AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಎಂಗೇಜ್​ಮೆಂಟ್​ ಸುದ್ದಿಗೆ ಹೊಸ ಟ್ವಿಸ್ಟ್​ 

Katrina Kaif Vicky Kaushal Engagement: ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಿದೆ. ಇವರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದನ್ನು ಇಬ್ಬರೂ ಅಲ್ಲಗಳೆದಿದ್ದರು.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಎಂಗೇಜ್​ಮೆಂಟ್​ ಸುದ್ದಿಗೆ ಹೊಸ ಟ್ವಿಸ್ಟ್​ 
ವಿಕ್ಕಿ ಕೌಶಲ್​ - ಕತ್ರಿನಾ ಕೈಫ್
TV9 Web
| Updated By: Digi Tech Desk|

Updated on:Aug 19, 2021 | 12:11 PM

Share

ನಟಿ ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಸುತ್ತಾಟದ ವಿಚಾರ ಈ ಮೊದಲಿನಿಂದಲೂ ಚರ್ಚೆಯಲ್ಲಿದೆ. 2018ರಲ್ಲಿ ‘ಕಾಫಿ ವಿತ್​ ಕರಣ್’​ ಶೋನಲ್ಲಿ ಕತ್ರಿನಾ ಪಾಲ್ಗೊಂಡಿದ್ದರು. ಈ ವೇಳೆ ವಿಕ್ಕಿ ಜತೆ ತೆರೆ ಹಂಚಿಕೊಳ್ಳುವ ಆಸಕ್ತಿ ತೋರಿದ್ದರು. ಇದಾದ ನಂತರ ಅಂದರೆ, 2019ರಲ್ಲಿ ಇಬ್ಬರೂ ಮುಂಬೈನಲ್ಲಿ ಊಟಕ್ಕೆ ಒಟ್ಟಾಗಿ ಸೇರಿದ್ದರು. ಇದರ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಈಗ ಅವರ ಎಂಗೇಜ್​ಮೆಂಟ್​ ಬಗ್ಗೆ ಸುದ್ದಿ ಹರಿದಾಡಿತ್ತು. ಇದಕ್ಕೆ ಕತ್ರಿನಾ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ. 

ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಿದೆ. ಇವರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದನ್ನು ಇಬ್ಬರೂ ಅಲ್ಲಗಳೆದಿದ್ದರು. ನಾವಿಬ್ಬರೂ ಬೆಸ್ಟ್​ ಫ್ರೆಂಡ್ಸ್​​ ಅಷ್ಟೇ ಎಂದು ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ಆದರೆ, ನೆಟ್ಟಿಗರು ಸುಮ್ಮನೆ ಕೂತಿಲ್ಲ. ವಿಕ್ಕಿ ಹಾಗೂ ಕತ್ರಿನಾ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿಬಿಟ್ಟಿದ್ದರು. ಆದರೆ, ಇದರಲ್ಲಿ ಹುರುಳಿಲ್ಲ ಎಂದು ಕತ್ರಿನಾ ತಂಡ ಸ್ಪಷ್ಟಪಡಿಸಿದೆ. ಇದು ಒಂದು ವರ್ಗದ ಅಭಿಮಾನಿಗಳಿಗೆ ಖುಷಿ ನೀಡಿದರೆ, ಇನ್ನೊಂದಷ್ಟು ಜನರಿಗೆ ಬೇಸರ ತರಿಸಿದೆ.

ಕತ್ರಿನಾ-ವಿಕ್ಕಿ ಸಂಬಂಧದ ಬಗ್ಗೆ ಅನಿಲ್​ ಕಪೂರ್​ ಮಗ ಹರ್ಷವರ್ಧನ್​ ಕಪೂರ್​ ಮೌನ ಮುರಿದಿದ್ದರು. ಈ ಬಗ್ಗೆ ಮಾತನಾಡಿದ್ದ ಹರ್ಷವರ್ಧನ್​, ‘ಕತ್ರಿನಾ-ವಿಕ್ಕಿ ಆಪ್ತರಾಗಿದ್ದಾರೆ. ಇಬ್ಬರೂ ಮದುವೆ ಆಗುವ ಆಲೋಚನೆಯಲ್ಲಿ ಕೂಡ ಇದ್ದಾರೆ. ಬಹುಶಃ ಈ ವಿಚಾರ ಹೇಳಿದ ನಂತರದಲ್ಲಿ ನಾನು ತೊಂದರೆಗೆ ಸಿಲುಕಬಹುದು’ ಎಂದಿದ್ದರು.

ಇದನ್ನೂ ಓದಿ:

ವಿಕ್ಕಿ ಕೌಶಲ್​- ಕತ್ರಿನಾ ಸಂಬಂಧದ ಬಗ್ಗೆ ಬಾಯ್ಬಿಟ್ಟ ಕಪೂರ್​ ಕುಟುಂಬದ ಕುಡಿ; ಶೀಘ್ರವೇ ಮದುವೆ?

ರಷ್ಯಾಗೆ ಹೊರಟ ಸಲ್ಮಾನ್​ ಖಾನ್​-ಕತ್ರಿನಾ ಕೈಫ್​; ಏನಿದು ಸಮಾಚಾರ? 

Published On - 7:20 am, Thu, 19 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ