AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಆರ್ಯನ್​ಗೆ ಶಾಕ್; ‘ಶಹಜಾದ’ ಚಿತ್ರಕ್ಕೆ ಮುಳುವಾದ ‘ಅಲ ವೈಕುಂಠಪುರಮುಲೋ’

ತೆಲುಗಿನಲ್ಲಿ ತ್ರಿವಿಕ್ರಂ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳಿದ್ದ ಈ ಚಿತ್ರಕ್ಕೆ ಹಿಂದಿಯಲ್ಲಿ ರೋಹಿತ್ ಧವನ್ ನಿರ್ದೇಶನ ಮಾಡಿದ್ದಾರೆ. ಈಗ ‘ಶಹಜಾದಾ’ ಚಿತ್ರಕ್ಕೆ ಹಿನ್ನಡೆ ಆಗಿದೆ.

ಕಾರ್ತಿಕ್ ಆರ್ಯನ್​ಗೆ ಶಾಕ್; ‘ಶಹಜಾದ’ ಚಿತ್ರಕ್ಕೆ ಮುಳುವಾದ ‘ಅಲ ವೈಕುಂಠಪುರಮುಲೋ’
ಕಾರ್ತಿಕ್ ಆರ್ಯನ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Feb 01, 2023 | 7:19 AM

Share

ಇತ್ತೀಚೆಗೆ ಬಾಲಿವುಡ್ ಮಂದಿ ದಕ್ಷಿಣ ಭಾರತದ ಚಿತ್ರಗಳನ್ನು ರಿಮೇಕ್ ಮಾಡಿ ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ‘ದೃಶ್ಯಂ’ ಸೇರಿ ಹಲವು ಚಿತ್ರಗಳು ಹಿಂದಿಗೆ ರಿಮೇಕ್ ಆಗಿವೆ. ಈಗ ಅಲ್ಲು ಅರ್ಜುನ್ (Allu Arjun) ನಟನೆಯ ‘ಅಲ ವೈಕುಂಠಪುರಮುಲೋ’ ಸಿನಿಮಾ ‘ಶಹಜಾದ’ (Shehzada Movie) ಆಗಿ ಹಿಂದಿಗೆ ರಿಮೇಕ್ ಆಗಿದೆ. ಈ ಚಿತ್ರ ಫೆಬ್ರವರಿ 17ಕ್ಕೆ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲೇ ಕಾರ್ತಿಕ್ ಆರ್ಯನ್ ನಟನೆಯ ಈ ಚಿತ್ರಕ್ಕೆ ಶಾಕ್ ಸಿಕ್ಕಿದೆ. ಅದೂ ‘ಅಲ ವೈಕುಂಠಪುರಮುಲೋ’ ಸಿನಿಮಾದಿಂದಲೇ ಅನ್ನೋದು ವಿಚಿತ್ರ.

ಅಲ್ಲು ಅರ್ಜುನ್ ನಟನೆಯ ‘ಅಲ ವೈಕುಂಠಪುರಮುಲೋ’ ಸಿನಿಮಾ 100 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡಿತು. ಈ ಚಿತ್ರ 280 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತು. ಇದನ್ನು ನೋಡಿ ಮೆಚ್ಚಿಕೊಂಡಿರುವ ಹಿಂದಿ ಮಂದಿ ರಿಮೇಕ್ ಮಾಡಿದ್ದಾರೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ. ತೆಲುಗಿನಲ್ಲಿ ತ್ರಿವಿಕ್ರಂ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳಿದ್ದ ಈ ಚಿತ್ರಕ್ಕೆ ಹಿಂದಿಯಲ್ಲಿ ರೋಹಿತ್ ಧವನ್ ನಿರ್ದೇಶನ ಮಾಡಿದ್ದಾರೆ. ಈಗ ‘ಶಹಜಾದಾ’ ಚಿತ್ರಕ್ಕೆ ಹಿನ್ನಡೆ ಆಗಿದೆ.

‘ಶಹಜಾದಾ’ ರಿಲೀಸ್​ಗೂ ಮೊದಲೇ ‘ಅಲ ವೈಕುಂಠಪುರಮುಲೋ’ ಹಿಂದಿಗೆ ಡಬ್ಬಾದ ವರ್ಷನ್ ಯೂಟ್ಯೂಬ್​ನಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರದ ಹಿಂದಿ ಹಕ್ಕನ್ನು ಗೋಲ್ಡ್​ಮೈನ್​ ಕಂಪನಿಯವರು ತೆಗೆದುಕೊಂಡಿದ್ದರು. ಅವರು ಇದನ್ನು ಯೂಟ್ಯೂಬ್​​ನಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಇದು ಕಾರ್ತಿಕ್ ಆರ್ಯನ್ ಚಿತ್ರಕ್ಕೆ ಹಿನ್ನಡೆ ಆಗಿದೆ.

ಇದನ್ನೂ ಓದಿ
Image
150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
Image
ಮೂರೇ ದಿನಕ್ಕೆ ಅರ್ಧಶತಕ ಬಾರಿಸಿದ ಕಾರ್ತಿಕ್ ಆರ್ಯನ್ ಸಿನಿಮಾ; ಬಾಲಿವುಡ್​ಗೆ ಸಿಕ್ತು ಹೊಸ ಬೂಸ್ಟ್​
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

‘ಪುಷ್ಪ’ ಚಿತ್ರದಿಂದ ಅಲ್ಲು ಅರ್ಜುನ್ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ‘ಪುಷ್ಪ 2’ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಒಳ್ಳೆಯ ಕಮಾಯಿ ಮಾಡಿದೆ. ಹೀಗಾಗಿ, ‘ಅಲ ವೈಕುಂಠಪುರಮುಲೋ’ ಸಿನಿಮಾದ ಹಿಂದಿ ವರ್ಷನ್​ಗೆ ಹೆಚ್ಚು ವೀಕ್ಷಣೆ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಶಾಹಿದ್ ಕಪೂರ್ ಮನೆಯಲ್ಲಿ ಕಾರ್ತಿಕ್ ಆರ್ಯನ್ ವಾಸ; ತಿಂಗಳಿಗೆ ನೀಡಬೇಕು 7.5 ಲಕ್ಷ ರೂ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದಾ’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ‘ಪಠಾಣ್​’ ಸಿನಿಮಾ ಅಬ್ಬರಿಸುತ್ತಿರುವುದರಿಂದ ಈ ಚಿತ್ರದ ರಿಲೀಸ್ ದಿನಾಂಕ ಒಂದು ವಾರ ಮುಂದೂಡಲ್ಪಟ್ಟಿತ್ತು. ಹೀಗಿರುವಾಗಲೇ ಈಗ ಈ ಚಿತ್ರಕ್ಕೆ ಮತ್ತೊಂದು ಹಿನ್ನಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್