AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kartik Aryan: ಕಾರ್ತಿಕ್ ಆರ್ಯನ್​​ಗೆ ‘ರಿಪ್ಲೇಸಿಂಗ್ ಸ್ಟಾರ್​’ ಪಟ್ಟ; ಪ್ರತಿಕ್ರಿಯಿಸಿದ ಸ್ಟಾರ್ ಹೀರೋ

ಕಾರ್ತಿಕ್ ಆರ್ಯನ್ ಅವರ ನಟನೆಯ ‘ಭೂಲ್​ ಭುಲಯ್ಯ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ವರ್ಷ ಬಾಲಿವುಡ್​ನಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿದ ಬೆರಳೆಣಿಕೆ ಸಿನಿಮಾಗಳ ಪೈಕಿ ಇದು ಕೂಡ ಒಂದು. ಇದು ಕಾರ್ತಿಕ್​ ಪಾಲಿಗೆ ತುಂಬಾನೇ ವಿಶೇಷ.

Kartik Aryan: ಕಾರ್ತಿಕ್ ಆರ್ಯನ್​​ಗೆ ‘ರಿಪ್ಲೇಸಿಂಗ್ ಸ್ಟಾರ್​’ ಪಟ್ಟ; ಪ್ರತಿಕ್ರಿಯಿಸಿದ ಸ್ಟಾರ್ ಹೀರೋ
ಕಾರ್ತಿಕ್ ಆರ್ಯನ್
TV9 Web
| Edited By: |

Updated on: Nov 28, 2022 | 7:37 AM

Share

ನಟ ಕಾರ್ತಿಕ್ ಆರ್ಯನ್ (Kartik Aryan) ಅವರು ಯಾವುದೇ ಗಾಡ್​ ಫಾದರ್ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಅವರು ಈಗ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ನೀಡಿ ಬಾಲಿವುಡ್​ನಲ್ಲಿ(Bollywood)  ಭದ್ರವಾಗಿ ನೆಲೆಯೂರಿದ್ದಾರೆ. ಬಾಲಿವುಡ್​ನ ಪ್ರಭಾವಿ ಗ್ಯಾಂಗ್ ಕಾರ್ತಿಕ್ ಆರ್ಯನ್ ಅವರನ್ನು ಮಟ್ಟ ಹಾಕಲು ಪ್ಲ್ಯಾನ್ ರೂಪಿಸಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಆ ರೀತಿ ಆಗಿಲ್ಲ. ಕಾರ್ತಿಕ್ ಆರ್ಯನ್ ಅವರು ದಿನಕಳೆದಂತೆ ಮತ್ತಷ್ಟು ಶೈನ್ ಆಗುತ್ತಿದ್ದಾರೆ. ಕೆಲವರು ಅವರನ್ನು ‘ರಿಪ್ಲೇಸಿಂಗ್ ಸ್ಟಾರ್​’ ಎಂದು ಕರೆದಿದ್ದಾರೆ.

ಕಾರ್ತಿಕ್ ಆರ್ಯನ್ ಅವರ ನಟನೆಯ ‘ಭೂಲ್​ ಭುಲಯ್ಯ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ವರ್ಷ ಬಾಲಿವುಡ್​ನಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿದ ಬೆರಳೆಣಿಕೆ ಸಿನಿಮಾಗಳ ಪೈಕಿ ಇದು ಕೂಡ ಒಂದು. ಇದು ಕಾರ್ತಿಕ್​ ಪಾಲಿಗೆ ತುಂಬಾನೇ ವಿಶೇಷ. ‘ಭೂಲ್​ ಭುಲಯ್ಯ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ನಟಿಸಿದ್ದರು. ‘ಭೂಲ್ ಭುಲಯ್ಯ 2’ ಚಿತ್ರದಲ್ಲಿ ಅಕ್ಷಯ್ ಜಾಗವನ್ನು ಕಾರ್ತಿಕ್ ಆರ್ಯನ್ ತುಂಬಿದ್ದರು. ‘ಹೇರಾ ಫೇರಿ 3’ ಚಿತ್ರದಲ್ಲಿ ಅಕ್ಷಯ್ ಬದಲು ಕಾರ್ತಿಕ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಕಾರ್ತಿಕ್ ಆರ್ಯನ್ ಬಗ್ಗೆ ಸಾಕಷ್ಟು ಮೀಮ್​ಗಳು ಹರಿದಾಡುತ್ತಿವೆ. ಅವರು ರಿಪ್ಲೇಸಿಂಗ್ ಸ್ಟಾರ್ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ‘ಮಿಷನ್ ಇಂಪಾಸಿಬಲ್​’ ಚಿತ್ರದಲ್ಲಿ ಟಾಮ್ ಕ್ರೂಸ್ ಅವರ ಬದಲಿಗೆ ಕಾರ್ತಿಕ್ ಆರ್ಯನ್ ನಟಿಸಬಹುದು ಎನ್ನುವ ಮೀಮ್ ಇದೆ. ಈ ವಿಚಾರಕ್ಕೆ ಕಾರ್ತಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಅವರಿಗೆ ಈ ವಿಚಾರದಲ್ಲಿ ಬೇಸರ ಇಲ್ಲವಂತೆ.

ಇದನ್ನೂ ಓದಿ
Image
150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
Image
ಮೂರೇ ದಿನಕ್ಕೆ ಅರ್ಧಶತಕ ಬಾರಿಸಿದ ಕಾರ್ತಿಕ್ ಆರ್ಯನ್ ಸಿನಿಮಾ; ಬಾಲಿವುಡ್​ಗೆ ಸಿಕ್ತು ಹೊಸ ಬೂಸ್ಟ್​
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಇದನ್ನೂ ಓದಿ: ‘ಭೂಲ್ ಭುಲಯ್ಯ 2’ ಚಿತ್ರ ಗೆಲ್ಲಿಸಿದ ಕಾರ್ತಿಕ್ ಆರ್ಯನ್​ಗೆ ನಾಲ್ಕು ಕೋಟಿ ರೂಪಾಯಿ ಕಾರ್ ಗಿಫ್ಟ್​

‘ಹಲವರು ನನಗೆ ಅದನ್ನು (ಮೀಮ್) ಕಳುಹಿಸಿದ್ದರು. ನನಗೆ ಅದು ಫನ್ನಿ ಅನಿಸಿತು. ನಾನು ಅದನ್ನು ಎಂಜಾಯ್ ಮಾಡಿದೆ. ನಿರ್ಲಕ್ಷ್ಯಕ್ಕೆ ಒಳಗಾಗುವುದಕ್ಕಿಂತ ಇದು ಉತ್ತಮ. ನಾನು ಯಾವಾಗಲೂ ನಿರ್ಲಕ್ಷ್ಯಕ್ಕೆ ಒಳಗಾದೆ. ಆ ಬಗ್ಗೆ ನನಗೆ ಭಯ ಇತ್ತು. ಆದರೆ, ಈಗ ಅದು ಕಷ್ಟ. ನಾನು ಖುಷಿಯಿಂದ ಇದ್ದೇನೆ. ಆ ಭಯ ಇನ್ನೆಂದಿಗೂ ಬರುವುದಿಲ್ಲ. ಹಲವು ಘಟನೆಗಳು ನನ್ನ ಜೀವನದಲ್ಲಿ ನಡೆಯುತ್ತಿವೆ’ ಎಂದು ಖುಷಿ ವ್ಯಕ್ತಪಡಿಸಿದ್ದಾರೆ ಕಾರ್ತಿಕ್.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು