AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?

Katrina Kaif | Vicky Kaushal: ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಮದುವೆಗೆ ಈಗಾಗಲೇ ರಾಜಸ್ಥಾನದಲ್ಲಿ ತಯಾರಿ ನಡೆಯುತ್ತಿದೆ. ಹಾಗಿದ್ದರೂ ಕೂಡ ವಿಕ್ಕಿ ​ ಮತ್ತು ಕತ್ರಿನಾ ಕುಟುಂಬದವರು ಗುಟ್ಟು ಬಿಟ್ಟು ಕೊಡುತ್ತಿಲ್ಲ.

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?
ವಿಕ್ಕಿ ಕೌಶಲ್, ಕತ್ರಿನಾ ಕೈಫ್
TV9 Web
| Updated By: ಮದನ್​ ಕುಮಾರ್​|

Updated on: Nov 13, 2021 | 9:27 AM

Share

ಬಾಲಿವುಡ್​ ಕಲಾವಿದರಾದ ವಿಕ್ಕಿ ಕೌಶಲ್​ (Vicky Kaushal) ಮತ್ತು ಕತ್ರಿನಾ ಕೈಫ್ (Katrina Kaif)​ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಕೇಳಿಬರುತ್ತಲೇ ಇದೆ. ಈಗ ಈ ಜೋಡಿ ತಮ್ಮ ರಿಲೇಷನ್​ಶಿಪ್​ ಅನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಶೀಘ್ರದಲ್ಲೇ ಈ ಸ್ಟಾರ್​ ಕಪಲ್​ ಮದುವೆ (Katrina Kaif – Vicky Kaushal Marriage) ನಡೆಯಲಿದೆ. ಇದೇ ವರ್ಷ ಡಿಸೆಂಬರ್​ನಲ್ಲಿ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಹಸೆಮಣೆ ಏರುವುದು ಖಚಿತ ಎಂಬ ಮಾಹಿತಿ ಹರಿದಾಡುತ್ತಿದೆ. ಆ ಬಗ್ಗೆ ಇವರಿಬ್ಬರು ಎಲ್ಲಿಯೂ ಬಾಯಿ ಬಿಟ್ಟಿಲ್ಲ. ಆದರೆ ಬಲ್ಲ ಮೂಲಗಳಿಂದ ಬಿಸಿಬಿಸಿ ಸುದ್ದಿ ಕೇಳಿಬಂದಿದೆ. ರಾಜಸ್ಥಾನದಲ್ಲಿ ಈ ಸೆಲೆಬ್ರಿಟಿ ವಿವಾಹ ನಡೆಯಲಿದೆ. ಅಚ್ಚರಿ ಎಂದರೆ ಮದುವೆ ಬಳಿಕ ಹನಿಮೂನ್​ಗೆ (Honeymoon) ಹೋಗಬಾರದು ಎಂದು ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅದಕ್ಕೆ ಕಾರಣವೂ ಇದೆ.

ಈಗಾಗಲೇ ರಾಜಸ್ಥಾನದಲ್ಲಿ ಮದುವೆ ತಯಾರಿ ನಡೆಯುತ್ತಿದೆ. ಹಾಗಿದ್ದರೂ ಕೂಡ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಕುಟುಂಬದವರು ಗುಟ್ಟು ಬಿಟ್ಟು ಕೊಡುತ್ತಿಲ್ಲ. ಮದುವೆಗಾಗಿ ಕತ್ರಿನಾ ಹಾಗೂ ವಿಕ್ಕಿ 30 ದಿನಗಳ ಕಾಲ ರಜೆ ಪಡೆಯಲಿದ್ದಾರೆ. ಸದ್ಯ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕಲಿದ್ದಾರೆ. ಒಪ್ಪಿಕೊಂಡಿರುವ ಕೆಲವು ಚಿತ್ರಗಳ ಕೆಲಸಗಳನ್ನು ಮುಂದೂಡಿದ್ದಾರೆ. ಒಂದೆರಡು ಜಾಹೀರಾತಿನ ಶೂಟಿಂಗ್​ನಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.

ಮದುವೆ ಬಳಿಕ ಹನಿಮೂನ್​ಗೆ ತೆರಳಿದರೆ ಕನಿಷ್ಠ ಒಂದು ತಿಂಗಳು ಕಳೆಯುತ್ತದೆ. ಅದರಿಂದ ಈ ಮೊದಲೇ ಒಪ್ಪಿಕೊಂಡ ಸಿನಿಮಾ ಕೆಲಸಗಳಿಗೆ ತೊಂದರೆ ಆಗಲಿದೆ. ಹಾಗಾಗಿ ಹನಿಮೂನ್​ಗೆ ತೆರಳದಿರಲು ಈ ಜೋಡಿ ನಿರ್ಧರಿಸಿದೆ ಎಂಬ ಮಾತು ಕೇಳಿಬಂದಿದೆ. ವಿಕ್ಕಿ ಕೌಶಲ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ‘ಟೈಗರ್​ 3’, ‘ಫೋನ್​ ಭೂತ್​’ ಮುಂತಾದ ಚಿತ್ರಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ. ಆ ಚಿತ್ರಗಳ ಕೆಲಸಕ್ಕೆ ತೊಂದರೆ ಆಗಬಾರದು ಎಂದು ಅವರು ಹನಿಮೂನ್​ ಪ್ಲ್ಯಾನ್​ ಕೈ ಬಿಟ್ಟಿದ್ದಾರೆ.

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ರೀತಿಯೇ ಬಾಲಿವುಡ್​ನಲ್ಲಿ ಇನ್ನೊಂದು ಸ್ಟಾರ್​ ಜೋಡಿ ಎನಿಸಿಕೊಂಡಿರುವ ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್​ ಸಹ ಶೀಘ್ರವೇ ಮದುವೆ ಆಗುತ್ತಾರೆ ಎಂಬ ಸುದ್ದಿ ಜೋರಾಗಿ ಹಬ್ಬಿದೆ. ಅವರು ಕೂಡ ಡಿಸೆಂಬರ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಸಿನಿಮಾ ಕೆಲಸಗಳು ಹೆಚ್ಚಿರುವುದರಿಂದ 2022ರ ಏಪ್ರಿಲ್​ಗೆ ಮದುವೆ ದಿನಾಂಕ ಮುಂದೂಡಲಾಗಿದೆ ಎಂಬ ಮಾಹಿತಿ ಈಗ ಕೇಳಿಬಂದಿದೆ.​

ಇದನ್ನೂ ಓದಿ:

ಗುಟ್ಟಾಗಿ ನಡೆಯಿತು ಕತ್ರಿನಾ ಕೈಫ್​​-ವಿಕ್ಕಿ ಕೌಶಲ್​ ರೋಕಾ ಕಾರ್ಯಕ್ರಮ?; ಹಿಂದೂ ಹಬ್ಬದಂದು ಅಭಿಮಾನಿಗಳಿಗೆ ಸರ್​ಪ್ರೈಸ್​

2 ಬಾರಿ ಅಕ್ಷಯ್​ ಕುಮಾರ್​ ಕೆನ್ನೆಗೆ ಬಾರಿಸಿದ ಕತ್ರಿನಾ ಕೈಫ್​; ಇದನ್ನೆಲ್ಲ ಅಕ್ಕಿ ಸಹಿಸಿಕೊಂಡಿದ್ದೇಕೆ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ