AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್​ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್​; ಮಾಲ್ಡೀವ್ಸ್​ ನನ್ನ ಹ್ಯಾಪಿ ಪ್ಲೇಸ್ ಎಂದ ನಟಿ  

ಕತ್ರಿನಾ ಕೈಫ್​ ಬೀಚ್​ನಲ್ಲಿ ಕುಳಿತಿದ್ದಾರೆ. ಬೀಚ್​ನಲ್ಲಿ ಸಮಯ ಕಳೆದಿರುವ ಮೂರು ಫೋಟೋಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಫೋಟೋ ಪೋಸ್ಟ್ ಮಾಡಿದ ಎರಡು ಗಂಟೆಯಲ್ಲಿ 15 ಲಕ್ಷಕ್ಕೂ ಅಧಿಕ ಜನರು ಇದನ್ನು ಲೈಕ್​ ಮಾಡಿದ್ದಾರೆ.

ಹನಿಮೂನ್​ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್​; ಮಾಲ್ಡೀವ್ಸ್​ ನನ್ನ ಹ್ಯಾಪಿ ಪ್ಲೇಸ್ ಎಂದ ನಟಿ  
ಕತ್ರಿನಾ ಕೈಫ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 24, 2022 | 4:02 PM

ಬಾಲಿವುಡ್​ನ ​ಜೋಡಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ಅವರ ಮದುವೆ ಡಿ.9ರಂದು ಅದ್ದೂರಿಯಾಗಿ ನಡೆಯಿತು. ಇದಾದ ಮರುದಿನವೇ ಅವರು ಹನಿಮೂನ್​ ಸಲುವಾಗಿ ಮಾಲ್ಡೀವ್ಸ್ ವಿಮಾನ ಹತ್ತಿದ್ದರು ಎನ್ನಲಾಗಿತ್ತು. ನಾಲ್ಕು ದಿನ ಮಾಲ್ಡೀವ್ಸ್​ನಲ್ಲಿ ಸಮಯ ಕಳೆದು ಭಾರತಕ್ಕೆ ವಾಪಸ್ ಬಂದಿತ್ತು ಈ ಜೋಡಿ. ಆದರೆ, ಎಲ್ಲಿಯೂ ಇವರು ಹನಿಮೂನ್​ ಫೋಟೋ ಹಂಚಿಕೊಂಡಿರಲಿಲ್ಲ. ಈಗ ಕತ್ರಿನಾ ಅವರು ಹನಿಮೂನ್​ ಫೋಟೋ ಹಂಚಿಕೊಂಡಿದ್ದಾರೆ. ಮಾಲ್ಡೀವ್ಸ್ (Maldives)​ ಸಮುದ್ರ ತೀರದಲ್ಲಿ ನಿಂತಿರುವ ಚಿತ್ರವನ್ನು ಕತ್ರಿನಾ ಪೋಸ್ಟ್​ ಮಾಡಿದ್ದಾರೆ. ಸದ್ಯ ಈ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ.  

ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ಅದ್ದೂರಿಯಾಗಿ ವಿಕ್ಕಿ ಕೌಶಲ್​-ಕತ್ರಿನಾ ಕೈಫ್​ ಮದುವೆ ನೆರವೇರಿತ್ತು. ಕಳೆದ ವರ್ಷ ಸೆಲೆಬ್ರಿಟಿ ವಲಯದಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಕತ್ರಿನಾ-ವಿಕ್ಕಿ ಮದುವೆ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ಮದುವೆ ಬಳಿಕ ಫೋಟೋ ಹಂಚಿಕೊಂಡು ದಂಪತಿ ಸಂಭ್ರಮಿಸಿದ್ದರು. ಮದುವೆ ಬಳಿಕ ಕತ್ರಿನಾ ಅಡುಗೆ ಕಲಿಯುತ್ತಿರುವುದು ವಿಶೇಷ. ಈಗ ಅವರು ಹನಿಮೂನ್​ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ಮೈ ಹ್ಯಾಪಿ ಪ್ಲೇಸ್’​ ಎಂದು ಅವರು ಹಾಕಿಕೊಂಡಿದ್ದಾರೆ.

ಕತ್ರಿನಾ ಕೈಫ್​ ಬೀಚ್​ನಲ್ಲಿ ಕುಳಿತಿದ್ದಾರೆ. ಬೀಚ್​ನಲ್ಲಿ ಸಮಯ ಕಳೆದಿರುವ ಮೂರು ಫೋಟೋಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಫೋಟೋ ಪೋಸ್ಟ್ ಮಾಡಿದ ಎರಡು ಗಂಟೆಯಲ್ಲಿ 15 ಲಕ್ಷಕ್ಕೂ ಅಧಿಕ ಜನರು ಇದನ್ನು ಲೈಕ್​ ಮಾಡಿದ್ದಾರೆ. ವಿಶೇಷ ಎಂದರೆ, ಇವರ ಮದುವೆ ದಿನ ಹಾಕಿದ ಫೋಟೋ ಒಂದು ಕೋಟಿಗೂ ಅಧಿಕ ಲೈಕ್ಸ್ ಪಡೆದುಕೊಂಡಿದೆ.

View this post on Instagram

A post shared by Katrina Kaif (@katrinakaif)

ಚಿತ್ರರಂಗದಲ್ಲಿ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ತುಂಬ ಬ್ಯುಸಿ ಆಗಿದ್ದಾರೆ. ಇಬ್ಬರಿಗೂ ಸಖತ್​ ಡಿಮ್ಯಾಂಡ್​ ಇದೆ. ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಈಗಾಗಲೇ ಒಪ್ಪಿಕೊಂಡಿರುವ ಅನೇಕ ಸಿನಿಮಾಗಳ ಶೂಟಿಂಗ್​ ಬಾಕಿ ಇದೆ. ಮದುವೆಗಾಗಿ ಒಂದಷ್ಟು ದಿನ ವಿರಾಮ ಪಡೆದುಕೊಂಡಿದ್ದ ಅವರು ಈಗ ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಜೀ ಲೇ ಝರಾ’, ‘ಫೋನ್​ ಭೂತ್​’ ಮುಂತಾದ ಸಿನಿಮಾಗಳ ಶೂಟಿಂಗ್​ನಲ್ಲಿ ಕತ್ರಿನಾ ಬ್ಯುಸಿ ಇದ್ದಾರೆ. ‘ಸ್ಯಾಮ್​ ಬಹದ್ದೂರ್​’ ಸಿನಿಮಾದ ಚಿತ್ರೀಕರಣದಲ್ಲಿ ವಿಕ್ಕಿ ಪಾಲ್ಗೊಳ್ಳುತ್ತಿದ್ದಾರೆ.

ಅಡುಗೆ ಕಲಿಯುತ್ತಿರುವ ಕತ್ರಿನಾ..

ಕತ್ರಿನಾ ಕೈಫ್​ ಲಂಡನ್​ ಮೂಲದವರು. ಹಿಂದಿ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ನಂತರ ಅವರು ಭಾರತದಲ್ಲೇ ಸೆಟ್ಲ್​ ಆಗಿದ್ದಾರೆ. ಈಗ ವಿಕ್ಕಿ ಕೌಶಲ್​ ಅವರನ್ನು ಮದುವೆಯಾಗಿ ಪಂಜಾಬ್​ನ ಸೊಸೆ ಆಗಿದ್ದಾರೆ. ಮದುವೆ ಬಳಿಕ ಅವರು ಪಂಜಾಬಿ ಸಂಪ್ರದಾಯವನ್ನು ಪಾಲಿಸಲು ಆರಂಭಿಸಿದ್ದಾರೆ. ಪಂಜಾಬಿ ಶೈಲಿಯ ಕೆಲವು ತಿನಿಸುಗಳನ್ನು ತಯಾರಿಸುವುದು ಹೇಗೆ ಎಂಬುದನ್ನು ಅವರು ಕಲಿಯುತ್ತಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು.  ವಿಕ್ಕಿ ಕೌಶಲ್​ ಅವರ ತಾಯಿ ವೀಣಾ ಕೌಶಲ್​ ಅವರು ಕತ್ರಿನಾ ಕೈಫ್​ಗೆ ಅಡುಗೆ ಹೇಳಿಕೊಡುತ್ತಿದ್ದಾರೆ. ರೆಸಿಪಿ ತಿಳಿದುಕೊಳ್ಳಲು ಯೂಟ್ಯೂಬ್​ನಲ್ಲಿ ಸಾಕಷ್ಟು ವಿಡಿಯೋಗಳನ್ನು ಕೂಡ ಕತ್ರಿನಾ ನೋಡುತ್ತಿದ್ದಾರೆ. ಇದರ ಜೊತೆಗೆ ಪಂಜಾಬಿ ಭಾಷೆಯನ್ನು ಕಲಿತುಕೊಳ್ಳಲು ಕೂಡ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ಮಾಧ್ಯಮಗಳಿಗೆ ಸುದ್ದಿ ಮುಟ್ಟಿಸಿವೆ.

ಇದನ್ನೂ ಓದಿ: ಕತ್ರಿನಾ ಕೈಫ್​ ಹಾಗೂ ವಿಜಯ್​ ಸೇತುಪತಿಗೆ ವಿಶೇಷ ಕ್ಲಾಸ್​; ಇದು ಹೊಸ ಸಿನಿಮಾ ಅಪ್​ಡೇಟ್​

ಮುಂಬೈ ಏರ್​ಪೋರ್ಟ್​ನಲ್ಲಿ ಹಸಿರು ಪೈಜಾಮಾ ಧರಿಸಿ ಮಿಂಚಿದ ಕತ್ರಿನಾ; ಅದರ ಬೆಲೆ ಕೇಳಿ ದಂಗಾದ ಫ್ಯಾಶನ್ ಪ್ರಿಯರು

ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ