AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೇ ದಿನಕ್ಕೆ ಹನಿಮೂನ್​ ಮುಗಿಸಿ ವಾಪಸ್​ ಬಂದ ವಿಕ್ಕಿ ಕೌಶಲ್​-ಕತ್ರಿನಾ ಕೈಫ್​; ಕಾರಣ ಏನು?

Katrina Kaif | Vicky Kaushal: ಚಿತ್ರರಂಗದಲ್ಲಿ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ತುಂಬ ಬ್ಯುಸಿ ಆಗಿದ್ದಾರೆ. ಇಬ್ಬರಿಗೂ ಸಖತ್​ ಡಿಮ್ಯಾಂಡ್​ ಇದೆ. ಹಾಗಾಗಿ ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಕಾದು ಕೂತಿದ್ದಾರೆ.

ನಾಲ್ಕೇ ದಿನಕ್ಕೆ ಹನಿಮೂನ್​ ಮುಗಿಸಿ ವಾಪಸ್​ ಬಂದ ವಿಕ್ಕಿ ಕೌಶಲ್​-ಕತ್ರಿನಾ ಕೈಫ್​; ಕಾರಣ ಏನು?
ವಿಕ್ಕಿ ಕೌಶಲ್​, ಕತ್ರಿನಾ ಕೈಫ್
TV9 Web
| Edited By: |

Updated on: Dec 15, 2021 | 7:10 AM

Share

ಬಾಲಿವುಡ್​ನ ಕ್ಯೂಟ್​ ಜೋಡಿ ಎನಿಸಿಕೊಂಡಿರುವ ಕತ್ರಿನಾ ಕೈಫ್​​ (Katrina Kaif) ಮತ್ತು ವಿಕ್ಕಿ ಕೌಶಲ್​ (Vicky Kaushal) ಅವರ ಮದುವೆ ಅದ್ದೂರಿಯಾಗಿ ಡಿ.9ರಂದು ನಡೆಯಿತು. ಮೂಲಗಳ ಪ್ರಕಾರ, ಮರುದಿನವೇ ಅವರು ಹನಿಮೂನ್​ (Honeymoon) ಸಲುವಾಗಿ ಮಾಲ್ಡೀವ್ಸ್ (Maldives)​ ವಿಮಾನ ಹತ್ತಿದ್ದರು. ನಾಲ್ಕು ದಿನ ಕಳೆಯುವುದರೊಳಗೆ ವಾಪಸ್​ ಭಾರತಕ್ಕೆ ಬಂದಿದ್ದಾರೆ ಈ ನವ ದಂಪತಿ. ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಮಾಲ್ಡೀವ್ಸ್​ನಿಂದ ವಾಪಸ್​ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಅವರು ಖುಷಿಯಿಂದ ಪೋಸ್​ ನೀಡಿದ್ದಾರೆ. ಸದ್ಯ ಈ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ. ನವ ದಂಪತಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.

ಚಿತ್ರರಂಗದಲ್ಲಿ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ತುಂಬ ಬ್ಯುಸಿ ಆಗಿದ್ದಾರೆ. ಇಬ್ಬರಿಗೂ ಸಖತ್​ ಡಿಮ್ಯಾಂಡ್​ ಇದೆ. ಹಾಗಾಗಿ ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಕಾದು ಕೂತಿದ್ದಾರೆ. ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಈಗಾಗಲೇ ಒಪ್ಪಿಕೊಂಡಿರುವ ಅನೇಕ ಸಿನಿಮಾಗಳ ಶೂಟಿಂಗ್​ ಬಾಕಿ ಇದೆ. ಮದುವೆಗಾಗಿ ಒಂದಷ್ಟು ದಿನ ವಿರಾಮ ಪಡೆದುಕೊಂಡಿದ್ದ ಅವರು ಈಗ ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಹಾಗಾಗಿ ಅವರು ಕೇವಲ ನಾಲ್ಕೇ ದಿನಕ್ಕೆ ಹನಿಮೂನ್​ ಮುಗಿಸಿ ಭಾರತಕ್ಕೆ ವಾಪಸ್​ ಬಂದಿದ್ದಾರೆ.

ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ಅದ್ದೂರಿಯಾಗಿ ವಿಕ್ಕಿ ಕೌಶಲ್​-ಕತ್ರಿನಾ ಕೈಫ್​ ಮದುವೆ ನೆರವೇರಿತು. ಆ ಮದುವೆಗೆ ಬಂದ ಅತಿಥಿಗಳ್ಯಾರೂ ಮೊಬೈಲ್​ ಬಳಸುವಂತಿರಲಿಲ್ಲ. ಮದುವೆ ಸಮಾರಂಭದ ದೃಶ್ಯಗಳನ್ನು ಪ್ರಸಾರ ಮಾಡಲು ಓಟಿಟಿ ಸಂಸ್ಥೆಯೊಂದು 100 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಂಡಿದೆ ಎಂಬ ಸುದ್ದಿ ಇದೆ. ಆ ಬಗ್ಗೆ ಕತ್ರಿನಾ ಮತ್ತು ವಿಕ್ಕಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿಲ್ಲ.

ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರು ತಮ್ಮ ಮದುವೆಯ ಬಗ್ಗೆ ​ಕಿಂಚಿತ್ತೂ ಸುಳಿವು ನೀಡಿರಲಿಲ್ಲ. ಆದರೂ ಕೂಡ ವಿಷಯ ಸೋರಿಕೆ ಆಗಿತ್ತು. ಮದುವೆ ಬಗ್ಗೆ ಇಷ್ಟೆಲ್ಲ ಸೀಕ್ರೆಟ್​ ಮಾಡಿದ್ದು ಯಾಕೆ ಎಂಬುದಕ್ಕೆ ಸದ್ಯಕ್ಕಂತೂ ಅವರು ಉತ್ತರ ನೀಡಿಲ್ಲ. ತಮ್ಮಿಬ್ಬರ ಲವ್​ ಸ್ಟೋರಿ ಹೇಗೆ ಶುರುವಾಯಿತು ಎಂಬ ಬಗ್ಗೆಯೂ ಅವರು ಈವರೆಗೆ ಎಲ್ಲಿಯೂ ಮಾತನಾಡಿಲ್ಲ. ಹಾಗಾಗಿ ಈ ಎಲ್ಲ ವಿಚಾರಗಳನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

‘ಜೀ ಲೇ ಝರಾ’, ‘ಫೋನ್​ ಭೂತ್​’ ಮುಂತಾದ ಸಿನಿಮಾಗಳ ಶೂಟಿಂಗ್​ನಲ್ಲಿ ಕತ್ರಿನಾ ಪಾಲ್ಗೊಳ್ಳಬೇಕಿದೆ. ‘ಸ್ಯಾಮ್​ ಬಹದ್ದೂರ್​’ ಸಿನಿಮಾದ ಚಿತ್ರೀಕರಣಕ್ಕಾಗಿ ವಿಕ್ಕಿ ಕೌಶಲ್​ ಸಜ್ಜಾಗಿದ್ದಾರೆ.

ಇದನ್ನೂ ಓದಿ:

ವಿವಾಹದ ದಿನವೇ ಕತ್ರಿನಾಗೆ ಕಣ್ಣೀರು ಹಾಕಿಸಿದ ವಿಕ್ಕಿ ಕೌಶಲ್​; ಮದುವೆ ಮಂಟಪದಲ್ಲಿ ನಡೆದಿದ್ದೇನು?

ಕತ್ರಿನಾ​ ಮದುವೆ ಉಂಗುರದ ಬೆಲೆ ತಿಳಿದು ಅಚ್ಚರಿ ವ್ಯಕ್ತ ಪಡಿಸಿದ ಫ್ಯಾನ್ಸ್​; ಅಬ್ಬಬ್ಬಾ ಎಷ್ಟು ದುಬಾರಿ ಈ ವಿವಾಹ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್