AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಆರ್ಯನ್​ಗೆ ಶಾಕ್; ‘ಶಹಜಾದ’ ಚಿತ್ರಕ್ಕೆ ಮುಳುವಾದ ‘ಅಲ ವೈಕುಂಠಪುರಮುಲೋ’

ತೆಲುಗಿನಲ್ಲಿ ತ್ರಿವಿಕ್ರಂ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳಿದ್ದ ಈ ಚಿತ್ರಕ್ಕೆ ಹಿಂದಿಯಲ್ಲಿ ರೋಹಿತ್ ಧವನ್ ನಿರ್ದೇಶನ ಮಾಡಿದ್ದಾರೆ. ಈಗ ‘ಶಹಜಾದಾ’ ಚಿತ್ರಕ್ಕೆ ಹಿನ್ನಡೆ ಆಗಿದೆ.

ಕಾರ್ತಿಕ್ ಆರ್ಯನ್​ಗೆ ಶಾಕ್; ‘ಶಹಜಾದ’ ಚಿತ್ರಕ್ಕೆ ಮುಳುವಾದ ‘ಅಲ ವೈಕುಂಠಪುರಮುಲೋ’
ಕಾರ್ತಿಕ್ ಆರ್ಯನ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Feb 01, 2023 | 7:19 AM

Share

ಇತ್ತೀಚೆಗೆ ಬಾಲಿವುಡ್ ಮಂದಿ ದಕ್ಷಿಣ ಭಾರತದ ಚಿತ್ರಗಳನ್ನು ರಿಮೇಕ್ ಮಾಡಿ ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ‘ದೃಶ್ಯಂ’ ಸೇರಿ ಹಲವು ಚಿತ್ರಗಳು ಹಿಂದಿಗೆ ರಿಮೇಕ್ ಆಗಿವೆ. ಈಗ ಅಲ್ಲು ಅರ್ಜುನ್ (Allu Arjun) ನಟನೆಯ ‘ಅಲ ವೈಕುಂಠಪುರಮುಲೋ’ ಸಿನಿಮಾ ‘ಶಹಜಾದ’ (Shehzada Movie) ಆಗಿ ಹಿಂದಿಗೆ ರಿಮೇಕ್ ಆಗಿದೆ. ಈ ಚಿತ್ರ ಫೆಬ್ರವರಿ 17ಕ್ಕೆ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲೇ ಕಾರ್ತಿಕ್ ಆರ್ಯನ್ ನಟನೆಯ ಈ ಚಿತ್ರಕ್ಕೆ ಶಾಕ್ ಸಿಕ್ಕಿದೆ. ಅದೂ ‘ಅಲ ವೈಕುಂಠಪುರಮುಲೋ’ ಸಿನಿಮಾದಿಂದಲೇ ಅನ್ನೋದು ವಿಚಿತ್ರ.

ಅಲ್ಲು ಅರ್ಜುನ್ ನಟನೆಯ ‘ಅಲ ವೈಕುಂಠಪುರಮುಲೋ’ ಸಿನಿಮಾ 100 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡಿತು. ಈ ಚಿತ್ರ 280 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತು. ಇದನ್ನು ನೋಡಿ ಮೆಚ್ಚಿಕೊಂಡಿರುವ ಹಿಂದಿ ಮಂದಿ ರಿಮೇಕ್ ಮಾಡಿದ್ದಾರೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ. ತೆಲುಗಿನಲ್ಲಿ ತ್ರಿವಿಕ್ರಂ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳಿದ್ದ ಈ ಚಿತ್ರಕ್ಕೆ ಹಿಂದಿಯಲ್ಲಿ ರೋಹಿತ್ ಧವನ್ ನಿರ್ದೇಶನ ಮಾಡಿದ್ದಾರೆ. ಈಗ ‘ಶಹಜಾದಾ’ ಚಿತ್ರಕ್ಕೆ ಹಿನ್ನಡೆ ಆಗಿದೆ.

‘ಶಹಜಾದಾ’ ರಿಲೀಸ್​ಗೂ ಮೊದಲೇ ‘ಅಲ ವೈಕುಂಠಪುರಮುಲೋ’ ಹಿಂದಿಗೆ ಡಬ್ಬಾದ ವರ್ಷನ್ ಯೂಟ್ಯೂಬ್​ನಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರದ ಹಿಂದಿ ಹಕ್ಕನ್ನು ಗೋಲ್ಡ್​ಮೈನ್​ ಕಂಪನಿಯವರು ತೆಗೆದುಕೊಂಡಿದ್ದರು. ಅವರು ಇದನ್ನು ಯೂಟ್ಯೂಬ್​​ನಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಇದು ಕಾರ್ತಿಕ್ ಆರ್ಯನ್ ಚಿತ್ರಕ್ಕೆ ಹಿನ್ನಡೆ ಆಗಿದೆ.

ಇದನ್ನೂ ಓದಿ
Image
150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
Image
ಮೂರೇ ದಿನಕ್ಕೆ ಅರ್ಧಶತಕ ಬಾರಿಸಿದ ಕಾರ್ತಿಕ್ ಆರ್ಯನ್ ಸಿನಿಮಾ; ಬಾಲಿವುಡ್​ಗೆ ಸಿಕ್ತು ಹೊಸ ಬೂಸ್ಟ್​
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

‘ಪುಷ್ಪ’ ಚಿತ್ರದಿಂದ ಅಲ್ಲು ಅರ್ಜುನ್ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ‘ಪುಷ್ಪ 2’ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಒಳ್ಳೆಯ ಕಮಾಯಿ ಮಾಡಿದೆ. ಹೀಗಾಗಿ, ‘ಅಲ ವೈಕುಂಠಪುರಮುಲೋ’ ಸಿನಿಮಾದ ಹಿಂದಿ ವರ್ಷನ್​ಗೆ ಹೆಚ್ಚು ವೀಕ್ಷಣೆ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಶಾಹಿದ್ ಕಪೂರ್ ಮನೆಯಲ್ಲಿ ಕಾರ್ತಿಕ್ ಆರ್ಯನ್ ವಾಸ; ತಿಂಗಳಿಗೆ ನೀಡಬೇಕು 7.5 ಲಕ್ಷ ರೂ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದಾ’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ‘ಪಠಾಣ್​’ ಸಿನಿಮಾ ಅಬ್ಬರಿಸುತ್ತಿರುವುದರಿಂದ ಈ ಚಿತ್ರದ ರಿಲೀಸ್ ದಿನಾಂಕ ಒಂದು ವಾರ ಮುಂದೂಡಲ್ಪಟ್ಟಿತ್ತು. ಹೀಗಿರುವಾಗಲೇ ಈಗ ಈ ಚಿತ್ರಕ್ಕೆ ಮತ್ತೊಂದು ಹಿನ್ನಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಡಿಕೆ ಶಿವಕುಮಾರ್
‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಡಿಕೆ ಶಿವಕುಮಾರ್