AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ ಮದುವೆಗೆ ನಿಯೋಜನೆಗೊಂಡಿದ್ದಾರೆ ಇಷ್ಟೊಂದು ಬೌನ್ಸರ್​ಗಳು? ಹುಬ್ಬೇರಿಸಿದ ಅಭಿಮಾನಿಗಳು

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಇಂಥ ಸಂದರ್ಭದಲ್ಲಿ ಪರಿಸ್ಥಿತಿ ನಿಯಂತ್ರಣ ಮಾಡುವ ಕೆಲಸ ಬೌನ್ಸರ್​ಗಳದ್ದೇ.

ಕತ್ರಿನಾ ಮದುವೆಗೆ ನಿಯೋಜನೆಗೊಂಡಿದ್ದಾರೆ ಇಷ್ಟೊಂದು ಬೌನ್ಸರ್​ಗಳು? ಹುಬ್ಬೇರಿಸಿದ ಅಭಿಮಾನಿಗಳು
ಕತ್ರಿನಾ ಕೈಫ್, ವಿಕ್ಕಿ ಕೌಶಲ್
TV9 Web
| Edited By: |

Updated on:Dec 05, 2021 | 5:15 PM

Share

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಮದುವೆಗೆ ವೇದಿಕೆ ಸಿದ್ಧವಾಗಿದೆ. ಕೆಲವೇ ದಿನಗಳಲ್ಲಿ ಈ ಜೋಡಿ ಹಸೆಮಣೆ ಏರಲಿದೆ. ರಾಜಸ್ಥಾನದಲ್ಲಿ  ಅದ್ದೂರಿಯಾಗಿ ಈ ಜೋಡಿ ಮದುವೆ ಆಗುತ್ತಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಇವರು ಮದುವೆ ಆಗುತ್ತಿರುವ ವಿಚಾರದ ಬಗ್ಗೆ ರಾಜಸ್ಥಾನದ ಸವಾಯಿ ಮಾಧೋಪುರ್​ ಜಿಲ್ಲಾಧಿಕಾರಿಯಿಂದ ಮಾಹಿತಿ ಹೊರ ಬಿದ್ದಿದೆ. ಡಿಸೆಂಬರ್​ 7ರಿಂದ 10ರವರೆಗೆ ಮದುವೆ ಕಾರ್ಯಕ್ರಮ ನಡೆಯಲಿದೆ. ಈ ಮಧ್ಯೆ ಇವರ ಮದುವೆಗೆ ಬೌನ್ಸರ್​ಗಳನ್ನು ನಿಯೋಜನೆ ಮಾಡಲಾಗಿದೆ.

ಸೆಲೆಬ್ರಿಟಿಗಳು ಎಲ್ಲೇ ತೆರಳಿದರು ಅವರನ್ನು ಸೇಫ್​ ಮಾಡುವ ಕೆಲಸ ಬೌನ್ಸರ್​ಗಳಿಗೆ ಇರುತ್ತದೆ. ಏನೂ ಆಗದಂತೆ ಅವರನ್ನು ಕರೆದುಕೊಂಡು ಹೋಗುತ್ತಾರೆ. ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಇಂಥ ಸಂದರ್ಭದಲ್ಲಿ ಪರಿಸ್ಥಿತಿ ನಿಯಂತ್ರಣ ಮಾಡುವ ಕೆಲಸ ಬೌನ್ಸರ್​ಗಳದ್ದೇ. ಈ ಕಾರಣಕ್ಕೆ ಕತ್ರಿನಾ ಮದುವೆಗೆ 100 ಬೌನ್ಸರ್​ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಕತ್ರಿನಾ ಮದುವೆಯಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ತೆಗೆಯದಂತೆ ನೋಡಿಕೊಳ್ಳಲು ಈ ಸೆಲೆಬ್ರಿಟಿ ಜೋಡಿ ಸಾಕಷ್ಟು ಮುತುವರ್ಜಿ ವಹಿಸುತ್ತಿದೆ. ತುಂಬಾನೇ ಖಾಸಗಿಯಾಗಿ ಈ ಕಾರ್ಯಕ್ರಮ ನಡೆಯುತ್ತಿದೆ. ಹೀಗಾಗಿ, ಮದುವೆ ನಡೆಯುತ್ತಿರುವ ಪ್ರದೇಶದಲ್ಲಿ ಡ್ರೋನ್​ ಹಾರಾಟ ಕಂಡರೆ ಅದನ್ನು ಹೊಡೆದುರುಳಿಸಲು ನಿರ್ಧರಿಸಲಾಗಿದೆ. ಮದುವೆ ಮಂಟಪದಲ್ಲಿ ಬಂದ ಸೆಲೆಬ್ರಿಟಿಗಳು ಫೋಟೋ ಕ್ಲಿಕ್ಕಿಸಿದಂತೆ ನೋಡಿಕೊಳ್ಳಲು 100 ಬೌನ್ಸರ್​ಗಳು ನಿಯೋಜನೆಗೊಂಡಿದ್ದಾರೆ. ಇದರ ಜತೆಗೆ ಇವರು ಭದ್ರತೆಯನ್ನೂ ನೀಡಲಿದ್ದಾರೆ.

ಮದುವೆ ನಡೆಯುವ ಸ್ಥಳದಲ್ಲಿ ಈ ಬೌನ್ಸರ್​ಗಳು ಓಡಾಟ ನಡೆಸುತ್ತಿರುತ್ತಾರೆ. ಮೊಬೈಲ್​ನಲ್ಲಿ ಯಾರೂ ಫೋಟೋ ಕ್ಲಿಕ್​ ಮಾಡದಂತೆ ನೋಡಿಕೊಳ್ಳುವುದು ಇವರ ಕೆಲಸ. ಈ ಕೆಲಸಕ್ಕಾಗಿ 100 ಬೌನ್ಸರ್​ಗಳನ್ನು ನೇಮಕ ಮಾಡಿಕೊಂಡಿರುವ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ. ಈ ಎಲ್ಲಾ ಬೌನ್ಸರ್​ಗಳು ಜೈಪುರದಿಂದ ಬರಲಿದ್ದಾರೆ ಎಂದು ವರದಿ ಆಗಿದೆ.

ಈಗ ನಡೆಯುತ್ತಿರುವ ಮದುವೆ ಸಾಮಾನ್ಯ ಮದುವೆ ಅಲ್ಲ. ದೊಡ್ಡದೊಡ್ಡ ಸೆಲೆಬ್ರಿಟಿಗಳು ಮದುವೆ ಹಾಜರಾಗುತ್ತಿದ್ದಾರೆ. ಹೀಗಾಗಿ, ಭದ್ರತೆ ನೀಡಬೇಕು. ಹೋಟೆಲ್​ ಸುತ್ತಮುತ್ತ ಪೊಲೀಸರನ್ನು ನಿಯೋಜನೆ ಮಾಡಬೇಕು. ಮತ್ತೆ ಕೊವಿಡ್​ ಹೆಚ್ಚುವ ಭಯ ಇರುವುದರಿಂದ ಸರ್ಕಾರದ ನಿಯಮಾವಳಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಈ ಕಾರಣಕ್ಕೆ ಜಿಲ್ಲಾಧಿಕಾರಿಗಳಿಗೆ ಮದುವೆ ಬಗ್ಗೆ ಮೊದಲೇ ಮಾಹಿತಿ ನೀಡಬೇಕು. ಅತಿಥಿಗಳ ಲಿಸ್ಟ್​ ನೀಡಬೇಕು. ಕತ್ರಿನಾ ಹಾಗೂ ವಿಕ್ಕಿ ಕೌಶಲ್​ ಸಹಾಯಕರು  ಈ ಕೆಲಸವನ್ನು ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲಿನ ಜಿಲ್ಲಾಧಿಕಾರಿ ಡಿಸಿ ರಾಜೇಂದ್ರ ಕೃಷ್ಣ ನೀಡಿದ ಮಾಹಿತಿ ಪ್ರಕಾರ, ‘ಡಿಸೆಂಬರ್​ 7-10ರವರೆಗೆ ಮದುವೆ ಕಾರ್ಯ ನಡೆಯಲಿದೆ. ಬಾಲಿವುಡ್​ನ ಟಾಪ್​ 120 ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ. ಎಲ್ಲಾ ಅತಿಥಿಗಳು ಕೊವಿಡ್​ ನಿಯಮ ಪಾಲನೆ ಮಾಡಬೇಕು. ಕೊವಿಡ್​ ಲಸಿಕೆ ಪಡೆದ ಸೆಲೆಬ್ರಿಟಿಗಳಿಗೆ ಮಾತ್ರ ಮದುವೆ ನಡೆಯುವ ಸ್ಥಳಕ್ಕೆ ಅವಕಾಶವಿದೆ. ಕೊವಿಡ್​ ಲಸಿಕೆ ಪಡೆಯದೆ ಇದ್ದವರು ಆರ್​ಟಿ-ಪಿಸಿಆರ್​ ವರದಿ ತರಬೇಕು’ ಎಂದಿದ್ದಾರೆ.

ಇದನ್ನೂ ಓದಿ: ನಾಲ್ಕು ದಿನ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಮದುವೆ, 120 ಅತಿಥಿಗಳಿಗೆ ಆಹ್ವಾನ; ಅಧಿಕೃತ ಘೋಷಣೆ

Published On - 5:07 pm, Sun, 5 December 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ