AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಎಂಗೇಜ್​ಮೆಂಟ್​ ಸುದ್ದಿಗೆ ಹೊಸ ಟ್ವಿಸ್ಟ್​ 

Katrina Kaif Vicky Kaushal Engagement: ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಿದೆ. ಇವರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದನ್ನು ಇಬ್ಬರೂ ಅಲ್ಲಗಳೆದಿದ್ದರು.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಎಂಗೇಜ್​ಮೆಂಟ್​ ಸುದ್ದಿಗೆ ಹೊಸ ಟ್ವಿಸ್ಟ್​ 
ವಿಕ್ಕಿ ಕೌಶಲ್​ - ಕತ್ರಿನಾ ಕೈಫ್
TV9 Web
| Edited By: |

Updated on:Aug 19, 2021 | 12:11 PM

Share

ನಟಿ ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಸುತ್ತಾಟದ ವಿಚಾರ ಈ ಮೊದಲಿನಿಂದಲೂ ಚರ್ಚೆಯಲ್ಲಿದೆ. 2018ರಲ್ಲಿ ‘ಕಾಫಿ ವಿತ್​ ಕರಣ್’​ ಶೋನಲ್ಲಿ ಕತ್ರಿನಾ ಪಾಲ್ಗೊಂಡಿದ್ದರು. ಈ ವೇಳೆ ವಿಕ್ಕಿ ಜತೆ ತೆರೆ ಹಂಚಿಕೊಳ್ಳುವ ಆಸಕ್ತಿ ತೋರಿದ್ದರು. ಇದಾದ ನಂತರ ಅಂದರೆ, 2019ರಲ್ಲಿ ಇಬ್ಬರೂ ಮುಂಬೈನಲ್ಲಿ ಊಟಕ್ಕೆ ಒಟ್ಟಾಗಿ ಸೇರಿದ್ದರು. ಇದರ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಈಗ ಅವರ ಎಂಗೇಜ್​ಮೆಂಟ್​ ಬಗ್ಗೆ ಸುದ್ದಿ ಹರಿದಾಡಿತ್ತು. ಇದಕ್ಕೆ ಕತ್ರಿನಾ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ. 

ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಿದೆ. ಇವರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದನ್ನು ಇಬ್ಬರೂ ಅಲ್ಲಗಳೆದಿದ್ದರು. ನಾವಿಬ್ಬರೂ ಬೆಸ್ಟ್​ ಫ್ರೆಂಡ್ಸ್​​ ಅಷ್ಟೇ ಎಂದು ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ಆದರೆ, ನೆಟ್ಟಿಗರು ಸುಮ್ಮನೆ ಕೂತಿಲ್ಲ. ವಿಕ್ಕಿ ಹಾಗೂ ಕತ್ರಿನಾ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿಬಿಟ್ಟಿದ್ದರು. ಆದರೆ, ಇದರಲ್ಲಿ ಹುರುಳಿಲ್ಲ ಎಂದು ಕತ್ರಿನಾ ತಂಡ ಸ್ಪಷ್ಟಪಡಿಸಿದೆ. ಇದು ಒಂದು ವರ್ಗದ ಅಭಿಮಾನಿಗಳಿಗೆ ಖುಷಿ ನೀಡಿದರೆ, ಇನ್ನೊಂದಷ್ಟು ಜನರಿಗೆ ಬೇಸರ ತರಿಸಿದೆ.

ಕತ್ರಿನಾ-ವಿಕ್ಕಿ ಸಂಬಂಧದ ಬಗ್ಗೆ ಅನಿಲ್​ ಕಪೂರ್​ ಮಗ ಹರ್ಷವರ್ಧನ್​ ಕಪೂರ್​ ಮೌನ ಮುರಿದಿದ್ದರು. ಈ ಬಗ್ಗೆ ಮಾತನಾಡಿದ್ದ ಹರ್ಷವರ್ಧನ್​, ‘ಕತ್ರಿನಾ-ವಿಕ್ಕಿ ಆಪ್ತರಾಗಿದ್ದಾರೆ. ಇಬ್ಬರೂ ಮದುವೆ ಆಗುವ ಆಲೋಚನೆಯಲ್ಲಿ ಕೂಡ ಇದ್ದಾರೆ. ಬಹುಶಃ ಈ ವಿಚಾರ ಹೇಳಿದ ನಂತರದಲ್ಲಿ ನಾನು ತೊಂದರೆಗೆ ಸಿಲುಕಬಹುದು’ ಎಂದಿದ್ದರು.

ಇದನ್ನೂ ಓದಿ:

ವಿಕ್ಕಿ ಕೌಶಲ್​- ಕತ್ರಿನಾ ಸಂಬಂಧದ ಬಗ್ಗೆ ಬಾಯ್ಬಿಟ್ಟ ಕಪೂರ್​ ಕುಟುಂಬದ ಕುಡಿ; ಶೀಘ್ರವೇ ಮದುವೆ?

ರಷ್ಯಾಗೆ ಹೊರಟ ಸಲ್ಮಾನ್​ ಖಾನ್​-ಕತ್ರಿನಾ ಕೈಫ್​; ಏನಿದು ಸಮಾಚಾರ? 

Published On - 7:20 am, Thu, 19 August 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ