ನಿನ್ನ ಬಳಿ ನನ್ನ ಹೃದಯವಿದೆ ಎಂದ ಕತ್ರಿನಾ ಕೈಫ್; ಫ್ಯಾನ್ಸ್ ಪ್ರತಿಕ್ರಿಯೆ ಹೇಗಿತ್ತು?

‘ಟೈಗರ್​’ ಸರಣಿಯ ಎರಡು ಚಿತ್ರಗಳ ಕಥೆ ನಡೆದಿದ್ದು ವಿದೇಶದಲ್ಲೇ. ಈಗ ‘ಟೈಗರ್​ 3’ ಸಿನಿಮಾ ಕಥೆ ಕೂಡ ವಿದೇಶದಲ್ಲೇ ನಡೆಯುತ್ತಿದೆ. ಹೀಗಾಗಿ, ಕೆಲ ರಾಷ್ಟ್ರಗಳನ್ನು ಆಯ್ಕೆ ಮಾಡಿಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

ನಿನ್ನ ಬಳಿ ನನ್ನ ಹೃದಯವಿದೆ ಎಂದ ಕತ್ರಿನಾ ಕೈಫ್; ಫ್ಯಾನ್ಸ್ ಪ್ರತಿಕ್ರಿಯೆ ಹೇಗಿತ್ತು?
ನಿನ್ನ ಬಳಿ ನನ್ನ ಹೃದಯವಿದೆ ಎಂದ ಕತ್ರಿನಾ ಕೈಫ್; ಅವರು ಯಾರು?
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 05, 2021 | 5:40 PM

ನಟಿ ಕತ್ರಿನಾ ಕೈಫ್​ ರಿಲೇಶನ್​ಶಿಪ್​ ವಿಚಾರದಲ್ಲಿ ಸಾಕಷ್ಟು ಸುದ್ದಿಯಾಗುತ್ತಾರೆ. ರಣಬೀರ್​ ಕಪೂರ್​, ಸಲ್ಮಾನ್​ ಖಾನ್ ನಂತರ ನಟ ವಿಕ್ಕಿ ಕೌಶಲ್​ ಜತೆ ಕತ್ರಿನಾ ರಿಲೇಶನ್​ಶಿಪ್​ನಲ್ಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದೆ. ಹೀಗಿರುವಾಗಲೇ ಕತ್ರಿನಾ ನಿನ್ನ ಬಳಿ ನನ್ನ ಹೃದಯವಿದೆ ಎಂದಿರುವ ಪೋಸ್ಟ್​ ಸಾಕಷ್ಟು ವೈರಲ್​ ಆಗುತ್ತಿದೆ.

ಕೊವಿಡ್ ಎರಡನೇ ಅಲೆ​ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿತ್ತು. ಭಾರತದಲ್ಲಿ ಕೊರೊನಾ ವೈರಸ್​ ಹೆಚ್ಚಾದ ಕಾರಣಕ್ಕೆ ಅನೇಕ ರಾಷ್ಟ್ರಗಳು ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ಹೇರಿದ್ದವು. ಆದರೆ, ಈಗ ಕೊವಿಡ್​ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ಸಲ್ಮಾನ್​ ಖಾನ್​ ಹಾಗೂ ಕತ್ರಿನಾ ಕೈಫ್​ ನಟನೆಯ ‘ಟೈಗರ್​ 3’ ತಂಡ ವಿದೇಶದಲ್ಲಿ ಶೂಟಿಂಗ್​​ ಆರಂಭಿಸಿದೆ. ರಷ್ಯಾದಲ್ಲಿ ಶೂಟಿಂಗ್ ಪೂರ್ಣಗೊಳಿಸಿರುವ ಕತ್ರಿನಾ-ಸಲ್ಲು ಈಗ, ಟರ್ಕಿಗೆ ಪ್ರಯಾಣ ಬೆಳೆಸಿದ್ದಾರೆ.

‘ಟೈಗರ್​’ ಸರಣಿಯ ಎರಡು ಚಿತ್ರಗಳ ಕಥೆ ನಡೆದಿದ್ದು ವಿದೇಶದಲ್ಲೇ. ಈಗ ‘ಟೈಗರ್​ 3’ ಸಿನಿಮಾ ಕಥೆ ಕೂಡ ವಿದೇಶದಲ್ಲೇ ನಡೆಯುತ್ತಿದೆ. ಹೀಗಾಗಿ, ಕೆಲ ರಾಷ್ಟ್ರಗಳನ್ನು ಆಯ್ಕೆ ಮಾಡಿಕೊಂಡು ಶೂಟಿಂಗ್​ ಮಾಡಲಾಗುತ್ತಿದೆ. ಈಗ ‘ಟೈಗರ್​ 3’ ತಂಡ ಟರ್ಕಿಯಲ್ಲಿದೆ. ಅಲ್ಲಿರುವ ಫೋಟೋಗಳನ್ನು ಹಂಚಿಕೊಂಡಿರುವ ಕತ್ರಿನಾ, ‘ಟರ್ಕಿ ನಿನ್ನ ಜತೆ ನನ್ನ ಹೃದಯವಿದೆ’ ಎಂದಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

View this post on Instagram

A post shared by Katrina Kaif (@katrinakaif)

‘ಟೈಗರ್​ 3’ ಮೇಲೆ ಅಭಿಮಾನಿಗಳು ಇಟ್ಟುಕೊಂಡಿರುವ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ಮಾಪಕರು ಕೋಟಿ ಕೋಟಿ ರೂ. ಹಣ ಖರ್ಚು ಮಾಡುತ್ತಿದ್ದಾರೆ. ‘ಟೈಗರ್​ 3’ ಚಿತ್ರದಲ್ಲಿ ವಿಲನ್​ ಇಂಟ್ರಡಕ್ಷನ್​ ಸೀನ್​ಗಾಗಿ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.

‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ಬಳಿಕ ಟೈಗರ್​ ಸರಣಿಯಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಈ ಬಾರಿಯೂ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಕೂಡ ಒಂದು ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ

ಹೃತಿಕ್ ರೋಶನ್, ಕತ್ರಿನಾ ಕೈಫ್ ಇದ್ದ ಜೊಮೆಟೊ ಜಾಹೀರಾತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ: ಸಮರ್ಥಿಸಿಕೊಂಡ ಕಂಪನಿ

Published On - 5:16 pm, Sun, 5 September 21

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್