AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ ಕೈಫ್​-ವಿಕ್ಕಿ ವಿವಾಹಕ್ಕೆ ಕೊರೊನಾ ಅಡ್ಡಗಾಲು; ಮದುವೆ ಬಗ್ಗೆ ಹೊಸ ಅಪ್​ಡೇಟ್​

ಡಿಸೆಂಬರ್​ 7ರಿಂದ 9ರವರೆಗೆ ಈ ಜೋಡಿಯ ಮದುವೆ ನಡೆಯಲಿದೆ. ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ವಿವಾಹ ಸಮಾರಂಭ ಏರ್ಪಡಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ.

ಕತ್ರಿನಾ ಕೈಫ್​-ವಿಕ್ಕಿ ವಿವಾಹಕ್ಕೆ ಕೊರೊನಾ ಅಡ್ಡಗಾಲು; ಮದುವೆ ಬಗ್ಗೆ ಹೊಸ ಅಪ್​ಡೇಟ್​
ವಿಕ್ಕಿ ಕೌಶಲ್​, ಕತ್ರಿನಾ ಕೈಫ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 29, 2021 | 4:26 PM

Share

 ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಮದುವೆ ಆಗುತ್ತಿರುವ ವಿಚಾರದ ಬಗ್ಗೆ ಸಾಕಷ್ಟು ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇದೆ. ಈ ಜೋಡಿ ಮದುವೆ ಆಗುತ್ತಿರುವ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ, ಮೂಲಗಳ ಪ್ರಕಾರ ಇವರು ಮದುವೆ ಆಗುತ್ತಿರುವ ವಿಚಾರ ಬಹುತೇಕ ಖಚಿತವಾಗಿದೆ. ರಾಜಸ್ಥಾನದ ಸವಾಯಿ ಮಾಧೋಪುರ್​ನಲ್ಲಿ ಮದುವೆ ಸಂಭ್ರಮಕ್ಕೆ ತಯಾರಿ ನಡೆಯುತ್ತಿದೆ. ಇವುಗಳ ಮಧ್ಯೆ ಈ ಜೋಡಿ ಮದುವೆಗೆ ಕೊವಿಡ್​ ಕೆಂಗಣ್ಣು ಬಿದ್ದಿದೆ. ಈ ಕಾರಣಕ್ಕೆ ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದೆ. ಹಾಗಾದರೆ ಎನದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಡಿಸೆಂಬರ್​ 7ರಿಂದ 9ರವರೆಗೆ ಈ ಜೋಡಿಯ ಮದುವೆ ನಡೆಯಲಿದೆ. ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ವಿವಾಹ ಸಮಾರಂಭ ಏರ್ಪಡಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಬಾಲಿವುಡ್​ ಸೆಲೆಬ್ರಿಟಿಗಳಿಗೆ ಮದುವೆ ಆಮಂತ್ರಣ ಹೋಗಿದೆ. ಹೀಗಿರುವಾಗಲೇ ಭಾರತದಲ್ಲಿ ಕೊವಿಡ್​ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾದ ರೂಪಾಂತರಿಯೂ ಪತ್ತೆ ಆಗಿದೆ. ಈ ಕಾರಣಕ್ಕೆ ಮದುವೆಗೆ ಸಮಸ್ಯೆ ಎದುರಾಗುವ ಸೂಚನೆ ಸಿಕ್ಕಿದೆ.

ಕೊವಿಡ್ ರೂಪಾಂತರಿ ಒಮಿಕ್ರಾನ್ ವೈರಸ್ ಆತಂಕ ಹೆಚ್ಚಾಗಿದೆ. ಎಲ್ಲ ರಾಜ್ಯಗಳಲ್ಲೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇಂಥ ಸಂದರ್ಭದಲ್ಲಿ ಅದ್ದೂರಿಯಾಗಿ ಮದುವೆ ಏರ್ಪಡಿಸೋದು ಅಪಾಯಕಾರಿ. ಒಬ್ಬರಿಗೆ ಕೊವಿಡ್​ ಅಂಟಿದ್ದರೂ ಹಲವರಿಗೆ ಹಬ್ಬುವ ಸಾಧ್ಯತೆ ಇರುತ್ತದೆ. ಇದು ಸೆಲೆಬ್ರಿಟಿ ಮದುವೆ. ಈ ಕಾರಣಕ್ಕೆ ವಿವಾಹಕ್ಕೆ ಬರುವ ಬಹುತೇಕರು ಸೆಲೆಬ್ರಿಟಿಗಳೇ ಆಗಿರುತ್ತಾರೆ. ಇಂಥ ಸಂದರ್ಭದಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಹೀಗಾಗಿ, ಕತ್ರಿನಾ-ವಿಕ್ಕಿ ಜೋಡಿ ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದೆ.

ಈಗಾಗಲೇ ಮದುವೆ ಆಗುವ ಪ್ರದೇಶದ ಸುತ್ತಮುತ್ತಲು 45 ಹೋಟೆಲ್​ಗಳು ಬುಕ್​ ಆಗಿವೆ. 200 ಅತಿಥಿಗಳು ಮದುವೆಗೆ ಬರುತ್ತಿದ್ದಾರೆ. ಈಗ ಕೊವಿಡ್​ ಭಯದಿಂದ ಅತಿಥಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ರಿಸೆಪ್ಷನ್​ ಆಯೋಜಿಸಿ, ಆಗ ಹೆಚ್ಚಿನ ಸಂಖ್ಯೆಯಲ್ಲಿ ಸೆಲೆಬ್ರಿಟಿಗಳಿಗೆ ಆಮಂತ್ರಣ ನೀಡಲು ಚಿಂತಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಕತ್ರಿನಾ ಕೈಫ್​-ವಿಕ್ಕಿ ಮದುವೆಗೆ ವಿಶೇಷ ಮೆಹಂದಿ; ಇದರ ಬೆಲೆ ಕೇಳಿ ಅಚ್ಚರಿಪಟ್ಟ ಫ್ಯಾನ್ಸ್​

ಕತ್ರಿನಾ ಮದುವೆಗೆ ಬರ್ತಿಲ್ಲ ಸಲ್ಮಾನ್​ ಖಾನ್​? ಭರ್ಜರಿಯಾಗಿ ನಡೆಯಲಿದೆ ಸಂಗೀತ್ ಕಾರ್ಯಕ್ರಮ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ