Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮುಗಿಯಿತು ಈಗ ಆರತಕ್ಷತೆ ಸಂಭ್ರಮ; ಗ್ರ್ಯಾಂಡ್​ ಆಗಿ ನಡೆಯುತ್ತಿದೆ ಕತ್ರಿನಾ-ವಿಕ್ಕಿ ರಿಸೆಪ್ಷನ್​

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಸಿನಿಮಾ ಕೆಲಸಗಳಿಗೆ ಮತ್ತೆ ಚಾಲನೆ ನೀಡಬೇಕಿದೆ. ಈ ಕಾರಣಕ್ಕೆ ಆರತಕ್ಷತೆ ಕಾರ್ಯಕ್ರಮವನ್ನು ಬಹುಬೇಗ ಮುಗಿಸುವ ಆಲೋಚನೆ ಈ ದಂಪತಿಯದ್ದು.

ಮದುವೆ ಮುಗಿಯಿತು ಈಗ ಆರತಕ್ಷತೆ ಸಂಭ್ರಮ; ಗ್ರ್ಯಾಂಡ್​ ಆಗಿ ನಡೆಯುತ್ತಿದೆ ಕತ್ರಿನಾ-ವಿಕ್ಕಿ ರಿಸೆಪ್ಷನ್​
ವಿಕ್ಕಿ ಕೌಶಲ್​, ಕತ್ರಿನಾ ಕೈಫ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 15, 2021 | 9:12 PM

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಅವರು ಡಿಸೆಂಬರ್​ 9ರಂದು ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ವಿವಾಹವಾಗಿದ್ದರು. ಇವರ ಅದ್ದೂರಿ ಮದುವೆಗೆ ಆಪ್ತರು ಹಾಗೂ ಕುಟುಂಬದವರು ಮಾತ್ರ ಭಾಗಿ ಆಗಿದ್ದರು. ಈಗ ಈ ಜೋಡಿ ಆರತಕ್ಷತೆ ಆಯೋಜಿಸಿದೆ. ಡಿಸೆಂಬರ್​ 20ರಂದು ಮುಂಬೈನಲ್ಲಿ ಅದ್ದೂರಿಯಾಗಿ ಈ ಸಮಾರಂಭ ನಡೆಯುತ್ತಿದೆ. ಬಾಲಿವುಡ್​ ದಿಗ್ಗಜರು, ರಾಜಕಾರಣಿಗಳು, ಕ್ರಿಕೆಟ್​ ಲೋಕದ ಪ್ರಮುಖರು ಆರತಕ್ಷತೆಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ.

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಸಿನಿಮಾ ಕೆಲಸಗಳಿಗೆ ಮತ್ತೆ ಚಾಲನೆ ನೀಡಬೇಕಿದೆ. ಈ ಕಾರಣಕ್ಕೆ ಆರತಕ್ಷತೆ ಕಾರ್ಯಕ್ರಮವನ್ನು ಬಹುಬೇಗ ಮುಗಿಸುವ ಆಲೋಚನೆ ಈ ದಂಪತಿಯದ್ದು. ಇದರ ಜತೆಗೆ ಕ್ರಿಸ್​​ಮಸ್​ ಕೂಡ ಆಗಮಿಸುತ್ತಿದೆ. ಅದರ ಬೆನ್ನಲ್ಲೇ ಹೊಸ ವರ್ಷದ ಸೆಲಬ್ರೇಷನ್​ ಇರಲಿದೆ. ಅದಕ್ಕೂ ಮೊದಲೇ ಈ ರಿಸೆಪ್ಷನ್​ ನಡೆಯುತ್ತಿದೆ.

ಅಮಿತಾಭ್​ ಬಚ್ಚನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​, ಶಾರುಖ್​ ಖಾನ್​, ರಣಬೀರ್​ ಕಪೂರ್​, ಹೃತಿಕ್​ ರೋಷನ್​, ಕರಣ್​ ಜೋಹರ್​, ಅಕ್ಷಯ್​ ಕುಮಾರ್, ಕಂಗನಾ ರಣಾವತ್​, ಆಲಿಯಾ ಭಟ್​, ಅಜಯ್​ ದೇವಗನ್​, ಇಶಾನ್​ ಕಟ್ಟರ್, ರೋಹಿತ್​ ಶೆಟ್ಟಿ, ಸಿದ್ದಾರ್ಥ್​ ಮಲ್ಹೋತ್ರಾ, ತಾಪ್ಸೀ ಪನ್ನು, ಅಭಿಷೇಕ್​ ಬಚ್ಚನ್​ ಸೇರಿ ಅನೇಕರಿಗೆ ಆಮಂತ್ರಣ ಹೋಗಿದೆ.

ಕೊವಿಡ್​ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ. ಇದಕ್ಕಾಗಿ ಆರತಕ್ಷತೆಗೆ ಬರುವ ಎಲ್ಲರೂ ಆರ್​ಟಿ-ಪಿಸಿಆರ್​ ಪರೀಕ್ಷೆ ಮಾಡಿಸಬೇಕು. ಅಂದರೆ ಮಾತ್ರ ಈ ಸಮರಾಂಭಕ್ಕೆ ಬರೋಕೆ ಅವಕಾಶ ಇದೆ. ಬಾಲಿವುಡ್​ನಲ್ಲಿ ಇತ್ತೀಚೆಗೆ ಅನೇಕರಿಗೆ ಕೊವಿಡ್ ಕಾಣಿಸಿಕೊಂಡಿತ್ತು. ಹೀಗಾಗಿ, ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲಾಗುತ್ತಿದೆ.

ಸಲ್ಮಾನ್​ ಖಾನ್​ ಅವರು ಕತ್ರಿನಾಗೆ 3 ಕೋಟಿ ರೂಪಾಯಿ ಮೌಲ್ಯದ ರೇಂಜ್​ ರೋವರ್ ಕಾರನ್ನು ನೀಡಿದ್ದಾರೆ ಎಂದು ವರದಿ ಆಗಿದೆ. ಈ ಮೂಲಕ ಸಲ್ಮಾನ್​ ಖಾನ್​ ಅವರು ವಿಕ್ಕಿ ಹಾಗೂ ಕತ್ರಿನಾಗೆ ವಿಶೇಷವಾಗಿ ವಿಶ್​ ಮಾಡಿದ್ದಾರೆ. ಅಲ್ಲದೆ, ಕತ್ರಿನಾ ಬಗ್ಗೆ ಇರುವ ಫ್ರೆಂಡ್​ಶಿಪ್​ಅನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅಂದಹಾಗೆ, ಕತ್ರಿನಾ ಮತ್ತು ವಿಕ್ಕಿ ಮದುವೆ ಆಗುತ್ತಿದ್ದಂತೆ ಸಲ್ಲು ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿದ್ದವು. ಆದರೆ, ಆ ಬಗ್ಗೆ ಸಲ್ಮಾನ್​ ತಲೆಕೆಡಿಸಿಕೊಂಡಿಲ್ಲ. ಬದಲಿಗೆ ದುಬಾರಿ ಗಿಫ್ಟ್​ ನೀಡಿದ್ದಾರೆ.

ಇದನ್ನೂ ಓದಿ: ಕತ್ರಿನಾ ಕೈಫ್​ಗೆ ಗಿಫ್ಟ್​ ಕೊಡೋಕೆ ಕೋಟಿಕೋಟಿ ಖರ್ಚು ಮಾಡಿದ ಸಲ್ಮಾನ್​, ರಣಬೀರ್​?

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​