ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?

Katrina Kaif | Vicky Kaushal: ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಮದುವೆಗೆ ಈಗಾಗಲೇ ರಾಜಸ್ಥಾನದಲ್ಲಿ ತಯಾರಿ ನಡೆಯುತ್ತಿದೆ. ಹಾಗಿದ್ದರೂ ಕೂಡ ವಿಕ್ಕಿ ​ ಮತ್ತು ಕತ್ರಿನಾ ಕುಟುಂಬದವರು ಗುಟ್ಟು ಬಿಟ್ಟು ಕೊಡುತ್ತಿಲ್ಲ.

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?
ವಿಕ್ಕಿ ಕೌಶಲ್, ಕತ್ರಿನಾ ಕೈಫ್
Follow us
| Updated By: ಮದನ್​ ಕುಮಾರ್​

Updated on: Nov 13, 2021 | 9:27 AM

ಬಾಲಿವುಡ್​ ಕಲಾವಿದರಾದ ವಿಕ್ಕಿ ಕೌಶಲ್​ (Vicky Kaushal) ಮತ್ತು ಕತ್ರಿನಾ ಕೈಫ್ (Katrina Kaif)​ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಕೇಳಿಬರುತ್ತಲೇ ಇದೆ. ಈಗ ಈ ಜೋಡಿ ತಮ್ಮ ರಿಲೇಷನ್​ಶಿಪ್​ ಅನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಶೀಘ್ರದಲ್ಲೇ ಈ ಸ್ಟಾರ್​ ಕಪಲ್​ ಮದುವೆ (Katrina Kaif – Vicky Kaushal Marriage) ನಡೆಯಲಿದೆ. ಇದೇ ವರ್ಷ ಡಿಸೆಂಬರ್​ನಲ್ಲಿ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಹಸೆಮಣೆ ಏರುವುದು ಖಚಿತ ಎಂಬ ಮಾಹಿತಿ ಹರಿದಾಡುತ್ತಿದೆ. ಆ ಬಗ್ಗೆ ಇವರಿಬ್ಬರು ಎಲ್ಲಿಯೂ ಬಾಯಿ ಬಿಟ್ಟಿಲ್ಲ. ಆದರೆ ಬಲ್ಲ ಮೂಲಗಳಿಂದ ಬಿಸಿಬಿಸಿ ಸುದ್ದಿ ಕೇಳಿಬಂದಿದೆ. ರಾಜಸ್ಥಾನದಲ್ಲಿ ಈ ಸೆಲೆಬ್ರಿಟಿ ವಿವಾಹ ನಡೆಯಲಿದೆ. ಅಚ್ಚರಿ ಎಂದರೆ ಮದುವೆ ಬಳಿಕ ಹನಿಮೂನ್​ಗೆ (Honeymoon) ಹೋಗಬಾರದು ಎಂದು ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅದಕ್ಕೆ ಕಾರಣವೂ ಇದೆ.

ಈಗಾಗಲೇ ರಾಜಸ್ಥಾನದಲ್ಲಿ ಮದುವೆ ತಯಾರಿ ನಡೆಯುತ್ತಿದೆ. ಹಾಗಿದ್ದರೂ ಕೂಡ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಕುಟುಂಬದವರು ಗುಟ್ಟು ಬಿಟ್ಟು ಕೊಡುತ್ತಿಲ್ಲ. ಮದುವೆಗಾಗಿ ಕತ್ರಿನಾ ಹಾಗೂ ವಿಕ್ಕಿ 30 ದಿನಗಳ ಕಾಲ ರಜೆ ಪಡೆಯಲಿದ್ದಾರೆ. ಸದ್ಯ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕಲಿದ್ದಾರೆ. ಒಪ್ಪಿಕೊಂಡಿರುವ ಕೆಲವು ಚಿತ್ರಗಳ ಕೆಲಸಗಳನ್ನು ಮುಂದೂಡಿದ್ದಾರೆ. ಒಂದೆರಡು ಜಾಹೀರಾತಿನ ಶೂಟಿಂಗ್​ನಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.

ಮದುವೆ ಬಳಿಕ ಹನಿಮೂನ್​ಗೆ ತೆರಳಿದರೆ ಕನಿಷ್ಠ ಒಂದು ತಿಂಗಳು ಕಳೆಯುತ್ತದೆ. ಅದರಿಂದ ಈ ಮೊದಲೇ ಒಪ್ಪಿಕೊಂಡ ಸಿನಿಮಾ ಕೆಲಸಗಳಿಗೆ ತೊಂದರೆ ಆಗಲಿದೆ. ಹಾಗಾಗಿ ಹನಿಮೂನ್​ಗೆ ತೆರಳದಿರಲು ಈ ಜೋಡಿ ನಿರ್ಧರಿಸಿದೆ ಎಂಬ ಮಾತು ಕೇಳಿಬಂದಿದೆ. ವಿಕ್ಕಿ ಕೌಶಲ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ‘ಟೈಗರ್​ 3’, ‘ಫೋನ್​ ಭೂತ್​’ ಮುಂತಾದ ಚಿತ್ರಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ. ಆ ಚಿತ್ರಗಳ ಕೆಲಸಕ್ಕೆ ತೊಂದರೆ ಆಗಬಾರದು ಎಂದು ಅವರು ಹನಿಮೂನ್​ ಪ್ಲ್ಯಾನ್​ ಕೈ ಬಿಟ್ಟಿದ್ದಾರೆ.

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ರೀತಿಯೇ ಬಾಲಿವುಡ್​ನಲ್ಲಿ ಇನ್ನೊಂದು ಸ್ಟಾರ್​ ಜೋಡಿ ಎನಿಸಿಕೊಂಡಿರುವ ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್​ ಸಹ ಶೀಘ್ರವೇ ಮದುವೆ ಆಗುತ್ತಾರೆ ಎಂಬ ಸುದ್ದಿ ಜೋರಾಗಿ ಹಬ್ಬಿದೆ. ಅವರು ಕೂಡ ಡಿಸೆಂಬರ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಸಿನಿಮಾ ಕೆಲಸಗಳು ಹೆಚ್ಚಿರುವುದರಿಂದ 2022ರ ಏಪ್ರಿಲ್​ಗೆ ಮದುವೆ ದಿನಾಂಕ ಮುಂದೂಡಲಾಗಿದೆ ಎಂಬ ಮಾಹಿತಿ ಈಗ ಕೇಳಿಬಂದಿದೆ.​

ಇದನ್ನೂ ಓದಿ:

ಗುಟ್ಟಾಗಿ ನಡೆಯಿತು ಕತ್ರಿನಾ ಕೈಫ್​​-ವಿಕ್ಕಿ ಕೌಶಲ್​ ರೋಕಾ ಕಾರ್ಯಕ್ರಮ?; ಹಿಂದೂ ಹಬ್ಬದಂದು ಅಭಿಮಾನಿಗಳಿಗೆ ಸರ್​ಪ್ರೈಸ್​

2 ಬಾರಿ ಅಕ್ಷಯ್​ ಕುಮಾರ್​ ಕೆನ್ನೆಗೆ ಬಾರಿಸಿದ ಕತ್ರಿನಾ ಕೈಫ್​; ಇದನ್ನೆಲ್ಲ ಅಕ್ಕಿ ಸಹಿಸಿಕೊಂಡಿದ್ದೇಕೆ?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ