AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು: ರಾಜಸ್ಥಾನ ತೆರಳಿದ ಬಾಲಿವುಡ್​ ಜೋಡಿ ಕತ್ರಿನಾ -ವಿಕ್ಕಿ ಕೌಶಲ್​

Katrina Kaif - Vicky Kaushal Wedding: ಮದುವೆಯ ಪೂರ್ವ ತಯಾರಿಯಾಗಿ ಇಂದು ಮೆಹಂದಿ ಕಾರ್ಯಕ್ರಮಗಳು ನಡೆಯಲಿದೆ. ಬಾಲಿವುಡ್​ ಕ್ಯೂಟ್ ಜೋಡಿಯ ವಿವಾಹಕ್ಕೆ 120 ಜನರನ್ನು ಮಾತ್ರ ಆಹ್ವಾನಿಸಲಾಗಿದೆ. ಕರಣ್​ ಜೋಹರ್, ನೇಹಾ ದೂಪಿಯಾ, ಸಲ್ಮಾನ್ ಖಾನ್​ ಸೇರಿದಂತೆ ಒಟ್ಟು 120 ಮಂದಿಗೆ ಮಾತ್ರ ಮದುವೆಯಲ್ಲಿ ಭಾಗವಹಿಸಲು ಆಮಂತ್ರಿಸಲಾಗಿದೆ.

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು: ರಾಜಸ್ಥಾನ ತೆರಳಿದ ಬಾಲಿವುಡ್​ ಜೋಡಿ ಕತ್ರಿನಾ -ವಿಕ್ಕಿ ಕೌಶಲ್​
ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​
TV9 Web
| Edited By: |

Updated on:Dec 07, 2021 | 1:21 PM

Share

ಮುಂಬೈ:ಸಪ್ತತುದಿ ತುಳಿಯಲು ಸಿದ್ಧವಾಗಿರುವ ಬಾಲಿವುಡ್​ ನಟಿ ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ರಾಜಸ್ಥಾನಕ್ಕೆ ತೆರಳಿದ್ದಾರೆ. ಮುಂಬೈ ಏರ್ಪೋಟ್​ನಿಂದ ಹೆಲಿಕಾಪ್ಟರ್​ ಮೂಲಕ ನಿನ್ನೆ ರಾತ್ರಿ ಕತ್ರಿನಾ ಹಾಗೂ ವಿಕ್ಕಿಕೌಶಲ್​ ಕುಟುಂಬದೊಂದಿಗೆ ತೆರಳಿದ್ದಾರೆ. ಕತ್ರಿನಾ ನಿನ್ನೆ ವಿಮಾನ ನಿಲ್ದಾಣದಲ್ಲಿ ಹಳದಿ ಬಣ್ಣದ ಶರಾರಾ ಉಡುಗೆಯಲ್ಲಿ ಸಖತ್​ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ಯಾಷನ್​ ಡಿಸೈನರ್ ಅನಾಮಿಕ ಖನ್ನಾ ಅವರು ತಯಾರಿಸಿದ  ಉಡುಗೆಯಲ್ಲಿ ಕತ್ರಿನಾ ನಿನ್ನೆ ಕಾಣಿಸಿಕೊಂಡಿದ್ದರು. ರಾಜಸ್ಥಾನದ ಜೈಪುರ ಬಳಿಯ ಸವಾಯಿ ಮಾಧೋಪುರದಲ್ಲಿರುವ ಸಿಕ್ಸ್ ಸೆನ್ಸಸ್​ ಪೋರ್ಟ್ ಖಾಸಗಿ ಹೋಟೆಲ್​ನಲ್ಲಿ ಬಾಲಿವುಡ್​ನ ಕ್ಯೂಟ್​ ಗರ್ಲ್ ಕತ್ರಿನಾ ಹಾಗೂ ಹ್ಯಾಂಡಸಮ್​ ಬಾಯ್​ ವಿಕ್ಕಿ ಕೌಶಲ್​ ಮದುವೆ ಡಿ.9ರಂದು ನಡೆಯಲಿದೆ. ಇದಕ್ಕಾಗಿ ರಾಜಸ್ಥಾನ ದಲ್ಲಿ ಅದ್ದೂರಿಯಾಗಿ ತಯಾರಿ ನಡೆಯುತ್ತಿದೆ.

ಮದುವೆಯ ಪೂರ್ವ ತಯಾರಿಯಾಗಿ ಇಂದು ಮೆಹಂದಿ ಹಾಗೂ ಅರಿಶಿನ ಕಾರ್ಯಕ್ರಮಗಳು ನಡೆಯಲಿದೆ. ಬಾಲಿವುಡ್​ ಕ್ಯೂಟ್ ಜೋಡಿಯ ವಿವಾಹಕ್ಕೆ 120 ಜನರನ್ನು ಮಾತ್ರ ಆಹ್ವಾನಿಸಲಾಗಿದೆ. ಕರಣ್​ ಜೋಹರ್, ನೇಹಾ ದೂಪಿಯಾ, ಸಲ್ಮಾನ್ ಖಾನ್​ ಸೇರಿದಂತೆ ಒಟ್ಟು 120 ಮಂದಿಗೆ ಮಾತ್ರ ಮದುವೆಯಲ್ಲಿ ಭಾಗವಹಿಸಲು ಆಮಂತ್ರಿಸಲಾಗಿದೆ.

ಹಲವು ದಿನಗಳ ಕಾಲ ಕತ್ರಿನಾ ಹಾಗೂ ವಿಕ್ಕಿ ಕೌಶಲ್​ ನಡುವಿನ ಸಂಬಂಧಗಳ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಗುಸುಗುಸು ಆರಂಭವಾಗಿತ್ತು. ಇದರ ನಡುವೆಯೇ ತಾವು ಪ್ರೀತಿಸಿರುವುದು ನಿಜ ಎಂದು ಹೇಳಿಕೊಂಡಿದ್ದರು. ಎಂದು ಕತ್ರಿನಾ ಹಾಗೂ ವಿಕ್ಕಿ ಕೌಶಲ್​ ಘೊಷಿಸಿ, ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದರು. ಇದೀಗ ಡಿ.9ರಂದು ಹಸೆಮಣೆ ಏರಲಿರುವ ಕತ್ರಿನಾ ಹಾಗೂ ವಿಕ್ಕಿಕೌಶಲ್​ ಮದುವೆ ತಯಾರಿ ಭರದಿಂದಲೇ ಸಾಗಿದೆ.

ಇಂದು ಮೆಹಂದಿ ಕಾರ್ಯಕ್ರಮದ ಬಳಿಕ ಸಂಗೀತ ಕಾರ್ಯಕ್ರಮ ಇರಲಿದ್ದು, ಕಾಲಾ ಚಶ್ಮಾ ಹಾಡಿಗೆ ಹಸಮಣೆ ಏರಲಿರುವ ಜೋಡಿ ಹೆಜ್ಜೆ ಹಾಕಲಿದ್ದಾರೆ. ವಿಕ್ಕಿ ಕತ್ರಿನಾ ಮದುವೆಗೆ ಇಟಲಿಯಿಂದ 5 ಹಂತದ ಕೇಕ್​ ತರಿಸಲಾಗಿದೆ. ಇಟಲಿಯ ಬಾಣಸಿಗರು ವಿಶೇಷವಾಗಿ ತಯಾರಿಸಿದ ನೀಲಿ ಮತ್ತು ಬಿಳಿ ಬಣ್ಣದ ಟಿಫಾನಿ ವೆಡ್ಡಿಂಗ್​ ಕೇಕ್​ ಅನ್ನು ವಿಕ್ಕಿ ಹಾಗೂ ಕತ್ರಿನಾ ಕತ್ತರಿಸಲಿದ್ದಾರೆ ಎಂದು ತಿಳಿದುಬಂದಿದೆ. ಮದುವೆಗೆ ಆಗಮಿಸುತ್ತಿರುವವರಿಗೆ ಕೋವಿಡ್​ ವ್ಯಾಕ್ಸಿನ್​ ಕಡ್ಡಾಯವಾಗಿದ್ದು, ಆರ್​ ಟಿ ಪಿಸಿಆರ್​ ನೆಗೆಟಿವ್​ ವರದಿ ತೆಗೆದುಕೊಂಡು ಬರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

ಹಣ ದ್ವಿಗುಣಗೊಳಿಸಿ ಕೊಡುವುದಾಗಿ ವಂಚನೆ! ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು

ಕತ್ರೀನಾ- ವಿಕ್ಕಿ ಕೌಶಲ್​ಗೆ ಒಟಿಟಿಯಿಂದ 100 ಕೋಟಿ ರೂಪಾಯಿಯ ಆಫರ್​; ಏಕೆ ಗೊತ್ತಾ?

Published On - 11:17 am, Tue, 7 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?