AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಖಾತೆಯಿಂದ ಫೋಟೋ ಕದ್ದು ಪೋಸ್ಟರ್ ಮಾಡಿದ ಕರಣ್; ಟ್ರೋಲ್ ಮೇಲೆ ಟ್ರೋಲ್

ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಅವರ 'ನಾಗ್‌ಜಿಲ್ಲಾ' ಚಿತ್ರದ ಪೋಸ್ಟರ್‌ ವೈರಲ್ ಆಗಿದೆ. ಇದರ ಜೊತೆ ಟ್ರೋಲ್​ಗೂ ಒಳಗಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್​ಗೆ ಭಾರೀ ಟೀಕೆಗಳು ವ್ಯಕ್ತವಾಗಿವೆ. ನೆಟ್ಟಿಗರು ಪೋಸ್ಟರ್ ಮತ್ತು ಇನ್‌ಸ್ಟಾಗ್ರಾಮ್ ಫೋಟೋ ನಡುವಿನ ಹೋಲಿಕೆಯನ್ನು ಗಮನಿಸಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಕಾರ್ತಿಕ್ ಖಾತೆಯಿಂದ ಫೋಟೋ ಕದ್ದು ಪೋಸ್ಟರ್ ಮಾಡಿದ ಕರಣ್; ಟ್ರೋಲ್ ಮೇಲೆ ಟ್ರೋಲ್
ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Apr 25, 2025 | 7:34 AM

Share

ಕಾರ್ತಿಕ್ ಆರ್ಯನ್​ ಅವರು ಇದೇ ಮೊದಲ ಬಾರಿಗೆ ಕರಣ್ ಜೋಹರ್ (Karan Johar) ನಿರ್ಮಾಣದ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದಾಗಲೇ ಕುತೂಹಲ ಹೆಚ್ಚಿತ್ತು. ಧರ್ಮ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಚಿತ್ರ ಹೊರ ಬರಲಿದೆ. ಈ ಸಿನಿಮಾಗೆ ‘ನಾಗ್​ಜಿಲ್ಲಾ’ ಎನ್ನುವ ಟೈಟಲ್ ಇಡಲಾಗಿದೆ. ಸಾಮಾನ್ಯ ವ್ಯಕ್ತಿ ಹಾವಾಗಿ ಬದಲಾಗುವ ರೀತಿಯಲ್ಲಿ ಪೋಸ್ಟರ್ ಮೂಡಿ ಬಂದಿದೆ. ಆದರೆ,  ಕಾರ್ತಿಕ್ ಆರ್ಯನ್ ಸಿನಿಮಾ ಪೋಸ್ಟರ್​ ನೋಡಿದ ಬಳಿಕ ಒಂದು ದೊಡ್ಡ ತಪ್ಪು ಕಾಣಿಸಿದೆ. ಇದನ್ನು ಅಭಿಮಾನಿಗಳು ಕಂಡು ಹಿಡಿದಿದ್ದಾರೆ.

ಸಾಮಾನ್ಯವಾಗಿ ಹೊಸ ಸಿನಿಮಾ ಘೋಷಣೆ ಮಾಡುವಾಗ ಪೋಸ್ಟರ್​ಗಾಗಿ ಫೋಟೋಶೂಟ್ ಮಾಡಿಸಲಾಗುತ್ತದೆ. ಇದಕ್ಕಾಗಿ ಸ್ವಲ್ಪ ಹಣ ಖರ್ಚಾಗುತ್ತದೆ. ಆದರೆ, ತಂಡದವರು ಇದನ್ನು ಉಳಿಸೋ ಪ್ಲ್ಯಾನ್ ಮಾಡಿದಂತಿದೆ. ಈ ಪೋಸ್ಟರ್ ಹಿಂದಿನ ಅಸಲಿ ಮರ್ಮವನ್ನು ನೆಟ್ಟಿಗರು ಬಿಚ್ಚಿಟ್ಟಿದ್ದಾರೆ. ಇದರಿಂದ ಧರ್ಮ ಸಂಸ್ಥೆಗೆ ಮುಜುಗರ ಆಗಿದೆ.

ಕಾರ್ತಿಕ್ ಆರ್ಯನ್ ಅವರ ‘ನಾಗ್​ಜಿಲ್ಲಾ’ ಸಿನಿಮಾ ಪೋಸ್ಟರ್ ನೋಡಿದವರಿಗೆ ಅವರು ಈ ಮೊದಲು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದ ಫೋಟೋ ನೆನಪಾಗಿದೆ. ಅವರು ಈ ಮೊದಲು ಮಾಡಿದ್ದ ಫೋಟೋ ಹಾಗೂ ಪೋಸ್ಟರ್ ಮಧ್ಯೆ ಸಾಕಷ್ಟು ಸಾಮ್ಯತೆ ಇದೆ. ಹೇರ್​ಸ್ಟೈಲ್​ನಿಂದ ಹಿಡಿದು ಎಲ್ಲವೂ ಬಹುತೇಕ ಹೋಲಿಕೆ ಇದೆ. ಎರಡೂ ಕಡೆಗಳಲ್ಲಿ ಕಾರ್ತಿಕ್ ಶರ್ಟ್ ಧರಿಸಿಲ್ಲ. ಹೀಗಾಗಿ, ಪೋಸ್ಟರ್ ಮಾಡಲು ಫೋಟೋಶೂಟ್ ಮಾಡೋದು ಬಿಟ್ಟು ಅವರದ್ದೇ ಖಾತೆಯ ಹಳೆಯ ಫೋಟೋಗಳನ್ನು ತೆಗದರೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್
Image
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
Image
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
Image
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

So dharma basically re used Kartik’s old Instagram post to make the official poster of their next movie 😂 kjo and his team really have stopped putting in efforts byu/NoProfessionn inBollyBlindsNGossip

ಈಗ ಜಗತ್ತು ವೇಗವಾಗಿದೆ. ಸೋಶಿಯಲ್ ಮೀಡಿಯಾ ಬಳಕೆ ಹೆಚ್ಚಿದೆ. ಹೀಗಾಗಿ, ಈ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ಬಂದೊದಗಿದೆ. ‘ಧರ್ಮ ಪ್ರೊಡಕ್ಷನ್ಸ್​ನವರು ಶ್ರಮ ಇಲ್ಲದೆ ಪೋಸ್ಟರ್ ಮಾಡಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಕಥೆ ಎಲ್ಲಿಂದ ಕದಿಯುವ ಆಲೋಚನೆಯಲ್ಲಿ ಇದ್ದೀರಿ’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಔಷಧ ತೆಗೆದುಕೊಂಡು ಸಣ್ಣ ಆಗಿದ್ದಾನೆ ಎಂದವರಿಗೆ ಪ್ರತ್ಯುತ್ತರ ಕೊಟ್ಟ ಕರಣ್ ಜೋಹರ್

ಕರಣ್ ಜೋಹರ್, ಮಹಾವೀರ್ ಜೈನ್, ಅದಾರ್ ಪೂನವಾಲ್ಲ, ಅಪೂರ್ವ ಮೆಹ್ತಾ, ಸುಜಿತ್ ಜೈನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ರಿಲೀಸ್ ದಿನಾಂಕ ಕೂಡ ಘೋಷಣೆ ಆಗಿದ್ದು, 2026ರ ಆಗಸ್ಟ್ 14ರಂದು ಚಿತ್ರ ತೆರೆಗೆ ಬರಲಿದೆ. ಅಂದುಕೊಂಡಂತೆ ನಡೆದರೆ ಮಾತ್ರ ಸಿನಿಮಾ ಈ ಡೇಟ್​ಗೆ ಬಿಡುಗಡೆ ಹೊಂದಲಿದೆ ಇಲ್ಲವಾದಲ್ಲಿ ಸಿನಿಮಾ ರಿಲೀಸ್ ಮತ್ತಷ್ಟು ವಿಳಂಬ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Fri, 25 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!