AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿದೆ ಕತ್ರಿನಾ-ವಿಕ್ಕಿ ಮದುವೆ ತಯಾರಿ; ಇತರೆ ಸೆಲೆಬ್ರಿಟಿಗಳಿಗೆ ಕಿರಿಕಿರಿ: ಕಾರಣ ಏನು?

Katrina Kaif | Vicky Kaushal: ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರನ್ನೂ ಮದುವೆಗೆ ಆಹ್ವಾನಿಸಲಾಗುತ್ತಿದೆ. ಮುಂಬೈ, ದೆಹಲಿ ಮುಂತಾದ ನಗರಗಳಿಂದ ಸ್ನೇಹಿತರು ಜೈಪುರಕ್ಕೆ ಆಗಮಿಸಲಿದ್ದಾರೆ.

ಜೋರಾಗಿದೆ ಕತ್ರಿನಾ-ವಿಕ್ಕಿ ಮದುವೆ ತಯಾರಿ; ಇತರೆ ಸೆಲೆಬ್ರಿಟಿಗಳಿಗೆ ಕಿರಿಕಿರಿ: ಕಾರಣ ಏನು?
ವಿಕ್ಕಿ ಕೌಶಲ್​, ಕತ್ರಿನಾ ಕೈಫ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 15, 2021 | 8:35 AM

ಬಾಲಿವುಡ್​ನಲ್ಲೀಗ ಮದುವೆ ಸೀಸನ್​ ಶುರು ಆಗಿದೆ. ಕತ್ರಿನಾ ಕೈಫ್​ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal)​ ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಬಗ್ಗೆ ಅವರ ಕುಟುಂಬದವರಿಂದ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಆದರೆ ಮೂಲಗಳಿಂದ ಈ ಸುದ್ದಿ ಖಚಿತಗೊಂಡಿದೆ. ವಿಕ್ಕಿ-ಕತ್ರಿನಾ ಮದುವೆ (Katrina Kaif Vicky Kaushal marriage) ರಾಜಸ್ಥಾನದ ಐಷಾರಾಮಿ ಹೋಟೆಲ್​ನಲ್ಲಿ ನಡೆಯಲಿದೆ. ಡಿಸೆಂಬರ್​ 7ರಿಂದ 9ರವರೆಗೆ ನಡೆಯಲಿರುವ ಈ ಅದ್ದೂರಿ ಮದುವೆ ಸಮಾರಂಭಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ಹಾಗಾಗಿ ತಯಾರಿ ಈಗಲೇ ಜೋರಾಗಿದೆ. ಮದುವೆ ಹೇಗೆ ನಡೆಯಬೇಕು ಎಂದು ಈ ಸ್ಟಾರ್​ ಜೋಡಿ ನಿರ್ಧರಿಸಿದೆ. ಅದೇನೋ ಸರಿ, ಆದರೆ ಇವರ ಮದುವೆಯಿಂದಾಗಿ ಬೇರೆ ಸೆಲೆಬ್ರಿಟಿಗಳಿಗೆ ತೊಂದರೆ ಆಗುತ್ತಿದೆ. ಮದುವೆ ಮುಗಿಯುವವರೆಗೂ ಜೈಪುರದಲ್ಲಿ ಬಾಡಿಗೆ ಕಾರುಗಳ ಅಭಾವ ಉಂಟಾಗಲಿದೆ!

ಹೌದು, ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರನ್ನೂ ಮದುವೆ ಆಹ್ವಾನಿಸಲಾಗುತ್ತಿದೆ. ಮುಂಬೈ, ದೆಹಲಿ ಮುಂತಾದ ನಗರಗಳಿಂದ ಸ್ನೇಹಿತರು ಜೈಪುರಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರ ಓಡಾಟಕ್ಕಾಗಿ ಜೈಪುರದಲ್ಲಿ ಇರುವ ಎಲ್ಲ ಐಷಾರಾಮಿ ಬಾಡಿಗೆ ಕಾರುಗಳನ್ನು ಈಗಲೇ ಬುಕ್​ ಮಾಡಲಾಗಿದೆ. ಮದುವೆ ನಡೆಯುವ ದಿನಾಂಕಗಳು ಮಾತ್ರವಲ್ಲದೇ ಅದರ ಆಸುಪಾಸಿನ ದಿನಗಳಿಗೂ ಸೇರಿ ಕಾರುಗಳನ್ನು ಮುಂಗಡವಾಗಿ ಬುಕ್​ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಜೈಪುರ ಸುತ್ತಮುತ್ತ ಶೂಟಿಂಗ್​ ಮಾಡುತ್ತಿರುವ ಇತರೆ ಟಿವಿ ಮತ್ತು ಸಿನಿಮಾ ಸೆಲೆಬ್ರಿಟಿಗಳಿಗೆ ಕಾರಿನ ಅಭಾವ ಕಾಡಲಿದೆ ಎಂದು ವರದಿ ಆಗಿದೆ.

ವಿಕ್ಕಿ ಹಾಗೂ ಕತ್ರಿನಾ ಮದುವೆಗೆ ಬಾಲಿವುಡ್ ತಾರೆಯರಾದ ಕಬೀರ್ ಖಾನ್, ರೋಹಿತ್ ಶೆಟ್ಟಿ, ವರುಣ್ ಧವನ್, ನತಾಶಾ ದಲಾಲ್, ಕರಣ್ ಜೋಹರ್ ಮೊದಲಾದವರಿಗೆ ಈಗಾಗಲೇ ಆಹ್ವಾನ ಹೋಗಿದೆಯಂತೆ. ಕತ್ರಿನಾರ ಮಾಜಿ ಗೆಳೆಯ ರಣಬೀರ್​ಗೂ ಆಹ್ವಾನ ಹೋಗಿದ್ದು, ಆಲಿಯಾ ಭಟ್​ರೊಂದಿಗೆ ಅವರೂ ಮದುವೆಗೆ ಹಾಜರಿರಲಿದ್ದಾರೆ. ನಟ ಸಿದ್ಧಾರ್ಥ್ ಮಲ್ಹೋತ್ರಾರಿಗೂ ಆಹ್ವಾನ ಹೋಗಿದ್ದು, ಅವರ ಗೆಳತಿಯೆಂದು ಹೇಳಲಾಗುವ ಕಿಯಾರಾ ಅಡ್ವಾನಿಯೊಂದಿಗೆ ಭಾಗಿಯಾಗಲಿದ್ದಾರೆ. ಈಗಾಗಲೇ ಕುಟುಂಬದವರು ರಾಜಸ್ಥಾನ ತಲುಪಿದ್ದು, ತಯಾರಿ ನಡೆಸುತ್ತಿದ್ದಾರೆ. ದೀಪಾವಳಿಯ ಸಮಯದಲ್ಲಿ ಕತ್ರಿನಾ ಹಾಗೂ ವಿಕ್ಕಿ ಕೌಶಲ್ ಎಂಗೇಜ್​ಮೆಂಟ್ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಕತ್ರಿನಾ ಮದುವೆಯಾಗುತ್ತಿರುವ ಹೋಟೆಲ್​ನಲ್ಲಿ ಒಂದು ರಾತ್ರಿ ಕಳೆಯಲು ಐದು ಲಕ್ಷ ಪಾವತಿಸಬೇಕು

2 ಬಾರಿ ಅಕ್ಷಯ್​ ಕುಮಾರ್​ ಕೆನ್ನೆಗೆ ಬಾರಿಸಿದ ಕತ್ರಿನಾ ಕೈಫ್​; ಇದನ್ನೆಲ್ಲ ಅಕ್ಕಿ ಸಹಿಸಿಕೊಂಡಿದ್ದೇಕೆ?

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು