AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ಗೆ ಕೊಲೆ ಬೆದರಿಕೆ; ಕೇಸ್​ ದಾಖಲಿಸಿ ತನಿಖೆ ಆರಂಭಿಸಿದ ಮುಂಬೈ ಪೊಲೀಸರು

Vicky Kaushal | Death Threat: ಹಾಯಾಗಿ ಸಂಸಾರ ಮಾಡುತ್ತಿರುವ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರಿಗೆ ಈಗ ಆತಂಕ ಎದುರಾಗಿದೆ. ಈ ದಂಪತಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ಗೆ ಕೊಲೆ ಬೆದರಿಕೆ; ಕೇಸ್​ ದಾಖಲಿಸಿ ತನಿಖೆ ಆರಂಭಿಸಿದ ಮುಂಬೈ ಪೊಲೀಸರು
ಕತ್ರಿನಾ ಕೈಫ್, ವಿಕ್ಕಿ ಕೌಶಲ್
TV9 Web
| Edited By: |

Updated on:Jul 25, 2022 | 12:46 PM

Share

ಹಿಂದಿ ಚಿತ್ರರಂಗದ ಕ್ಯೂಟ್​ ಜೋಡಿ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ (Vicky Kaushal) ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆಯೊಡ್ಡಿದ್ದು, ಈ ಕುರಿತು ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸ್​ ದಾಖಲಿಸಿ, ತನಿಖೆ ಶುರುಮಾಡಲಾಗಿದೆ. ಕೊಲೆ ಬೆದರಿಕೆಯ ಸುದ್ದಿ ಕೇಳಿ ಕತ್ರಿನಾ ಕೈಫ್​ (Katrina Kaif) ಹಾಗೂ ವಿಕ್ಕಿ ಕೌಶಲ್​ ಅಭಿಮಾನಿಗಳಿಗೆ ಆತಂಕ ಆಗಿದೆ. ಅಲ್ಲದೇ, ಅವರ ಕುಟುಂಬದವರಿಗೆ ಚಿಂತೆ ಶುರುವಾಗಿದೆ. ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ನಂತರ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕುವ ಪ್ರಕರಣ ಹೆಚ್ಚುತ್ತಿದೆ. ಇತೀಚೆಗೆ ನಟ ಸಲ್ಮಾನ್​ ಖಾನ್​, ನಟಿ ಸ್ವರಾ ಭಾಸ್ಕರ್​ ಮುಂತಾದವರಿಗೆ ಕೊಲೆ ಬೆದರಿಕೆ (Death Threat) ಹಾಕಿದ್ದು ಬೆಳಕಿಗೆ ಬಂದಿತ್ತು.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುವ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ಕತ್ರಿನಾ ಕೈಫ್​ ಕೂಡ ಇನ್​ಸ್ಟಾಗ್ರಾಮ್​ನಲ್ಲಿ ಸಕ್ರಿಯರಾಗಿರುತ್ತಾರೆ. ಕಿಡಿಗೇಡಿಗಳು ಇನ್​ಸ್ಟಾಗ್ರಾಮ್​ ಮೂಲಕವೇ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಆರೋಪಿಯು ಹಲವು ದಿನಗಳಿಂದ ಕತ್ರಿನಾ ಕೈಫ್​ ಅವರನ್ನು ಫಾಲೋ ಮಾಡುತ್ತಿದ್ದಾನೆ ಎಂದು ಕೂಡ ಪೊಲೀಸರು ಹೇಳಿದ್ದಾರೆ. ಯಾವ ಕಾರಣಕ್ಕಾಗಿ ಈ ದಂಪತಿಯನ್ನು ಟಾರ್ಗೆಟ್​ ಮಾಡಲಾಗಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಪರಸ್ಪರ ಪ್ರೀತಿಸುತ್ತಿದ್ದ ವಿಚಾರವನ್ನು ಬಹಳ ದಿನಗಳವರೆಗೆ ಮುಚ್ಚಿಟ್ಟಿದ್ದರು. 2021ರ ಡಿಸೆಂಬರ್​ನಲ್ಲಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈ ನಡುವೆ ಕೊಲೆ ಬೆದರಿಕೆಯ ಬಂದಿರುವುದು ಆತಂಕಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ
Image
‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ
Image
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಈ ಘಟನೆ ಬಗ್ಗೆ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಅವರ ಹಿಂದೆ ಬಿದ್ದಿರುವ ಅಪರಿಚಿತ ವ್ಯಕ್ತಿಗಳು ಯಾರು? ಸಿಧು ಮೂಸೆ ವಾಲಾ ಹಂತಕರಿಗೂ ಈ ಪ್ರಕರಣಕ್ಕೂ ಏನಾದರೂ ಸಂಬಂಧ ಇದೆಯಾ ಎಂಬ ಪ್ರಶ್ನೆ ಮೂಡಿದೆ. ತನಿಖೆ ಬಳಿಕ ಇದಕ್ಕೆ ಉತ್ತರ ಸಿಗಲಿದೆ. ಕೂಡಲೇ ಈ ದಂಪತಿಗೆ ಮುಂಬೈ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ.

Published On - 12:33 pm, Mon, 25 July 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ