AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ-ವಿಕ್ಕಿ ಮದುವೆಯ ಅತಿಥಿಗಳಿಗೆ ವೆಲ್​ಕಮ್ ನೋಟ್​; ಈ ಮೂಲಕ ಮುಖ್ಯ ವಿಚಾರ ತಿಳಿಸಿದ ಜೋಡಿ

Katrina Kaif Marriage: ವಿಕ್ಕಿ ಕೌಶಲ್​-ಕತ್ರಿನಾ ಕೈಫ್​ ಮದುವೆಯನ್ನು ಬಹಳ ಸೀಕ್ರೆಟ್​ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳು ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ಕತ್ರಿನಾ-ವಿಕ್ಕಿ ಮದುವೆಯ ಅತಿಥಿಗಳಿಗೆ ವೆಲ್​ಕಮ್ ನೋಟ್​; ಈ ಮೂಲಕ ಮುಖ್ಯ ವಿಚಾರ ತಿಳಿಸಿದ ಜೋಡಿ
ವಿಕ್ಕಿ ಕೌಶಲ್ - ಕತ್ರಿನಾ ಕೈಫ್
TV9 Web
| Edited By: |

Updated on: Dec 08, 2021 | 12:46 PM

Share

ಕತ್ರಿನಾ ಕೈಫ್ (Katrina Kaif)​ ಮತ್ತು ವಿಕ್ಕಿ ಕೌಶಲ್ (Vicky Kaushal)​ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಸ್ಟಾರ್​ ಜೋಡಿಯ ವಿವಾಹಕ್ಕೆ ಸಕಲ ಸಿದ್ಧತೆ ನಡೆದಿದೆ. ಬಾಲಿವುಡ್​ನ ಕೆಲವೇ ಕೆಲವು ಮಂದಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ವಿವಾಹಪೂರ್ವ ಕಾರ್ಯಗಳು ಆರಂಭ ಆಗಿದ್ದು, ಮದುವೆ ನಡೆಯುವ ಸ್ಥಳಕ್ಕೆ ಅತಿಥಿಗಳು ಆಗಮಿಸುತ್ತಿದ್ದಾರೆ. ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ರೆಸಾರ್ಟ್​ನಲ್ಲಿ ಈ ಮದುವೆ ನಡೆಯುತ್ತಿದೆ. ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್ ವಿವಾಹ (Katrina Kaif Vicky Kaushal Wedding) ಸಮಾರಂಭಕ್ಕೆ ಬಂದ ಅತಿಥಿಗಳನ್ನು ಸ್ವಾಗತಿಸಲು ​ಒಂದು ವೆಲ್​ಕಮ್​ ನೋಟ್​ ನೀಡಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಅದರ ಫೋಟೋ ವೈರಲ್​ ಆಗುತ್ತಿದೆ.

‘ಕಡೆಗೂ ನೀವು ಇಲ್ಲಿಗೆ ಬಂದು ತಲುಪಿದ್ದೀರಿ.. ಜೈಪುರದಿಂದ ರಣತಂಬೂರ್​ ತನಕ ನಿಮ್ಮ ಪ್ರಯಾಣ ಚೆನ್ನಾಗಿತ್ತೆಂದು ಭಾವಿಸುತ್ತೇವೆ. ನೀವು ಬರುವಷ್ಟರಲ್ಲಿ ನಾವು ನಿಮಗಾಗಿ ಸಿದ್ಧಪಡಿಸಿದ ಆಹಾರಗಳನ್ನು ಸ್ವೀಕರಿಸಿ’ ಎಂದು ಈ ವೆಲ್​ಕಮ್​ ನೋಟ್​ನಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲ, ಇದರ ಜೊತೆಗೆ ಮುಖ್ಯವಾದ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಏನದು? ಫೋಟೋ, ವಿಡಿಯೋ ಸೆರೆಹಿಡಿಯಬಾರದು ಎಂಬ ಎಚ್ಚರಿಕೆ ಸಂದೇಶ!

ಹೌದು, ಈ ಮದುವೆಯನ್ನು ಬಹಳ ಸೀಕ್ರೆಟ್​ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳೂ ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗಬಾರದು ಎಂದು ಎಚ್ಚರಿಕೆ ವಹಿಸಲಾಗುತ್ತಿದೆ. ಹಾಗಾಗಿ ಮದುವೆ ಬಂದ ಅತಿಥಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಲಾಗಿದೆ. ‘ನೀವೆಲ್ಲರೂ ನಿಮ್ಮ ಮೊಬೈಲ್​ ಫೋನ್​ಗಳನ್ನು ರೂಮ್​ನಲ್ಲಿಯೇ ಇಟ್ಟುಬರಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ. ಯಾವುದೇ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಬೇಡಿ. ನಿಮ್ಮೆಲ್ಲರನ್ನೂ ಭೇಟಿಯಾಗಲು ನಾವು ಕಾದಿದ್ದೇವೆ’ ಎಂದು ಈ ವೆಲ್​ಕಮ್​ ನೋಟ್​ನಲ್ಲಿ ಬರೆಯಲಾಗಿದೆ.

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಮದುವೆ ಮಂಟಪದ ಬಗ್ಗೆ ಅಚ್ಚರಿಯ ಮಾಹಿತಿ ಹರಡಿದೆ. ಜಗಮಗಿಸುವ ಗಾಜಿನ ಮಂಟಪದಲ್ಲಿ ಕತ್ರಿನಾ ಮತ್ತು ವಿಕ್ಕಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇನ್ನೂ ವಿಶೇಷ ಏನೆಂದರೆ, ಮದುಮಗ ವಿಕ್ಕಿ ಕೌಶಲ್​ ಅವರು 7 ಬಿಳಿ ಕುದುರೆಗಳ ಜತೆಯಲ್ಲಿ ಈ ಮಂಟಪಕ್ಕೆ ಗ್ರ್ಯಾಂಡ್​ ಎಂಟ್ರಿ ನೀಡಲಿದ್ದಾರೆ ಎಂದು ವರದಿ ಆಗಿದೆ. ಈ ಸುದ್ದಿ ಕೇಳಿದ ಬಳಿಕ ಸ್ಟಾರ್ ಜೋಡಿಯ ಅಭಿಮಾನಿಗಳು ಕಣ್ಣರಳಿಸುತ್ತಿದ್ದಾರೆ.

ಮದುವೆ ನಡೆಯುವ ಹೋಟೆಲ್​ ಸುತ್ತಮುತ್ತ ಯಾವುದೇ ಡ್ರೋನ್​ಗಳು ಹಾರಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಒಂದು ವೇಳೆ ಡ್ರೋನ್​ ಕಂಡುಬಂದರೆ ಅದನ್ನು ಶೂಟ್​ ಮಾಡಿ ಹೊಡೆದುರುಳಿಸಲು ತೀರ್ಮಾನಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ:

ಕತ್ರಿನಾ-ವಿಕ್ಕಿ ಲವ್​ಸ್ಟೋರಿ ಶುರು ಆಗಲು ಕಾರಣ ಆದ ವ್ಯಕ್ತಿ ಯಾರು ಗೊತ್ತಾ? ಇಲ್ಲಿದೆ ಫುಲ್​ ವಿವರ

ಮದುವೆಯಲ್ಲಿ ಕತ್ರಿನಾ​ ಧರಿಸುವ ಬಟ್ಟೆ ಬಗ್ಗೆಯೂ ಗುಟ್ಟು; ಇಷ್ಟೆಲ್ಲ ರಹಸ್ಯ ಕಾಪಾಡುತ್ತಿರೋದು ಯಾಕೆ?

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ