AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ದಿನ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಮದುವೆ, 120 ಅತಿಥಿಗಳಿಗೆ ಆಹ್ವಾನ; ಅಧಿಕೃತ ಘೋಷಣೆ

‘ಮದುವೆ ನಡೆಯುವ ಸ್ಥಳದಲ್ಲಿ ಕೊವಿಡ್​ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. 120 ಅತಿಥಿಗಳು ಬರುವ ಬಗ್ಗೆ ನಮಗೆ ಮಾಹಿತಿ ಇದೆ’ ಎಂದು ರಾಜೇಂದ್ರ ಕೃಷ್ಣ ಹೇಳಿದ್ದಾರೆ.

ನಾಲ್ಕು ದಿನ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಮದುವೆ, 120 ಅತಿಥಿಗಳಿಗೆ ಆಹ್ವಾನ; ಅಧಿಕೃತ ಘೋಷಣೆ
ಕತ್ರಿನಾ ಕೈಫ್, ವಿಕ್ಕಿ ಕೌಶಲ್
TV9 Web
| Edited By: |

Updated on:Dec 05, 2021 | 4:44 PM

Share

 ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಮದುವೆ ಆಗುತ್ತಾರೋ ಅಥವಾ ಇಲ್ಲವೋ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಕೆಲವರು ಈ ಮದುವೆ ಸುದ್ದಿಯನ್ನು ಅಲ್ಲಗಳೆದಿದ್ದರು. ಇದೊಂದು ನಕಲಿ ಸುದ್ದಿ ಎಂದು ಕತ್ರಿನಾ ಆಪ್ತ ಬಳಗದವರೇ ಹೇಳಿಕೊಂಡಿದ್ದರು. ಆದರೆ, ಈಗ ಇವರ ಮದುವೆ ವಿಚಾರ ಅಧಿಕೃತವಾಗಿದೆ. ಹಾಗಂತ ಇದನ್ನು ಬಾಲಿವುಡ್​ ಜೋಡಿ ಖಚಿತಪಡಿಸಿಲ್ಲ. ಬದಲಿಗೆ ಮದುವೆ ನಡೆಯುತ್ತಿರುವ ಸವಾಯಿ ಮಾಧೋಪುರ್​ ಜಿಲ್ಲೆಯ ಜಿಲ್ಲಾಧಿಕಾರಿ ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಈಗ ನಡೆಯುತ್ತಿರುವ ಮದುವೆ ಸಾಮಾನ್ಯ ಮದುವೆ ಅಲ್ಲ. ದೊಡ್ಡದೊಡ್ಡ ಸೆಲೆಬ್ರಿಟಿಗಳು ಮದುವೆ ಹಾಜರಾಗುತ್ತಿದ್ದಾರೆ. ಹೀಗಾಗಿ, ಭದ್ರತೆ ನೀಡಬೇಕು. ಹೋಟೆಲ್​ ಸುತ್ತಮುತ್ತ ಪೊಲೀಸರನ್ನು ನಿಯೋಜನೆ ಮಾಡಬೇಕು. ಮತ್ತೆ ಕೊವಿಡ್​ ಹೆಚ್ಚುವ ಭಯ ಇರುವುದರಿಂದ ಸರ್ಕಾರದ ನಿಯಮಾವಳಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಈ ಕಾರಣಕ್ಕೆ ಜಿಲ್ಲಾಧಿಕಾರಿಗಳಿಗೆ ಮದುವೆ ಬಗ್ಗೆ ಮೊದಲೇ ಮಾಹಿತಿ ನೀಡಬೇಕು. ಅತಿಥಿಗಳ ಲಿಸ್ಟ್​ ನೀಡಬೇಕು. ಕತ್ರಿನಾ ಹಾಗೂ ವಿಕ್ಕಿ ಕೌಶಲ್​ ಸಹಾಯಕರು  ಈ ಕೆಲಸವನ್ನು ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲಿನ ಜಿಲ್ಲಾಧಿಕಾರಿ ಡಿಸಿ ರಾಜೇಂದ್ರ ಕೃಷ್ಣ ನೀಡಿದ ಮಾಹಿತಿ ಪ್ರಕಾರ, ‘ಡಿಸೆಂಬರ್​ 7-10ರವರೆಗೆ ಮದುವೆ ಕಾರ್ಯ ನಡೆಯಲಿದೆ. ಬಾಲಿವುಡ್​ನ ಟಾಪ್​ 120 ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ. ಎಲ್ಲಾ ಅತಿಥಿಗಳು ಕೊವಿಡ್​ ನಿಯಮ ಪಾಲನೆ ಮಾಡಬೇಕು. ಕೊವಿಡ್​ ಲಸಿಕೆ ಪಡೆದ ಸೆಲೆಬ್ರಿಟಿಗಳಿಗೆ ಮಾತ್ರ ಮದುವೆ ನಡೆಯುವ ಸ್ಥಳಕ್ಕೆ ಅವಕಾಶವಿದೆ. ಕೊವಿಡ್​ ಲಸಿಕೆ ಪಡೆಯದೆ ಇದ್ದವರು ಆರ್​ಟಿ-ಪಿಸಿಆರ್​ ವರದಿ ತರಬೇಕು’ ಎಂದಿದ್ದಾರೆ.

‘ಮದುವೆ ನಡೆಯುವ ಸ್ಥಳದಲ್ಲಿ ಕೊವಿಡ್​ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. 120 ಅತಿಥಿಗಳು ಬರುವ ಬಗ್ಗೆ ನಮಗೆ ಮಾಹಿತಿ ಇದೆ’ ಎಂದು ರಾಜೇಂದ್ರ ಕೃಷ್ಣ ಹೇಳಿದ್ದಾರೆ. ಸದ್ಯ, ಈ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ.

ತಮ್ಮ ಮದುವೆಗೆ ಬರುವ ಅತಿಥಿಗಳು ಮೊಬೈಲ್​ ಫೋನ್​ ತರುವಂತಿಲ್ಲ ಎಂದು ಈಗಾಗಲೇ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಯಾವುದೇ ಫೋಟೋಗಳು ಲೀಕ್​ ಆಗಬಾರದು ಎಂಬುದು ಈ ಜೋಡಿಯ ಉದ್ದೇಶ. ಅದೇ ರೀತಿ, ಮದುವೆ ನಡೆಯುವ ಹೋಟೆಲ್​ ಸುತ್ತಮುತ್ತ ಯಾವುದೇ ಡ್ರೋನ್​ಗಳು ಹಾರಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಒಂದು ವೇಳೆ ಡ್ರೋನ್​ ಕಂಡುಬಂದರೆ ಅದನ್ನು ಶೂಟ್​ ಮಾಡಿ ಹೊಡೆದುರುಳಿಸಲು ತೀರ್ಮಾನಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಮಾಜಿ ಪ್ರಿಯಕರ ಸಲ್ಮಾನ್​ ಖಾನ್​ಗೆ ಮದುವೆ ಆಮಂತ್ರಣ ನೀಡದ ಕತ್ರಿನಾ; ಕುಟುಂಬದವರಿಂದಲೇ ಬಂತು ಸ್ಪಷ್ಟನೆ

ಕತ್ರಿನಾ-ವಿಕ್ಕಿ ಮದುವೆ ಕದ್ದು ನೋಡಲು ಡ್ರೋನ್ ಬಳಸಿದರೆ ಕಾದಿದೆ ಶಿಕ್ಷೆ; ಶೂಟ್​ ಮಾಡಲು ನಿರ್ಧಾರ​

Published On - 9:43 pm, Fri, 3 December 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ