಸಾರಾ ಹಾಗೂ ಅನನ್ಯಾ ನೋ ಎಂದು ಹೇಳಿಲ್ಲ. ಇನ್ನು, ಎಕ್ಸ್ ಜೊತೆ ಫ್ರೆಂಡ್ ಆಗಿರುವುದು ಎಷ್ಟು ಕಷ್ಟ ಎಂಬುದನ್ನು ಸಾರಾ ವಿವರಿಸಿದ್ದರು. ಈ ಎಲ್ಲಾ ಮಾತುಗಳು ಕಾರ್ತಿಕ್ ಅವರ ಅಸಮಾಧಾನಕ್ಕೆ ಕಾರಣ ಆಗಿದೆ. ಅವರು ಸಂದರ್ಶನ ಒಂದರಲ್ಲಿ ಹೇಳಿದ ಮಾತು ಸಾರಾಗೆ ಹೇಳಿದ ರೀತಿಯಲ್ಲಿ ಇದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ನಾನು ನಂಬುವ ಒಂದು ವಿಚಾರ ಎಂದರೆ ರಿಲೇಶನ್​ಶಿಪ್ ಇಬ್ಬರ ಮಧ್ಯೆ ಇದ್ದಾಗ ಇನ್ನೊಬ್ಬ ವ್ಯಕ್ತಿ ಅದರ ಬಗ್ಗೆ ಮಾತನಾಡಬಾರದು. ನಾವೆಲ್ಲರೂ ನಮ್ಮ ಸಂಬಂಧಗಳನ್ನು ಗೌರವಿಸಬೇಕು. ನನ್ನ ಸಂಗಾತಿಯಿಂದ ನಾನು ನಿರೀಕ್ಷಿಸುವುದು ಅದನ್ನೇ. ರಿಲೇಶನ್​ಶಿಪ್​ ಬಗ್ಗೆ ಯಾರ್ಯಾರೋ ಮಾತನಾಡುವುದು ಸರಿಯಲ್ಲ. ನೀವು ಯಾರೊಂದಿಗಾದರೂ ಇದ್ದಾಗ ಆ ಸಂಬಂಧ ಕೊನೆಗೊಳ್ಳುತ್ತದೆ ಎಂದು ನೀವು ಊಹಿಸುವುದಿಲ್ಲ’ ಎಂದಿದ್ದಾರೆ ಕಾರ್ತಿಕ್ ಆರ್ಯನ್.

ಕಾರ್ತಿಕ್ ಆಡಿದ ಮಾತುಗಳು ಸಾಕಷ್ಟು ಅರ್ಥಗಳನ್ನು ಹೊಂದಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇವುಗಳು ನೇರವಾಗಿ ಸಾರಾ ಹಾಗೂ ಅನನ್ಯಾ ಅವರನ್ನು ಉದ್ದೇಶಿಸಿ ಹೇಳಿದ ಮಾತು ಎಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ: ‘ನೀನು ನನ್ನ ಹುಡುಗನನ್ನು ನೋಡಿದ್ರೆ ಹೊಡೆಯುತ್ತೇನೆ’; ಅನನ್ಯಾಗೆ ಬೆದರಿಕೆ ಹಾಕಿದ್ದ ಸಾರಾ ಅಲಿ ಖಾನ್​

ಕಾರ್ತಿಕ್ ಆರ್ಯನ್ ನಟನೆಯ ‘ಶೆಹಜಾದ’ ಹಾಗೂ ‘ಸತ್ಯಪ್ರೇಮ್​ ಕಿ ಕಥಾ’ ಈ ವರ್ಷ ರಿಲೀಸ್ ಆಯಿತು. ‘ಶೆಹಜಾದ’ ಸಿನಿಮಾ ಹೀನಾಯವಾಗಿ ಸೋತರೆ, ‘ಸತ್ಯಪ್ರೇಮ್ ಕಿ ಕಥಾ’ ಸಾಧಾರಣ ಹಿಟ್ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ